<p>ಮೈಸೂರು: ‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ನವೀನ್ಕುಮಾರ್ ದಲಿತ ಎಂಬ ಒಂದೇ ಕಾರಣಕ್ಕೆ ಅವರನ್ನು ಬಲಿಪಶು ಮಾಡುವ ಪ್ರಯತ್ನ ನಡೆದಿದೆ. ಈ ಧೋರಣೆ ಮುಂದುವರಿದಲ್ಲಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಮಾಜಿ ಮೇಯರ್ ಪುರುಷೋತ್ತಮ್ ಎಚ್ಚರಿಸಿದರು.</p>.<p>‘ನವೀನ್ಕುಮಾರ್ ಕುಲಸಚಿವರಾಗಿ ಏಳೆಂಟು ತಿಂಗಳಾಗಿದೆ. ಈಚೆಗೆ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಒಂದರಲ್ಲಿ ಅವರ ಪಾತ್ರ ಇಲ್ಲದೇ ಇದ್ದರೂ ಅವರನ್ನು ಸಿಲುಕಿಸುವ ಪ್ರಯತ್ನ ನಡೆದಿದೆ. ವರ್ಗಾವಣೆಯ ಯತ್ನ ನಡೆದಿದೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ಮುಕ್ತ ವಿವಿ ಆಡಳಿತವನ್ನು ಸದಾ ಒಂದು ವರ್ಗವೇ ತನ್ನ ಕೈಯ್ಯಲ್ಲಿ ಇರಿಸಿಕೊಂಡಿದೆ. ಇಲ್ಲಿ ಜಾತಿ ಆಡಳಿತ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದರು.</p>.<p>‘ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪ್ರತಾಪ ಸಿಂಹರ ಟೀಕೆ ಆನೆ ನೋಡಿ ನಾಯಿ ಬೊಗಳಿದಂತೆ’ ಎಂದು ಲೇವಡಿ ಮಾಡಿದ ಅವರು, ‘ಖರ್ಗೆ ಅಂತಹ ನಾಯಕನ ಬಗ್ಗೆ ಮಾತನಾಡುವ ನೈತಿಕತೆ ಯಾರಿಗೂ ಇಲ್ಲ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-36-470159219</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ನವೀನ್ಕುಮಾರ್ ದಲಿತ ಎಂಬ ಒಂದೇ ಕಾರಣಕ್ಕೆ ಅವರನ್ನು ಬಲಿಪಶು ಮಾಡುವ ಪ್ರಯತ್ನ ನಡೆದಿದೆ. ಈ ಧೋರಣೆ ಮುಂದುವರಿದಲ್ಲಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಮಾಜಿ ಮೇಯರ್ ಪುರುಷೋತ್ತಮ್ ಎಚ್ಚರಿಸಿದರು.</p>.<p>‘ನವೀನ್ಕುಮಾರ್ ಕುಲಸಚಿವರಾಗಿ ಏಳೆಂಟು ತಿಂಗಳಾಗಿದೆ. ಈಚೆಗೆ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಒಂದರಲ್ಲಿ ಅವರ ಪಾತ್ರ ಇಲ್ಲದೇ ಇದ್ದರೂ ಅವರನ್ನು ಸಿಲುಕಿಸುವ ಪ್ರಯತ್ನ ನಡೆದಿದೆ. ವರ್ಗಾವಣೆಯ ಯತ್ನ ನಡೆದಿದೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ಮುಕ್ತ ವಿವಿ ಆಡಳಿತವನ್ನು ಸದಾ ಒಂದು ವರ್ಗವೇ ತನ್ನ ಕೈಯ್ಯಲ್ಲಿ ಇರಿಸಿಕೊಂಡಿದೆ. ಇಲ್ಲಿ ಜಾತಿ ಆಡಳಿತ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದರು.</p>.<p>‘ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪ್ರತಾಪ ಸಿಂಹರ ಟೀಕೆ ಆನೆ ನೋಡಿ ನಾಯಿ ಬೊಗಳಿದಂತೆ’ ಎಂದು ಲೇವಡಿ ಮಾಡಿದ ಅವರು, ‘ಖರ್ಗೆ ಅಂತಹ ನಾಯಕನ ಬಗ್ಗೆ ಮಾತನಾಡುವ ನೈತಿಕತೆ ಯಾರಿಗೂ ಇಲ್ಲ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-36-470159219</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>