<p><strong>ಮೈಸೂರು:</strong> ನಗರದ ವಿವಿಧೆಡೆ ಒತ್ತುವರಿಯಾಗಿದ್ದ ಸುಮಾರು ₹ 15.4 ಕೋಟಿ ಮೌಲ್ಯದ ಜಮೀನನ್ನು ಮಂಗಳವಾರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) ತನ್ನ ವಶಕ್ಕೆ ಪಡೆದುಕೊಂಡಿದೆ.</p>.<p>ಟಿ.ಕೆ.ಬಡಾವಣೆಯಲ್ಲಿ (ನಿವೇಶನ ಸಂಖ್ಯೆ 777) ₹ 1.70 ಕೋಟಿ ಮೌಲ್ಯದ 40x60 ಅಡಿ ವಿಸ್ತೀರ್ಣದ ಮೂಲೆ ನಿವೇಶನವನ್ನು ವಶಕ್ಕೆ ಪಡೆಯಲಾಗಿದೆ. ದಟ್ಟಗಳ್ಳಿ ಸರ್ವೆ ಸಂಖ್ಯೆ 114 ಮತ್ತು 115ರಲ್ಲಿ ಪ್ರಾಧಿಕಾರಕ್ಕೆ ಸೇರಿದ ಸುಮಾರು ₹ 12 ಕೋಟಿ ಮೌಲ್ಯದ 50x80 ಅಡಿ ವಿಸ್ತೀರ್ಣದ ಮೂರು ನಿವೇಶನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.</p>.<p>ಅಲ್ಲದೇ, ಟಿ.ಕೆ.ಬಡಾವಣೆಯ ಮತ್ತೊಂದು ಕಡೆ (ನಿವೇಶನ ಸಂಖ್ಯೆ 719/ಎ) ಒತ್ತುವರಿ ಆಗಿದ್ದ ₹ 1.70 ಕೋಟಿ ಮೌಲ್ಯದ 40x60 ಅಡಿ ವಿಸ್ತೀರ್ಣದ ನಿವೇಶನವನ್ನು ಪ್ರಾಧಿಕಾರವು ತನ್ನ ಸುಪರ್ದಿಗೆ ಪಡೆದುಕೊಂಡಿದೆ.</p>.<p>‘ಪ್ರಾಧಿಕಾರಕ್ಕೆ ಸೇರಿದ ಜಮೀನನ್ನು ಒತ್ತುವರಿ ಮಾಡಿಕೊಂಡು, ತಂತಿ ಬೇಲಿ ಹಾಕಿ ಶೆಡ್ ಆಗಿ ಮಾಡಿಕೊಂಡಿದ್ದರು. ಅವುಗಳನ್ನು ತೆರವುಗೊಳಿಸಿ ವಶಕ್ಕೆ ಪಡೆಯಲಾಗಿದೆ. ಕಳೆದ ಆರು ತಿಂಗಳಲ್ಲಿ ಸುಮಾರು ₹ 150 ಕೋಟಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಾಚರಣೆ ಮುಂದುವರಿಯಲಿದೆ. ಒತ್ತುವರಿದಾರರ ಮೇಲೆ ಕ್ರಮ ಜರುಗಿಸಲಾಗುವುದು. ವಶಕ್ಕೆ ಪಡೆದ ನಿವೇಶನಗಳನ್ನು ಹರಾಜಿಗೆ ಹಾಕಲಾಗುವುದು’ ಎಂದು ಮುಡಾ ಆಯುಕ್ತ ಡಿ.ಬಿ.ನಟೇಶ್ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>ತೆರವು ಕಾರ್ಯಾಚರಣೆಯಲ್ಲಿ ಡಿ.ಬಿ.ನಟೇಶ್, ಅಧೀಕ್ಷಕ ಎಂಜಿನಿಯರ್ ಶಂಕರ್, ವಲಯ ಅಧಿಕಾರಿ ಕಿರಣ್, ಸಹಾಯಕ ಎಂಜಿನಿಯರ್ ರವಿಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಗರದ ವಿವಿಧೆಡೆ ಒತ್ತುವರಿಯಾಗಿದ್ದ ಸುಮಾರು ₹ 15.4 ಕೋಟಿ ಮೌಲ್ಯದ ಜಮೀನನ್ನು ಮಂಗಳವಾರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) ತನ್ನ ವಶಕ್ಕೆ ಪಡೆದುಕೊಂಡಿದೆ.</p>.<p>ಟಿ.ಕೆ.ಬಡಾವಣೆಯಲ್ಲಿ (ನಿವೇಶನ ಸಂಖ್ಯೆ 777) ₹ 1.70 ಕೋಟಿ ಮೌಲ್ಯದ 40x60 ಅಡಿ ವಿಸ್ತೀರ್ಣದ ಮೂಲೆ ನಿವೇಶನವನ್ನು ವಶಕ್ಕೆ ಪಡೆಯಲಾಗಿದೆ. ದಟ್ಟಗಳ್ಳಿ ಸರ್ವೆ ಸಂಖ್ಯೆ 114 ಮತ್ತು 115ರಲ್ಲಿ ಪ್ರಾಧಿಕಾರಕ್ಕೆ ಸೇರಿದ ಸುಮಾರು ₹ 12 ಕೋಟಿ ಮೌಲ್ಯದ 50x80 ಅಡಿ ವಿಸ್ತೀರ್ಣದ ಮೂರು ನಿವೇಶನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.</p>.<p>ಅಲ್ಲದೇ, ಟಿ.ಕೆ.ಬಡಾವಣೆಯ ಮತ್ತೊಂದು ಕಡೆ (ನಿವೇಶನ ಸಂಖ್ಯೆ 719/ಎ) ಒತ್ತುವರಿ ಆಗಿದ್ದ ₹ 1.70 ಕೋಟಿ ಮೌಲ್ಯದ 40x60 ಅಡಿ ವಿಸ್ತೀರ್ಣದ ನಿವೇಶನವನ್ನು ಪ್ರಾಧಿಕಾರವು ತನ್ನ ಸುಪರ್ದಿಗೆ ಪಡೆದುಕೊಂಡಿದೆ.</p>.<p>‘ಪ್ರಾಧಿಕಾರಕ್ಕೆ ಸೇರಿದ ಜಮೀನನ್ನು ಒತ್ತುವರಿ ಮಾಡಿಕೊಂಡು, ತಂತಿ ಬೇಲಿ ಹಾಕಿ ಶೆಡ್ ಆಗಿ ಮಾಡಿಕೊಂಡಿದ್ದರು. ಅವುಗಳನ್ನು ತೆರವುಗೊಳಿಸಿ ವಶಕ್ಕೆ ಪಡೆಯಲಾಗಿದೆ. ಕಳೆದ ಆರು ತಿಂಗಳಲ್ಲಿ ಸುಮಾರು ₹ 150 ಕೋಟಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಾಚರಣೆ ಮುಂದುವರಿಯಲಿದೆ. ಒತ್ತುವರಿದಾರರ ಮೇಲೆ ಕ್ರಮ ಜರುಗಿಸಲಾಗುವುದು. ವಶಕ್ಕೆ ಪಡೆದ ನಿವೇಶನಗಳನ್ನು ಹರಾಜಿಗೆ ಹಾಕಲಾಗುವುದು’ ಎಂದು ಮುಡಾ ಆಯುಕ್ತ ಡಿ.ಬಿ.ನಟೇಶ್ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>ತೆರವು ಕಾರ್ಯಾಚರಣೆಯಲ್ಲಿ ಡಿ.ಬಿ.ನಟೇಶ್, ಅಧೀಕ್ಷಕ ಎಂಜಿನಿಯರ್ ಶಂಕರ್, ವಲಯ ಅಧಿಕಾರಿ ಕಿರಣ್, ಸಹಾಯಕ ಎಂಜಿನಿಯರ್ ರವಿಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>