<p>ಮೈಸೂರು: ತಾಲ್ಲೂಕಿನ ವರುಣ ಹೋಬಳಿಯ ಪಿಲ್ಲಹಳ್ಳಿ ಗ್ರಾಮದ ಗಿರಿಬೆಟ್ಟ ಕೆರೆಗೆ ಹೊಂದಿಕೊಂಡಂತಿರುವ ಕೃಷಿ ಜಮೀನುಗಳಿಗೆ ಶನಿವಾರ ರಾತ್ರಿ ಸುರಿದ ಭಾರಿ ಮಳೆ ಭಾರಿ ಆಘಾತ ನೀಡಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಾಣಿಜ್ಯ ಬೆಳೆಗಳು ನಾಶವಾಗಿದ್ದು, ರೈತರು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.</p>.<p>ಬಿರುಗಾಳಿ ಸಹಿತ ಸುರಿದ ಮಳೆಯ ಆರ್ಭಟಕ್ಕೆ ಪಿಲ್ಲಹಳ್ಳಿಯ ಸರ್ವೆ ನಂಬರ್ 46/1 ಮತ್ತು 46/2 ರ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ ವ್ಯಾಪಕ ಹಾನಿಯಾಗಿದೆ. ನಿವೃತ್ತ ಅಧಿಕಾರಿ ಜಯವಿಭವಸ್ವಾಮಿ ಅವರ ತೋಟದಲ್ಲಿದ್ದ 5 ಬೃಹತ್ ತೆಂಗಿನ ಮರಗಳು ಹಾಗೂ 25ಕ್ಕೂ ಹೆಚ್ಚು ಅಡಿಕೆ ಮರಗಳು ಬುಡಸಮೇತ ಧರೆಗುರುಳಿವೆ. ಕಟಾವಿಗೆ ಬಂದಿದ್ದ ಇಡೀ ಬಾಳೆ ತೋಟ ಸಂಪೂರ್ಣವಾಗಿ ನೆಲಕಚ್ಚಿದೆ.</p>.<p>ಸುತ್ತಲಿನ ಇನ್ನೂ ಕೆಲವು ಜಮೀನುಗಳಲ್ಲಿ ಬೆಳೆ ಹಾನಿ ಸಂಭವಿಸಿದೆ. ರಸ್ತೆ ಬದಿಯ ವಿದ್ಯುತ್ ಪರಿವರ್ತಕ (ಟ್ರಾನ್ಸ್ಫಾರ್ಮರ್) ಕಂಬಗಳು ಮುರಿದು ಬಿದ್ದಿದ್ದು, ಮರಗಳು ನೆಲಕ್ಕೆ ಉರುಳಿವೆ. ಇದರಿಂದಾಗಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ.</p>.<p>ಮಳೆಯಿಂದಾಗಿ ಇಷ್ಟೊಂದು ದೊಡ್ಡಪ್ರಮಾಣದ ಆಸ್ತಿ ಮತ್ತು ಬೆಳೆ ನಷ್ಟ ಸಂಭವಿಸಿದ್ದರೂ, ಕಂದಾಯ ಇಲಾಖೆಯಾಗಲಿ ಅಥವಾ ತೋಟಗಾರಿಕಾ ಇಲಾಖೆಯ ಅಧಿಕಾರಿಗಳಾಗಲಿ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.</p>.<p>ತಕ್ಷಣವೇ ಜಿಲ್ಲಾಡಳಿತ ಮತ್ತು ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಬಂದು ಜಂಟಿ ಸಮೀಕ್ಷೆ (ಮಹಜರು) ನಡೆಸಬೇಕು. ಹಾನಿಗೆ ಒಳಗಾದ ಟ್ರಾನ್ಸ್ಫಾರ್ಮರ್ ಹಾಗೂ ಕಂಬಗಳನ್ನು ದುರಸ್ತಿಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-38-1917174167</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ತಾಲ್ಲೂಕಿನ ವರುಣ ಹೋಬಳಿಯ ಪಿಲ್ಲಹಳ್ಳಿ ಗ್ರಾಮದ ಗಿರಿಬೆಟ್ಟ ಕೆರೆಗೆ ಹೊಂದಿಕೊಂಡಂತಿರುವ ಕೃಷಿ ಜಮೀನುಗಳಿಗೆ ಶನಿವಾರ ರಾತ್ರಿ ಸುರಿದ ಭಾರಿ ಮಳೆ ಭಾರಿ ಆಘಾತ ನೀಡಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಾಣಿಜ್ಯ ಬೆಳೆಗಳು ನಾಶವಾಗಿದ್ದು, ರೈತರು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.</p>.<p>ಬಿರುಗಾಳಿ ಸಹಿತ ಸುರಿದ ಮಳೆಯ ಆರ್ಭಟಕ್ಕೆ ಪಿಲ್ಲಹಳ್ಳಿಯ ಸರ್ವೆ ನಂಬರ್ 46/1 ಮತ್ತು 46/2 ರ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ ವ್ಯಾಪಕ ಹಾನಿಯಾಗಿದೆ. ನಿವೃತ್ತ ಅಧಿಕಾರಿ ಜಯವಿಭವಸ್ವಾಮಿ ಅವರ ತೋಟದಲ್ಲಿದ್ದ 5 ಬೃಹತ್ ತೆಂಗಿನ ಮರಗಳು ಹಾಗೂ 25ಕ್ಕೂ ಹೆಚ್ಚು ಅಡಿಕೆ ಮರಗಳು ಬುಡಸಮೇತ ಧರೆಗುರುಳಿವೆ. ಕಟಾವಿಗೆ ಬಂದಿದ್ದ ಇಡೀ ಬಾಳೆ ತೋಟ ಸಂಪೂರ್ಣವಾಗಿ ನೆಲಕಚ್ಚಿದೆ.</p>.<p>ಸುತ್ತಲಿನ ಇನ್ನೂ ಕೆಲವು ಜಮೀನುಗಳಲ್ಲಿ ಬೆಳೆ ಹಾನಿ ಸಂಭವಿಸಿದೆ. ರಸ್ತೆ ಬದಿಯ ವಿದ್ಯುತ್ ಪರಿವರ್ತಕ (ಟ್ರಾನ್ಸ್ಫಾರ್ಮರ್) ಕಂಬಗಳು ಮುರಿದು ಬಿದ್ದಿದ್ದು, ಮರಗಳು ನೆಲಕ್ಕೆ ಉರುಳಿವೆ. ಇದರಿಂದಾಗಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ.</p>.<p>ಮಳೆಯಿಂದಾಗಿ ಇಷ್ಟೊಂದು ದೊಡ್ಡಪ್ರಮಾಣದ ಆಸ್ತಿ ಮತ್ತು ಬೆಳೆ ನಷ್ಟ ಸಂಭವಿಸಿದ್ದರೂ, ಕಂದಾಯ ಇಲಾಖೆಯಾಗಲಿ ಅಥವಾ ತೋಟಗಾರಿಕಾ ಇಲಾಖೆಯ ಅಧಿಕಾರಿಗಳಾಗಲಿ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.</p>.<p>ತಕ್ಷಣವೇ ಜಿಲ್ಲಾಡಳಿತ ಮತ್ತು ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಬಂದು ಜಂಟಿ ಸಮೀಕ್ಷೆ (ಮಹಜರು) ನಡೆಸಬೇಕು. ಹಾನಿಗೆ ಒಳಗಾದ ಟ್ರಾನ್ಸ್ಫಾರ್ಮರ್ ಹಾಗೂ ಕಂಬಗಳನ್ನು ದುರಸ್ತಿಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-38-1917174167</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>