<p>ಮೈಸೂರು: ಯುದ್ಧ ನಿಲ್ಲಿಸಿ, ಗ್ಯಾಸ್ ಸಿಲಿಂಡರ್ ಕೊಡಿಸುವಂತೆ ಒತ್ತಾಯಿಸಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ರಾಮನಗರದಿಂದ ಮೈಸೂರಿನವರೆಗೆ ಮಂಗಳವಾರ ಈಡುಗಾಯಿ ಚಳವಳಿ ನಡೆಸಿದರು.</p>.<p>ನಗರದ ಹಾರ್ಡಿಂಜ್ ವೃತ್ತದ ಬಳಿ ಈಡುಗಾಯಿ ಒಡೆದು, ‘ಇರಾನ್ ಮೇಲಿನ ಅಮೆರಿಕ ಹಾಗೂ ಇಸ್ರೇಲ್ ದಾಳಿಯಿಂದ ಮಾನವ ಕುಲವೇ ಬೆಚ್ಚಿ ಬಿದ್ದಿದೆ. ಇದರಿಂದ ತೀವ್ರ ಪರಿಣಾಮ ಬೀರಿ, ಜನರು ಅಡುಗೆ ಮಾಡಲು ಗ್ಯಾಸ್ ಸಿಲಿಂಡರ್ ಇಲ್ಲದೇ ಪರದಾಡುತ್ತಿದ್ದಾರೆ. ಈ ಕೂಡಲೇ ಯುದ್ಧ ನಿಲ್ಲಿಸಿ, ಶಾಂತಿ ಸ್ಥಾಪನೆಯಾಗಲಿ’ ಎಂದು ಒತ್ತಾಯಿಸಿದರು.</p>.<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್, ‘ಗ್ಯಾಸ್ ಸಿಲಿಂಡರ್ ಇಲ್ಲದೇ ಆಟೊ ಚಾಲಕರು, ಹೋಟೆಲ್ನವರು, ಬೀದಿ ಬದಿ ವ್ಯಾಪಾರಿಗಳು ಪರದಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಸಮರ್ಪಕವಾಗಿ ಗ್ಯಾಸ್ ಸಿಲಿಂಡರ್ಗಳ ವ್ಯವಸ್ಥೆ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಸಚಿವರು ಮೊದಲು ಸೌದೆ ಒಲೆಯಲ್ಲಿ ಅಡುಗೆ ಮಾಡಿದರೆ ಜನರ ಕಷ್ಟ ಅರಿವಾಗುತ್ತದೆ. ಸಮಸ್ಯೆ ಬಗೆಹರಿಸದಿದ್ದರೆ ಸಿಎಂ ಸಿದ್ದರಾಮಯ್ಯ ಮನೆಗೆ ನುಗ್ಗುತ್ತೇನೆ. ಇಡೀ ರಾಜ್ಯದಲ್ಲಿ ಆಟೊ ಚಾಲಕರು ನೋವು ಪಡುತ್ತಿದ್ದಾರೆ. ಈ ಚಾಲಕರಿಗೆ ಪ್ರತಿ ತಿಂಗಳು ₹15 ಸಾವಿರ ಕೊಡಿ. 15 ದಿನದೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಕರ್ನಾಟಕ ಬಂದ್ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>ಪಾರ್ಥಸಾರಥಿ, ಮೂಗೂರು ನಂಜುಂಡಸ್ವಾಮಿ, ತೇಜಸ್ ಲೋಕೇಶ್ಗೌಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-37-1006550420</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಯುದ್ಧ ನಿಲ್ಲಿಸಿ, ಗ್ಯಾಸ್ ಸಿಲಿಂಡರ್ ಕೊಡಿಸುವಂತೆ ಒತ್ತಾಯಿಸಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ರಾಮನಗರದಿಂದ ಮೈಸೂರಿನವರೆಗೆ ಮಂಗಳವಾರ ಈಡುಗಾಯಿ ಚಳವಳಿ ನಡೆಸಿದರು.</p>.<p>ನಗರದ ಹಾರ್ಡಿಂಜ್ ವೃತ್ತದ ಬಳಿ ಈಡುಗಾಯಿ ಒಡೆದು, ‘ಇರಾನ್ ಮೇಲಿನ ಅಮೆರಿಕ ಹಾಗೂ ಇಸ್ರೇಲ್ ದಾಳಿಯಿಂದ ಮಾನವ ಕುಲವೇ ಬೆಚ್ಚಿ ಬಿದ್ದಿದೆ. ಇದರಿಂದ ತೀವ್ರ ಪರಿಣಾಮ ಬೀರಿ, ಜನರು ಅಡುಗೆ ಮಾಡಲು ಗ್ಯಾಸ್ ಸಿಲಿಂಡರ್ ಇಲ್ಲದೇ ಪರದಾಡುತ್ತಿದ್ದಾರೆ. ಈ ಕೂಡಲೇ ಯುದ್ಧ ನಿಲ್ಲಿಸಿ, ಶಾಂತಿ ಸ್ಥಾಪನೆಯಾಗಲಿ’ ಎಂದು ಒತ್ತಾಯಿಸಿದರು.</p>.<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್, ‘ಗ್ಯಾಸ್ ಸಿಲಿಂಡರ್ ಇಲ್ಲದೇ ಆಟೊ ಚಾಲಕರು, ಹೋಟೆಲ್ನವರು, ಬೀದಿ ಬದಿ ವ್ಯಾಪಾರಿಗಳು ಪರದಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಸಮರ್ಪಕವಾಗಿ ಗ್ಯಾಸ್ ಸಿಲಿಂಡರ್ಗಳ ವ್ಯವಸ್ಥೆ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಸಚಿವರು ಮೊದಲು ಸೌದೆ ಒಲೆಯಲ್ಲಿ ಅಡುಗೆ ಮಾಡಿದರೆ ಜನರ ಕಷ್ಟ ಅರಿವಾಗುತ್ತದೆ. ಸಮಸ್ಯೆ ಬಗೆಹರಿಸದಿದ್ದರೆ ಸಿಎಂ ಸಿದ್ದರಾಮಯ್ಯ ಮನೆಗೆ ನುಗ್ಗುತ್ತೇನೆ. ಇಡೀ ರಾಜ್ಯದಲ್ಲಿ ಆಟೊ ಚಾಲಕರು ನೋವು ಪಡುತ್ತಿದ್ದಾರೆ. ಈ ಚಾಲಕರಿಗೆ ಪ್ರತಿ ತಿಂಗಳು ₹15 ಸಾವಿರ ಕೊಡಿ. 15 ದಿನದೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಕರ್ನಾಟಕ ಬಂದ್ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>ಪಾರ್ಥಸಾರಥಿ, ಮೂಗೂರು ನಂಜುಂಡಸ್ವಾಮಿ, ತೇಜಸ್ ಲೋಕೇಶ್ಗೌಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-37-1006550420</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>