<p><strong>ಮೈಸೂರು</strong>: ‘ಜಿಲ್ಲೆಯಲ್ಲಿ ಎಸ್ಐಆರ್ (ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ)ಗೆ ಮುನ್ನ ‘ಮ್ಯಾಪಿಂಗ್ ಪ್ರಕ್ರಿಯೆ’ಯನ್ನು ಶೇ 100ರಷ್ಟು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಅರ್ಹ ಮತದಾರರ ಹೆಸರು ಪಟ್ಟಿಯಿಂದ ಬಿಟ್ಟು ಹೋಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ತಿಳಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಎಸ್ಐಆರ್ ಭಾಗವಾದ ‘ಮತದಾರರ ಮ್ಯಾಪಿಂಗ್’ ಕುರಿತು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 19ರವರೆಗೆ ಮ್ಯಾಪಿಂಗ್ ನಡೆಯಲಿದೆ. 20ರಿಂದ ಎಸ್ಐಆರ್ ಆರಂಭವಾಗಲಿದೆ. ಮನೆ ಮನೆಗೆ ತೆರಳಿ ಪರಿಶೀಲಿಸಿ ಮ್ಯಾಪಿಂಗ್ಗೆ ಸೇರ್ಪಡೆಗೊಳಿಸುವಂತೆ ಎಆರ್ಒಗಳಿಗೆ ಸೂಚಿಸಲಾಗುವುದು. ಎಆರ್ಒಗಳು ಕ್ಷೇತ್ರದ ವ್ಯಾಪ್ತಿಗೆ ಬರುವ ಬಿಎಲ್ಒಗಳ ಜೊತೆ ಸೇರಿ ಈ ಕೆಲಸವನ್ನು ಶೇ 100ರಷ್ಟು ಮಾಡುವರು’ ಎಂದು ತಿಳಿಸಿದರು.</p>.<p>ಪರಿಶೀಲಿಸಿ: ‘ಇನಿಷಿಯಲ್ ವ್ಯತ್ಯಾಸ, ಹೆಸರಿನಲ್ಲಿ ಒಂದು ಅಕ್ಷರ ಕಡಿಮೆ ಅಥವಾ ಹೆಚ್ಚು ಇದ್ದರೆ ಮ್ಯಾಪಿಂಗ್ ಸಮಸ್ಯೆ ಆಗುವುದಿಲ್ಲ. ಈಗ ಮ್ಯಾಪಿಂಗ್ ಕಾರ್ಯವು ಶೇ.88ರಷ್ಟು ಆಗಿದೆ. ಆ ಕೆಲಸ ಮುಗಿದ ಮೇಲೆ ಪ್ರತಿಯೊಬ್ಬರಿಗೂ ವೋಟರ್ ಎನ್ಯುಮರೇಷನ್ ಫಾರಂಗಳನ್ನು (ಅರ್ಜಿ ನಮೂನೆ) ಕೊಡಲಾಗುವುದು. ಆಗ ಮತ್ತೊಮ್ಮೆ ಪರಿಶೀಲಿಸಿ ಸೇರ್ಪಡೆ ಮಾಡಿಸಲು ಅವಕಾಶವಿದೆ’ ಎಂದು ಹೇಳಿದರು.</p>.<p>‘ಅರ್ಹರನ್ನು ಪಟ್ಟಿಯಿಂದ ಕೈಬಿಡದಂತೆ ಗಮನಹರಿಸಲು ಎಲ್ಲಾ ಎಆರ್ಒಗಳಿಗೆ ಸೂಚಿಸಲಾಗಿದೆ. ಆದಾಗ್ಯೂ, ಕೆಲವು ವ್ಯತ್ಯಾಸಗಳು ಕಂಡುಬಂದಲ್ಲಿ ನೇರವಾಗಿ ನನ್ನ ಗಮನಕ್ಕೆ ತಂದರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>3,37,961 ಮಂದಿ ಮತದಾರರ ಹೆಸರು ಮ್ಯಾಪಿಂಗ್ಗೆ ಬಾಕಿ ಇರುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು. ರಾಜಕೀಯ ಪಕ್ಷಗಳ ಮುಖಂಡರ ಅಭಿಪ್ರಾಯಗಳನ್ನು ದಾಖಲಿಸಿಕೊಳ್ಳಲಾಯಿತು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಎಂಡಿಎ ಆಯುಕ್ತ ಕೆ.ಆರ್.ರಕ್ಷಿತ್, ಕಾರ್ಯದರ್ಶಿ ಜಾನ್ಸನ್, ನಗರಪಾಲಿಕೆ ಹೆಚ್ಚುವರಿ ಆಯುಕ್ತ ಜಿ.ಎಸ್.ಸೋಮಶೇಖರ್, ಉಪ ವಿಭಾಗಾಧಿಕಾರಿ ಆಶಪ್ಪ, ತಹಶೀಲ್ದಾರ್ ಕೆ.ಎಂ.ಮಹೇಶ್ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-39-351047178</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಜಿಲ್ಲೆಯಲ್ಲಿ ಎಸ್ಐಆರ್ (ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ)ಗೆ ಮುನ್ನ ‘ಮ್ಯಾಪಿಂಗ್ ಪ್ರಕ್ರಿಯೆ’ಯನ್ನು ಶೇ 100ರಷ್ಟು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಅರ್ಹ ಮತದಾರರ ಹೆಸರು ಪಟ್ಟಿಯಿಂದ ಬಿಟ್ಟು ಹೋಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ತಿಳಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಎಸ್ಐಆರ್ ಭಾಗವಾದ ‘ಮತದಾರರ ಮ್ಯಾಪಿಂಗ್’ ಕುರಿತು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 19ರವರೆಗೆ ಮ್ಯಾಪಿಂಗ್ ನಡೆಯಲಿದೆ. 20ರಿಂದ ಎಸ್ಐಆರ್ ಆರಂಭವಾಗಲಿದೆ. ಮನೆ ಮನೆಗೆ ತೆರಳಿ ಪರಿಶೀಲಿಸಿ ಮ್ಯಾಪಿಂಗ್ಗೆ ಸೇರ್ಪಡೆಗೊಳಿಸುವಂತೆ ಎಆರ್ಒಗಳಿಗೆ ಸೂಚಿಸಲಾಗುವುದು. ಎಆರ್ಒಗಳು ಕ್ಷೇತ್ರದ ವ್ಯಾಪ್ತಿಗೆ ಬರುವ ಬಿಎಲ್ಒಗಳ ಜೊತೆ ಸೇರಿ ಈ ಕೆಲಸವನ್ನು ಶೇ 100ರಷ್ಟು ಮಾಡುವರು’ ಎಂದು ತಿಳಿಸಿದರು.</p>.<p>ಪರಿಶೀಲಿಸಿ: ‘ಇನಿಷಿಯಲ್ ವ್ಯತ್ಯಾಸ, ಹೆಸರಿನಲ್ಲಿ ಒಂದು ಅಕ್ಷರ ಕಡಿಮೆ ಅಥವಾ ಹೆಚ್ಚು ಇದ್ದರೆ ಮ್ಯಾಪಿಂಗ್ ಸಮಸ್ಯೆ ಆಗುವುದಿಲ್ಲ. ಈಗ ಮ್ಯಾಪಿಂಗ್ ಕಾರ್ಯವು ಶೇ.88ರಷ್ಟು ಆಗಿದೆ. ಆ ಕೆಲಸ ಮುಗಿದ ಮೇಲೆ ಪ್ರತಿಯೊಬ್ಬರಿಗೂ ವೋಟರ್ ಎನ್ಯುಮರೇಷನ್ ಫಾರಂಗಳನ್ನು (ಅರ್ಜಿ ನಮೂನೆ) ಕೊಡಲಾಗುವುದು. ಆಗ ಮತ್ತೊಮ್ಮೆ ಪರಿಶೀಲಿಸಿ ಸೇರ್ಪಡೆ ಮಾಡಿಸಲು ಅವಕಾಶವಿದೆ’ ಎಂದು ಹೇಳಿದರು.</p>.<p>‘ಅರ್ಹರನ್ನು ಪಟ್ಟಿಯಿಂದ ಕೈಬಿಡದಂತೆ ಗಮನಹರಿಸಲು ಎಲ್ಲಾ ಎಆರ್ಒಗಳಿಗೆ ಸೂಚಿಸಲಾಗಿದೆ. ಆದಾಗ್ಯೂ, ಕೆಲವು ವ್ಯತ್ಯಾಸಗಳು ಕಂಡುಬಂದಲ್ಲಿ ನೇರವಾಗಿ ನನ್ನ ಗಮನಕ್ಕೆ ತಂದರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>3,37,961 ಮಂದಿ ಮತದಾರರ ಹೆಸರು ಮ್ಯಾಪಿಂಗ್ಗೆ ಬಾಕಿ ಇರುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು. ರಾಜಕೀಯ ಪಕ್ಷಗಳ ಮುಖಂಡರ ಅಭಿಪ್ರಾಯಗಳನ್ನು ದಾಖಲಿಸಿಕೊಳ್ಳಲಾಯಿತು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಎಂಡಿಎ ಆಯುಕ್ತ ಕೆ.ಆರ್.ರಕ್ಷಿತ್, ಕಾರ್ಯದರ್ಶಿ ಜಾನ್ಸನ್, ನಗರಪಾಲಿಕೆ ಹೆಚ್ಚುವರಿ ಆಯುಕ್ತ ಜಿ.ಎಸ್.ಸೋಮಶೇಖರ್, ಉಪ ವಿಭಾಗಾಧಿಕಾರಿ ಆಶಪ್ಪ, ತಹಶೀಲ್ದಾರ್ ಕೆ.ಎಂ.ಮಹೇಶ್ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-39-351047178</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>