<p><strong>ಮೈಸೂರು</strong>: ಜ್ಯೋತಿನಗರದ ಪೌರಕಾರ್ಮಿಕರ ಕಾಲೊನಿಯಲ್ಲಿ ಬಿಜೆಪಿಯಿಂದ ಎಸ್ಐಆರ್ ಕುರಿತು ಮಾಹಿತಿ ನೀಡಲು ಬಿಎಲ್ಎ–2 ಗಳ ಸಭೆ ನಡೆಯಿತು.</p>.<p>ಮಾಜಿ ಮೇಯರ್ ಸಂದೇಶ್ ಸ್ವಾಮಿ ಎಸ್ಐಆರ್ ಪ್ರಕ್ರಿಯೆಯ ಮಹತ್ವ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ವಿವರಿಸಿದರು.</p>.<p>‘25 ವರ್ಷಗಳ ನಂತರ ನಡೆಯುವ ಪ್ರಕ್ರಿಯೆಯ ಭಾಗವಾಗಿ ಚುನಾವಣಾ ಆಯೋಗವು ಈಗಾಗಲೇ ಮ್ಯಾಪಿಂಗ್ ಕಾರ್ಯವನ್ನು ಪೂರ್ಣಗೊಳಿಸಿದ್ದು, ಶೀಘ್ರದಲ್ಲೇ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಪ್ರತಿ ನಾಗರಿಕರೂ ಭಾರತದಲ್ಲಿ ತಮ್ಮ ಹಕ್ಕನ್ನು ಉಳಿಸಿಕೊಳ್ಳಬೇಕಾದರೆ ಮತದಾನದ ಮಹತ್ವವನ್ನು ಅರಿತು, ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಸಹಕರಿಸಬೇಕು’ ಎಂದು ತಿಳಿಸಿದರು.</p>.<p>ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸ್ಮಾರ್ಟ್ ಮಂಜು, ಪ್ರಧಾನ ಕಾರ್ಯದರ್ಶಿ ಪದ್ಮನಾಭ ಹಾಗೂ ಮಂಜು, ಬಿಎಲ್ಎ– 1 ಎಚ್. ಜಿ. ಗಿರಿಧರ್, ನಗರ ಉಪಾಧ್ಯಕ್ಷ ಸು. ಮುರಳಿ, ಸಂಚಾಲಕ ಟಿ. ರಮೇಶ್, ವಾರ್ಡ್ ಅಧ್ಯಕ್ಷ ಶರತ್ ಹಾಗೂ ಸುಬ್ರಮಣಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-39-2112513721</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಜ್ಯೋತಿನಗರದ ಪೌರಕಾರ್ಮಿಕರ ಕಾಲೊನಿಯಲ್ಲಿ ಬಿಜೆಪಿಯಿಂದ ಎಸ್ಐಆರ್ ಕುರಿತು ಮಾಹಿತಿ ನೀಡಲು ಬಿಎಲ್ಎ–2 ಗಳ ಸಭೆ ನಡೆಯಿತು.</p>.<p>ಮಾಜಿ ಮೇಯರ್ ಸಂದೇಶ್ ಸ್ವಾಮಿ ಎಸ್ಐಆರ್ ಪ್ರಕ್ರಿಯೆಯ ಮಹತ್ವ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ವಿವರಿಸಿದರು.</p>.<p>‘25 ವರ್ಷಗಳ ನಂತರ ನಡೆಯುವ ಪ್ರಕ್ರಿಯೆಯ ಭಾಗವಾಗಿ ಚುನಾವಣಾ ಆಯೋಗವು ಈಗಾಗಲೇ ಮ್ಯಾಪಿಂಗ್ ಕಾರ್ಯವನ್ನು ಪೂರ್ಣಗೊಳಿಸಿದ್ದು, ಶೀಘ್ರದಲ್ಲೇ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಪ್ರತಿ ನಾಗರಿಕರೂ ಭಾರತದಲ್ಲಿ ತಮ್ಮ ಹಕ್ಕನ್ನು ಉಳಿಸಿಕೊಳ್ಳಬೇಕಾದರೆ ಮತದಾನದ ಮಹತ್ವವನ್ನು ಅರಿತು, ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಸಹಕರಿಸಬೇಕು’ ಎಂದು ತಿಳಿಸಿದರು.</p>.<p>ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸ್ಮಾರ್ಟ್ ಮಂಜು, ಪ್ರಧಾನ ಕಾರ್ಯದರ್ಶಿ ಪದ್ಮನಾಭ ಹಾಗೂ ಮಂಜು, ಬಿಎಲ್ಎ– 1 ಎಚ್. ಜಿ. ಗಿರಿಧರ್, ನಗರ ಉಪಾಧ್ಯಕ್ಷ ಸು. ಮುರಳಿ, ಸಂಚಾಲಕ ಟಿ. ರಮೇಶ್, ವಾರ್ಡ್ ಅಧ್ಯಕ್ಷ ಶರತ್ ಹಾಗೂ ಸುಬ್ರಮಣಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-39-2112513721</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>