<p>ಮೈಸೂರು: ‘ಆಧುನಿಕ ಯುಗದಲ್ಲಿ ಯುದ್ಧಗಳು ಹಿಂದಿಗಿಂತಲೂ ಹೆಚ್ಚು ವಿನಾಶಕಾರಿಯಾಗಿ ಪರಿಣಮಿಸಿವೆ’ ಎಂದು ಹೆಚ್ಚುವರಿ ಆಯುಕ್ತೆ ಬಿ.ಎನ್.ವೀಣಾ ಹೇಳಿದರು.</p>.<p>ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಮೈಸೂರು ಕನ್ನಡ ವೇದಿಕೆ ಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಂಗಳವಾರ ಆಯೋಜಿಸಿದ್ದ ಸಾಧಕ ಮಹಿಳೆಯರಿಗೆ ‘ಮಹಿಳಾ ರತ್ನ ರಮಾಬಾಯಿ ಡಾ. ಬಿ.ಆರ್.ಅಂಬೇಡ್ಕರ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಮನುಷ್ಯ ಹೆಚ್ಚು ಬುದ್ಧಿವಂತನಾದಷ್ಟೇ ವಿಜ್ಞಾನದ ಬೆಳವಣಿಗೆಗಳನ್ನು ಕೆಟ್ಟ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದ್ದು, ತಂತ್ರಜ್ಞಾನದ ಪ್ರಗತಿಯೂ ಕಾರಣವಾಗಿದೆ’ ಎಂದರು.</p>.<p>‘ಇತಿಹಾಸ ತಿಳಿಯದವನು ಇತಿಹಾಸ ಸೃಷ್ಟಿಸಲಾರ ಎಂಬ ಮಾತು ಸದಾ ಸೂಕ್ತ. ಇದನ್ನು ಎಂದಿಗೂ ಮರೆಯಬಾರದು’ ಎಂದು ಹೇಳಿದರು.</p>.<p>‘ಪ್ರತಿಯೊಬ್ಬ ಪುರುಷನ ಸಾಧನೆ ಹಿಂದೆ ಓರ್ವ ಮಹಿಳೆ ಇರುತ್ತಾಳೆ. ಅಂಬೇಡ್ಕರ್ ಪತ್ನಿ ರಮಾಬಾಯಿ ಹೆಚ್ಚು ಓದಿದವರಲ್ಲ. ಆದರೆ ಅವರ ಸಾಧನೆಗೆ ಕೊಡುಗೆಯೂ ಅಪಾರ. ಇಡೀ ಕುಟುಂಬ ನಿರ್ವಹಿಸುತ್ತ, ಅದರ ಹೊರೆ ಅಂಬೇಡ್ಕರ್ ಮೇಲೆ ಬೀಳದಂತೆ ನೋಡಿಕೊಂಡರು’ ಎಂದರು.</p>.<p>‘ರಮಾಬಾಯಿ ಅವರ ಸಹಕಾರದಿಂದ ಅಂಬೇಡ್ಕರ್ ಅತ್ಯುತ್ತಮ ಸಂವಿಧಾನ ರಚಿಸಲು ಸಾಧ್ಯವಾಯಿತು. ಅದರ ಪರಿಣಾಮವಾಗಿ ಇಂದು ಬಹಳಷ್ಟು ಮಹಿಳೆಯರು ಶೋಷಣೆಯಿಂದ ಹೊರ ಬಂದು, ಅದರ ವಿರುದ್ಧ ಹೋರಾಡುವಂತಾಗಿದೆ’ ಎಂದು ವಿವರಿಸಿದರು.</p>.<p>ಈ ವೇಳೆ ಸಾಧಕ ಮಹಿಳೆಯರಿಗೆ ‘ಮಹಿಳಾ ರತ್ನ ರಮಾಬಾಯಿ ಡಾ.ಬಿ.ಆರ್.ಅಂಬೇಡ್ಕರ್’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ.ಪುಷ್ಪವಲ್ಲಿ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಮಾತನಾಡಿದರು. ಅರುಣ್ಕುಮಾರ್, ರಘುರಾಂ ವಾಜಪೇಯಿ, ಎಸ್.ಬಾಲಕೃಷ್ಣ, ಮನೋಹರ್, ನಾಲಾಬೀದಿ ರವಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-39-311588335</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಆಧುನಿಕ ಯುಗದಲ್ಲಿ ಯುದ್ಧಗಳು ಹಿಂದಿಗಿಂತಲೂ ಹೆಚ್ಚು ವಿನಾಶಕಾರಿಯಾಗಿ ಪರಿಣಮಿಸಿವೆ’ ಎಂದು ಹೆಚ್ಚುವರಿ ಆಯುಕ್ತೆ ಬಿ.ಎನ್.ವೀಣಾ ಹೇಳಿದರು.</p>.<p>ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಮೈಸೂರು ಕನ್ನಡ ವೇದಿಕೆ ಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಂಗಳವಾರ ಆಯೋಜಿಸಿದ್ದ ಸಾಧಕ ಮಹಿಳೆಯರಿಗೆ ‘ಮಹಿಳಾ ರತ್ನ ರಮಾಬಾಯಿ ಡಾ. ಬಿ.ಆರ್.ಅಂಬೇಡ್ಕರ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಮನುಷ್ಯ ಹೆಚ್ಚು ಬುದ್ಧಿವಂತನಾದಷ್ಟೇ ವಿಜ್ಞಾನದ ಬೆಳವಣಿಗೆಗಳನ್ನು ಕೆಟ್ಟ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದ್ದು, ತಂತ್ರಜ್ಞಾನದ ಪ್ರಗತಿಯೂ ಕಾರಣವಾಗಿದೆ’ ಎಂದರು.</p>.<p>‘ಇತಿಹಾಸ ತಿಳಿಯದವನು ಇತಿಹಾಸ ಸೃಷ್ಟಿಸಲಾರ ಎಂಬ ಮಾತು ಸದಾ ಸೂಕ್ತ. ಇದನ್ನು ಎಂದಿಗೂ ಮರೆಯಬಾರದು’ ಎಂದು ಹೇಳಿದರು.</p>.<p>‘ಪ್ರತಿಯೊಬ್ಬ ಪುರುಷನ ಸಾಧನೆ ಹಿಂದೆ ಓರ್ವ ಮಹಿಳೆ ಇರುತ್ತಾಳೆ. ಅಂಬೇಡ್ಕರ್ ಪತ್ನಿ ರಮಾಬಾಯಿ ಹೆಚ್ಚು ಓದಿದವರಲ್ಲ. ಆದರೆ ಅವರ ಸಾಧನೆಗೆ ಕೊಡುಗೆಯೂ ಅಪಾರ. ಇಡೀ ಕುಟುಂಬ ನಿರ್ವಹಿಸುತ್ತ, ಅದರ ಹೊರೆ ಅಂಬೇಡ್ಕರ್ ಮೇಲೆ ಬೀಳದಂತೆ ನೋಡಿಕೊಂಡರು’ ಎಂದರು.</p>.<p>‘ರಮಾಬಾಯಿ ಅವರ ಸಹಕಾರದಿಂದ ಅಂಬೇಡ್ಕರ್ ಅತ್ಯುತ್ತಮ ಸಂವಿಧಾನ ರಚಿಸಲು ಸಾಧ್ಯವಾಯಿತು. ಅದರ ಪರಿಣಾಮವಾಗಿ ಇಂದು ಬಹಳಷ್ಟು ಮಹಿಳೆಯರು ಶೋಷಣೆಯಿಂದ ಹೊರ ಬಂದು, ಅದರ ವಿರುದ್ಧ ಹೋರಾಡುವಂತಾಗಿದೆ’ ಎಂದು ವಿವರಿಸಿದರು.</p>.<p>ಈ ವೇಳೆ ಸಾಧಕ ಮಹಿಳೆಯರಿಗೆ ‘ಮಹಿಳಾ ರತ್ನ ರಮಾಬಾಯಿ ಡಾ.ಬಿ.ಆರ್.ಅಂಬೇಡ್ಕರ್’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ.ಪುಷ್ಪವಲ್ಲಿ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಮಾತನಾಡಿದರು. ಅರುಣ್ಕುಮಾರ್, ರಘುರಾಂ ವಾಜಪೇಯಿ, ಎಸ್.ಬಾಲಕೃಷ್ಣ, ಮನೋಹರ್, ನಾಲಾಬೀದಿ ರವಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-39-311588335</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>