<p>ಮೈಸೂರು: ‘ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ವಾರಕ್ಕೆ 2–3 ದಿನಗಳಿಗೆ ಒಮ್ಮೆಯಾದರೂ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಜಿ.ಟಿ. ದೇವೇಗೌಡ ಸೂಚಿಸಿದರು.</p>.<p>ಇಲ್ಲಿನ ನಗರಪಾಲಿಕೆ ಸಭಾಂಗಣದಲ್ಲಿ ಗುರುವಾರ ಪಾಲಿಕೆ, ಹೂಟಗಳ್ಳಿ ನಗರಸಭೆ, ರಮ್ಮನಹಳ್ಳಿ, ಕಡಕೊಳ, ಬೋಗಾದಿ, ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಹಳೆಯ ಉಂಡುವಾಡಿ ಯೋಜನೆ ಕಾಮಗಾರಿ ಮುಗಿಯುವವರೆಗೆ ಕಬಿನಿ, ಕೆಆರ್ಎಸ್, ಮೇಳಾಪುರ ಯೋಜನೆಯಡಿ ನೀರು ಒದಗಿಸಬೇಕು. ಎಲ್ಲೆಲ್ಲಿ ಸಮಸ್ಯೆ ಇದೆ ಎಂಬುದನ್ನು ಗುರುತಿಸಿ ಟ್ಯಾಂಕರ್ ಮೂಲಕವಾದರೂ ಪೂರೈಸಬೇಕು. ಪೈಪ್ಲೈನ್ ಒಡೆಯುವುದು ಸೇರಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ಕೂಡಲೇ ಪರಿಹರಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>‘ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಶ್ರೀನಗರದ ‘ಡಿ’ ಬ್ಲಾಕ್ನಲ್ಲಿ ಕೊಳವೆಬಾವಿಯಲ್ಲಿ ನೀರು ಬರುತ್ತಿಲ್ಲವೆಂದು ಸಾರ್ವಜನಿಕರು ದೂರು ನೀಡಿದ್ದಾರೆ. ಅಂತೆಯೇ ಶ್ರೀರಾಂಪುರ, ಬೋಗಾದಿ ಭಾಗಗಳಿಂದಲೂ ನೀರಿನ ಸಮಸ್ಯೆ ಕುರಿತು ದೂರು ಬರುತ್ತಿದೆ. ಇತ್ತ ಅಧಿಕಾರಿಗಳು ಗಮನಹರಿಸಬೇಕು. ತಕ್ಷಣವೇ ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ಪುನಶ್ಚೇತನಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಮಾತನಾಡಿ, ‘ಮಳೆ ಅಭಾವದ ಬಗ್ಗೆ ಮುನ್ಸೂಚನೆ ಇದೆ. ಈಗ ಸಮಸ್ಯೆ ಎದುರಾಗದಿದ್ದರೂ ಜೂನ್, ಜುಲೈನಲ್ಲಿ ಸಮಸ್ಯೆ ಕಾಣಿಸಿಕೊಳ್ಳಬಹುದು. ಅದಕ್ಕಾಗಿ ಕೊಳವೆಬಾವಿಗಳನ್ನು ಕೊರೆಸಬೇಕು. ಬತ್ತಿ ಹೋಗಿರುವ ಕೊಳವೆಬಾವಿಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.</p>.<p>‘ಅಗತ್ಯ ಟ್ಯಾಂಕರ್ಗಳ ಖರೀದಿಗೆ ಅನುಮೋದನೆ ನೀಡಲಾಗಿದೆ’ ಎಂದರು.</p>.<p>‘ಕಬಿನಿ ಯೋಜನೆಯಲ್ಲಿ 60 ಎಂಎಲ್ಡಿ ನೀರಿನಲ್ಲಿ 40 ಎಂಎಲ್ಡಿಯನ್ನು ನಗರಪಾಲಿಕೆಗೆ ಹಾಗೂ 20 ಎಂಎಲ್ಡಿಯನ್ನು ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡಿ ಒಪ್ಪಂದ ಆಗಿದೆ. ಆದ್ದರಿಂದ ಸ್ಥಳೀಯ ಸಂಸ್ಥೆಗಳಿಗೆ ಕೊಡಬೇಕಾದ ನೀರನ್ನು ಕೊಡಬೇಕು’ ಎಂದು ಹೇಳಿದರು.</p>.<p>ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಎಸ್ಇ ಮಂಜುನಾಥ್, ಹೂಟಗಳ್ಳಿ ನಗರಸಭೆ ಪೌರಾಯುಕ್ತ ಬಿ.ಎನ್.ಚಂದ್ರಶೇಖರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದಎಚ್.ಎಂ.ಸುರೇಶ್, ಸುಜಯ್, ಮಹೇಶ್, ಎಚ್.ಆರ್.ದೀಪಾ, ಕಾರ್ಯಪಾಲಕ ಎಂಜಿನಿಯರ್ಗಳಾದ ಮೊಹಮ್ಮದ್ ಆಸಿಫ್ ಇಕ್ಬಾಲ್, ಎ.ಎಂ. ಮೊಹಮ್ಮದ್ ಮುಸ್ತಫಾ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-39-544334685</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ವಾರಕ್ಕೆ 2–3 ದಿನಗಳಿಗೆ ಒಮ್ಮೆಯಾದರೂ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಜಿ.ಟಿ. ದೇವೇಗೌಡ ಸೂಚಿಸಿದರು.</p>.<p>ಇಲ್ಲಿನ ನಗರಪಾಲಿಕೆ ಸಭಾಂಗಣದಲ್ಲಿ ಗುರುವಾರ ಪಾಲಿಕೆ, ಹೂಟಗಳ್ಳಿ ನಗರಸಭೆ, ರಮ್ಮನಹಳ್ಳಿ, ಕಡಕೊಳ, ಬೋಗಾದಿ, ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಹಳೆಯ ಉಂಡುವಾಡಿ ಯೋಜನೆ ಕಾಮಗಾರಿ ಮುಗಿಯುವವರೆಗೆ ಕಬಿನಿ, ಕೆಆರ್ಎಸ್, ಮೇಳಾಪುರ ಯೋಜನೆಯಡಿ ನೀರು ಒದಗಿಸಬೇಕು. ಎಲ್ಲೆಲ್ಲಿ ಸಮಸ್ಯೆ ಇದೆ ಎಂಬುದನ್ನು ಗುರುತಿಸಿ ಟ್ಯಾಂಕರ್ ಮೂಲಕವಾದರೂ ಪೂರೈಸಬೇಕು. ಪೈಪ್ಲೈನ್ ಒಡೆಯುವುದು ಸೇರಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ಕೂಡಲೇ ಪರಿಹರಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>‘ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಶ್ರೀನಗರದ ‘ಡಿ’ ಬ್ಲಾಕ್ನಲ್ಲಿ ಕೊಳವೆಬಾವಿಯಲ್ಲಿ ನೀರು ಬರುತ್ತಿಲ್ಲವೆಂದು ಸಾರ್ವಜನಿಕರು ದೂರು ನೀಡಿದ್ದಾರೆ. ಅಂತೆಯೇ ಶ್ರೀರಾಂಪುರ, ಬೋಗಾದಿ ಭಾಗಗಳಿಂದಲೂ ನೀರಿನ ಸಮಸ್ಯೆ ಕುರಿತು ದೂರು ಬರುತ್ತಿದೆ. ಇತ್ತ ಅಧಿಕಾರಿಗಳು ಗಮನಹರಿಸಬೇಕು. ತಕ್ಷಣವೇ ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ಪುನಶ್ಚೇತನಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಮಾತನಾಡಿ, ‘ಮಳೆ ಅಭಾವದ ಬಗ್ಗೆ ಮುನ್ಸೂಚನೆ ಇದೆ. ಈಗ ಸಮಸ್ಯೆ ಎದುರಾಗದಿದ್ದರೂ ಜೂನ್, ಜುಲೈನಲ್ಲಿ ಸಮಸ್ಯೆ ಕಾಣಿಸಿಕೊಳ್ಳಬಹುದು. ಅದಕ್ಕಾಗಿ ಕೊಳವೆಬಾವಿಗಳನ್ನು ಕೊರೆಸಬೇಕು. ಬತ್ತಿ ಹೋಗಿರುವ ಕೊಳವೆಬಾವಿಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.</p>.<p>‘ಅಗತ್ಯ ಟ್ಯಾಂಕರ್ಗಳ ಖರೀದಿಗೆ ಅನುಮೋದನೆ ನೀಡಲಾಗಿದೆ’ ಎಂದರು.</p>.<p>‘ಕಬಿನಿ ಯೋಜನೆಯಲ್ಲಿ 60 ಎಂಎಲ್ಡಿ ನೀರಿನಲ್ಲಿ 40 ಎಂಎಲ್ಡಿಯನ್ನು ನಗರಪಾಲಿಕೆಗೆ ಹಾಗೂ 20 ಎಂಎಲ್ಡಿಯನ್ನು ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡಿ ಒಪ್ಪಂದ ಆಗಿದೆ. ಆದ್ದರಿಂದ ಸ್ಥಳೀಯ ಸಂಸ್ಥೆಗಳಿಗೆ ಕೊಡಬೇಕಾದ ನೀರನ್ನು ಕೊಡಬೇಕು’ ಎಂದು ಹೇಳಿದರು.</p>.<p>ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಎಸ್ಇ ಮಂಜುನಾಥ್, ಹೂಟಗಳ್ಳಿ ನಗರಸಭೆ ಪೌರಾಯುಕ್ತ ಬಿ.ಎನ್.ಚಂದ್ರಶೇಖರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದಎಚ್.ಎಂ.ಸುರೇಶ್, ಸುಜಯ್, ಮಹೇಶ್, ಎಚ್.ಆರ್.ದೀಪಾ, ಕಾರ್ಯಪಾಲಕ ಎಂಜಿನಿಯರ್ಗಳಾದ ಮೊಹಮ್ಮದ್ ಆಸಿಫ್ ಇಕ್ಬಾಲ್, ಎ.ಎಂ. ಮೊಹಮ್ಮದ್ ಮುಸ್ತಫಾ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-39-544334685</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>