<p>ಮೈಸೂರು: ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಸದಸ್ಯರು ಮಹಿಳೆಯರು ಮತ್ತು ಮಕ್ಕಳ ಮೇಲೆ ಹೆಚ್ಚುತ್ತಿರುವ ಅಪರಾಧಗಳ ವಿರುದ್ಧದ ರಾಜ್ಯವ್ಯಾಪಿ ಆಂದೋಲನದ ಭಾಗವಾಗಿ ಸಂಗ್ರಹಿಸಿದ ಸಹಿಯನ್ನು ಹಾಗೂ ಮನವಿ ಪತ್ರವನ್ನು ಎಡಿಸಿ ಶಿವರಾಜು ಅವರ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿದರು.</p>.<p>‘ಉದ್ಯೋಗದ ಸ್ಥಳಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳೆಯರ ಸಮಸ್ಯೆಗಳ ಪರಿಹಾರಕ್ಕಾಗಿ ಆಂತರಿಕ ದೂರು ಸಮಿತಿ ರಚಿಸಿ, ‘ಇವ ನಮ್ಮವ’ ಕಾಯ್ದೆ ಪರಿಣಾಮಕಾರಿಯಾಗಿಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು. ಬಾಲ್ಯ ವಿವಾಹ ತಡೆಗಟ್ಟಲು ಹೈಕೋರ್ಟ್ ನೀಡಿರುವ ನಿರ್ದೇಶನ ಕೂಡಲೇ ಅನುಷ್ಠಾನಗೊಳಿಸಿ’ ಎಂದು ಮನವಿ ಮಾಡಿದರು.</p>.<p>‘ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಕೈಬಿಡಿ, ಸರ್ಕಾರಿ ಶಾಲೆಗಳನ್ನು ಬಲಪಡಿಸಿ, ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ ನೀಡಿ. ಅಶ್ಲೀಲತೆಯ ಪ್ರಚಾರ, ಮದ್ಯ- ಮಾದಕ ವಸ್ತುಗಳ ಹಾವಳಿ ಸಂಪೂರ್ಣವಾಗಿ ತಡೆಗಟ್ಟಿ. ಫಾಸ್ಟ್ ಟ್ರ್ಯಾಕ್ ಕೋರ್ಟ್ಗಳಲ್ಲಿ ತ್ವರಿತವಾಗಿ ಪ್ರಕರಣ ಇತ್ಯರ್ಥಗೊಳಿಸಿ ಹಾಗೂ ಜಸ್ಟೀಸ್ ವರ್ಮಾ ಆಯೋಗದ ಶಿಫಾರಸು ಅನುಷ್ಠಾನಗೊಳಿಸಿ’ ಎಂದು ಹೇಳಿದರು.</p>.<p>ಸಂಘಟನೆಯ ಜಿಲ್ಲಾ ಸಮಿತಿ ಅಧ್ಯಕ್ಷೆ ನಳಿನಾ, ಸೀಮಾ, ಪುಷ್ಪಾ, ಪದ್ಮಾ ಮತ್ತು ಗಾಯತ್ರಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-39-987252192</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಸದಸ್ಯರು ಮಹಿಳೆಯರು ಮತ್ತು ಮಕ್ಕಳ ಮೇಲೆ ಹೆಚ್ಚುತ್ತಿರುವ ಅಪರಾಧಗಳ ವಿರುದ್ಧದ ರಾಜ್ಯವ್ಯಾಪಿ ಆಂದೋಲನದ ಭಾಗವಾಗಿ ಸಂಗ್ರಹಿಸಿದ ಸಹಿಯನ್ನು ಹಾಗೂ ಮನವಿ ಪತ್ರವನ್ನು ಎಡಿಸಿ ಶಿವರಾಜು ಅವರ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿದರು.</p>.<p>‘ಉದ್ಯೋಗದ ಸ್ಥಳಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳೆಯರ ಸಮಸ್ಯೆಗಳ ಪರಿಹಾರಕ್ಕಾಗಿ ಆಂತರಿಕ ದೂರು ಸಮಿತಿ ರಚಿಸಿ, ‘ಇವ ನಮ್ಮವ’ ಕಾಯ್ದೆ ಪರಿಣಾಮಕಾರಿಯಾಗಿಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು. ಬಾಲ್ಯ ವಿವಾಹ ತಡೆಗಟ್ಟಲು ಹೈಕೋರ್ಟ್ ನೀಡಿರುವ ನಿರ್ದೇಶನ ಕೂಡಲೇ ಅನುಷ್ಠಾನಗೊಳಿಸಿ’ ಎಂದು ಮನವಿ ಮಾಡಿದರು.</p>.<p>‘ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಕೈಬಿಡಿ, ಸರ್ಕಾರಿ ಶಾಲೆಗಳನ್ನು ಬಲಪಡಿಸಿ, ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ ನೀಡಿ. ಅಶ್ಲೀಲತೆಯ ಪ್ರಚಾರ, ಮದ್ಯ- ಮಾದಕ ವಸ್ತುಗಳ ಹಾವಳಿ ಸಂಪೂರ್ಣವಾಗಿ ತಡೆಗಟ್ಟಿ. ಫಾಸ್ಟ್ ಟ್ರ್ಯಾಕ್ ಕೋರ್ಟ್ಗಳಲ್ಲಿ ತ್ವರಿತವಾಗಿ ಪ್ರಕರಣ ಇತ್ಯರ್ಥಗೊಳಿಸಿ ಹಾಗೂ ಜಸ್ಟೀಸ್ ವರ್ಮಾ ಆಯೋಗದ ಶಿಫಾರಸು ಅನುಷ್ಠಾನಗೊಳಿಸಿ’ ಎಂದು ಹೇಳಿದರು.</p>.<p>ಸಂಘಟನೆಯ ಜಿಲ್ಲಾ ಸಮಿತಿ ಅಧ್ಯಕ್ಷೆ ನಳಿನಾ, ಸೀಮಾ, ಪುಷ್ಪಾ, ಪದ್ಮಾ ಮತ್ತು ಗಾಯತ್ರಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-39-987252192</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>