<p>ಮೈಸೂರು: ‘ಸಮಾಜದಲ್ಲಿ ಮಹಿಳೆಯರ ಸುರಕ್ಷತೆಯೇ ಅವರ ನಿಜವಾದ ಸ್ವಾತಂತ್ರ್ಯ’ ಎಂದು ಪ್ರಾಂಶುಪಾಲ ರೇಚಣ್ಣ ಹೇಳಿದರು.</p>.<p>ನಗರದ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ‘ಪೋಷ್’ ಕೋಶದಿಂದ ಈಚೆಗೆ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮ ಹಾಗೂ ಆಶುಭಾಷಣ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಿಳೆಯರ ಮೇಲಿನ ಅನ್ಯಾಯ, ದೌರ್ಜನ್ಯವನ್ನು ತಡೆಯುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯ. ಅವರ ಸುರಕ್ಷತೆ ಕೇವಲ ಕಾನೂನು ವಿಷಯವಲ್ಲ. ಅದು ಸಮಾಜದ ಜವಾಬ್ದಾರಿಯಾಗಿದೆ’ ಎಂದರು.</p>.<p>‘ವಿದ್ಯಾರ್ಥಿನಿಯರು ಹಕ್ಕುಗಳನ್ನು ಅರಿತು, ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು. ಲೈಂಗಿಕ ಕಿರುಕುಳದ ವಿರುದ್ಧ ಜಾಗೃತಿ ಮೂಡಿಸುವ ಜೊತೆಗೆ, ಅದರ ತಡೆಗೆ ಅಗತ್ಯವಾದ ಕಾನೂನು ಅರಿವು ಹಾಗೂ ಆತ್ಮರಕ್ಷಣೆಯ ಮನೋಭಾವವನ್ನು ವಿದ್ಯಾರ್ಥಿನಿಯರಲ್ಲಿ ಬೆಳೆಸುವುದು ಇಂತಹ ಕಾರ್ಯಕ್ರಮಗಳ ಉದ್ದೇಶವಾಗಿದೆ’ ಎಂದು ತಿಳಿಸಿದರು.</p>.<p>ಜೈವಿಕ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಜಯಶ್ರೀ, ‘ಹೆಣ್ಣುಮಕ್ಕಳು ಅನ್ಯಾಯದ ವಿರುದ್ಧ ಧೈರ್ಯವಾಗಿ ಮಾತನಾಡಬೇಕು’ ಎಂದರು.</p>.<p>ಆಶುಭಾಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರು ‘ಮಹಿಳೆಯರ ಸುರಕ್ಷತೆ ಮತ್ತು ಗೌರವ’ಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ಮಂಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-39-718482154</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಸಮಾಜದಲ್ಲಿ ಮಹಿಳೆಯರ ಸುರಕ್ಷತೆಯೇ ಅವರ ನಿಜವಾದ ಸ್ವಾತಂತ್ರ್ಯ’ ಎಂದು ಪ್ರಾಂಶುಪಾಲ ರೇಚಣ್ಣ ಹೇಳಿದರು.</p>.<p>ನಗರದ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ‘ಪೋಷ್’ ಕೋಶದಿಂದ ಈಚೆಗೆ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮ ಹಾಗೂ ಆಶುಭಾಷಣ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಿಳೆಯರ ಮೇಲಿನ ಅನ್ಯಾಯ, ದೌರ್ಜನ್ಯವನ್ನು ತಡೆಯುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯ. ಅವರ ಸುರಕ್ಷತೆ ಕೇವಲ ಕಾನೂನು ವಿಷಯವಲ್ಲ. ಅದು ಸಮಾಜದ ಜವಾಬ್ದಾರಿಯಾಗಿದೆ’ ಎಂದರು.</p>.<p>‘ವಿದ್ಯಾರ್ಥಿನಿಯರು ಹಕ್ಕುಗಳನ್ನು ಅರಿತು, ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು. ಲೈಂಗಿಕ ಕಿರುಕುಳದ ವಿರುದ್ಧ ಜಾಗೃತಿ ಮೂಡಿಸುವ ಜೊತೆಗೆ, ಅದರ ತಡೆಗೆ ಅಗತ್ಯವಾದ ಕಾನೂನು ಅರಿವು ಹಾಗೂ ಆತ್ಮರಕ್ಷಣೆಯ ಮನೋಭಾವವನ್ನು ವಿದ್ಯಾರ್ಥಿನಿಯರಲ್ಲಿ ಬೆಳೆಸುವುದು ಇಂತಹ ಕಾರ್ಯಕ್ರಮಗಳ ಉದ್ದೇಶವಾಗಿದೆ’ ಎಂದು ತಿಳಿಸಿದರು.</p>.<p>ಜೈವಿಕ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಜಯಶ್ರೀ, ‘ಹೆಣ್ಣುಮಕ್ಕಳು ಅನ್ಯಾಯದ ವಿರುದ್ಧ ಧೈರ್ಯವಾಗಿ ಮಾತನಾಡಬೇಕು’ ಎಂದರು.</p>.<p>ಆಶುಭಾಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರು ‘ಮಹಿಳೆಯರ ಸುರಕ್ಷತೆ ಮತ್ತು ಗೌರವ’ಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ಮಂಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-39-718482154</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>