<p>ಮೈಸೂರು: ‘ಯಂಗ್ ಇಂಡಿಯನ್ಸ್ (ವೈಐ) ಮೈಸೂರು ಘಟಕವು ಇಲ್ಲಿನ ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಶನಿವಾರ ಎಸ್ಜೆಸಿಇ ಆವರಣದಲ್ಲಿ ಹಮ್ಮಿಕೊಂಡಿದ್ದ ‘ಯುವ ಉದ್ಯೋಗ ಮೇಳ– 2026’ ಯಶಸ್ವಿಯಾಯಿತು.</p>.<p>ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯಮ ಸಂಸ್ಥೆಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ 55 ಪ್ರಮುಖ ಕಂಪನಿಗಳು ಭಾಗವಹಿಸಿದ್ದವು. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ಸಾವಿರಾರು ಅಭ್ಯರ್ಥಿಗಳು ಪಾಲ್ಗೊಂಡಿದ್ದರು.</p>.<p>ಎಂಜಿನಿಯರಿಂಗ್, ಎಂಬಿಎ, ವಾಣಿಜ್ಯ, ಕಲೆ, ಹಾಸ್ಪಿಟಾಲಿಟಿ, ಪ್ಯಾರಾಮೆಡಿಕಲ್ ಸೇರಿದಂತೆ ವಿವಿಧ ಡಿಪ್ಲೊಮಾ ಮತ್ತು ಐಟಿಐ ವಿದ್ಯಾರ್ಹತೆಯ ಅಭ್ಯರ್ಥಿಗಳು ಬಂದಿದ್ದರು. ಸ್ಥಳದಲ್ಲೇ ನಡೆದ ಸಂದರ್ಶನಗಳಲ್ಲಿ ಹಲವರು ಆಯ್ಕೆಯಾದರೆ, ಕೆಲವರು ಮುಂದಿನ ಹಂತಕ್ಕೆ ಅರ್ಹತೆ ಗಳಿಸಿದರು.</p>.<p>ಕುಲಪತಿ ಎ.ಎನ್. ಸಂತೋಷ್ಕುಮಾರ್, ಸಿಐಐ ಮೈಸೂರು ಅಧ್ಯಕ್ಷ ಉತ್ಸವ್ ಅಗರ್ವಾಲ್ ಅವರು, ವೈಐ ಮೈಸೂರು ಅಧ್ಯಕ್ಷೆ ಪ್ರಿಯಾಂಕಾ ಶ್ರೀಧರ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-39-1184873279</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಯಂಗ್ ಇಂಡಿಯನ್ಸ್ (ವೈಐ) ಮೈಸೂರು ಘಟಕವು ಇಲ್ಲಿನ ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಶನಿವಾರ ಎಸ್ಜೆಸಿಇ ಆವರಣದಲ್ಲಿ ಹಮ್ಮಿಕೊಂಡಿದ್ದ ‘ಯುವ ಉದ್ಯೋಗ ಮೇಳ– 2026’ ಯಶಸ್ವಿಯಾಯಿತು.</p>.<p>ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯಮ ಸಂಸ್ಥೆಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ 55 ಪ್ರಮುಖ ಕಂಪನಿಗಳು ಭಾಗವಹಿಸಿದ್ದವು. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ಸಾವಿರಾರು ಅಭ್ಯರ್ಥಿಗಳು ಪಾಲ್ಗೊಂಡಿದ್ದರು.</p>.<p>ಎಂಜಿನಿಯರಿಂಗ್, ಎಂಬಿಎ, ವಾಣಿಜ್ಯ, ಕಲೆ, ಹಾಸ್ಪಿಟಾಲಿಟಿ, ಪ್ಯಾರಾಮೆಡಿಕಲ್ ಸೇರಿದಂತೆ ವಿವಿಧ ಡಿಪ್ಲೊಮಾ ಮತ್ತು ಐಟಿಐ ವಿದ್ಯಾರ್ಹತೆಯ ಅಭ್ಯರ್ಥಿಗಳು ಬಂದಿದ್ದರು. ಸ್ಥಳದಲ್ಲೇ ನಡೆದ ಸಂದರ್ಶನಗಳಲ್ಲಿ ಹಲವರು ಆಯ್ಕೆಯಾದರೆ, ಕೆಲವರು ಮುಂದಿನ ಹಂತಕ್ಕೆ ಅರ್ಹತೆ ಗಳಿಸಿದರು.</p>.<p>ಕುಲಪತಿ ಎ.ಎನ್. ಸಂತೋಷ್ಕುಮಾರ್, ಸಿಐಐ ಮೈಸೂರು ಅಧ್ಯಕ್ಷ ಉತ್ಸವ್ ಅಗರ್ವಾಲ್ ಅವರು, ವೈಐ ಮೈಸೂರು ಅಧ್ಯಕ್ಷೆ ಪ್ರಿಯಾಂಕಾ ಶ್ರೀಧರ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-39-1184873279</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>