<p>ಮೈಸೂರು: ಅಲ್ಲಲ್ಲಿ ಹಕ್ಕಿಜ್ವರ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.</p>.<p>ಮೃಗಾಲಯ, ಕಾರಂಜಿ ಪ್ರಕೃತಿ ಉದ್ಯಾನ ಮತ್ತು ಕೂರ್ಗಳ್ಳಿಯ ಚಾಮುಂಡಿ ವನ್ಯಪ್ರಾಣಿಗಳ ಸಂರಕ್ಷಣಾ ಕೇಂದ್ರದಲ್ಲಿನ ಪ್ರಾಣಿ-ಪಕ್ಷಿಗಳಲ್ಲಿ ಹಕ್ಕಿಜ್ವರ ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಯಲು ಪ್ರವೇಶದ್ವಾರಗಳಲ್ಲಿ ಸೋಂಕು ನಿವಾರಕ ಔಷಧಿ ದ್ರವವನ್ನು ಸಿಂಪಡಿಸಲಾಗುತ್ತಿದೆ.</p>.<p>ಮೃಗಾಲಯಕ್ಕೆ ಪ್ರವೇಶಿಸುವ ಎಲ್ಲ ಸಿಬ್ಬಂದಿ, ಅಧಿಕಾರಿಗಳು, ಆಹಾರ ಮತ್ತು ಇತರೆ ಸಾಮಗ್ರಿಗಳನ್ನು ಸಾಗಿಸುವ ಯಾವುದೇ ವಾಹನಗಳು ಸೋಂಕು ನಿವಾರಕ ಔಷಧಿ ಸಿಂಪಡಿಸಿರುವ ಮಾರ್ಗದ ಮೂಲಕ ಹಾದುಹೋಗುವಂತೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪ್ರಾಣಿ ಆವರಣದಲ್ಲೂ ಪುಟ್ ಡಿಪ್ಗಳನ್ನು ಸೋಂಕುರಹಿತಗೊಳಿಸಲಾಗಿದೆ. ಪ್ರಾಣಿ-ಪಕ್ಷಿಗಳ ಮನೆಯಲ್ಲಿ ಕೆಲಸವನ್ನು ನಿರ್ವಹಿಸುವವರು ಸ್ಯಾನಿಟೈಸರ್ ಬಳಸುವಂತೆ ಸೂಚಿಸಲಾಗಿದೆ.</p>.<p>ಪಶುವೈದ್ಯರು ಪ್ರತಿ ಪ್ರಾಣಿ–ಪಕ್ಷಿಯ ಮೇಲ್ವಿಚಾರಣೆ ಮಾಡಿ ಸೂಕ್ತ ಕ್ರಮ ವಹಿಸಲಿದ್ದಾರೆ. ಕಾರಂಜಿ ಕೆರೆಯಲ್ಲಿ ಕೆಲಸ ಮಾಡುವ ಎಲ್ಲ ಸಿಬ್ಬಂದಿಗೆ ವಲಸೆ ಹಕ್ಕಿಗಳ ಸಾವು ಕಂಡುಬಂದರೆ ಕೂಡಲೇ ವರದಿ ಸಲ್ಲಿಸಲು ತಿಳಿಸಲಾಗಿದೆ.</p>.<p>ಮೃಗಾಲಯಕ್ಕೆ ತಂದ ಜೀವಂತ ಕೋಳಿಗಳನ್ನು ಪ್ರಾಣಿಗಳಿಗೆ ಆಹಾರವಾಗಿ ನೀಡುವ ಮುನ್ನ ವೈದ್ಯಕೀಯ ಪರೀಕ್ಷೆ, ಮಾಂಸದ ಸ್ವಚ್ಛತೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮೃಗಾಲಯದ ಸಿಬ್ಬಂದಿಯ ಆಂತರಿಕ ಸಂಚಾರಗಳನ್ನು ನಿಷೇಧಿಸಲಾಗಿದೆ.</p>.<p>ಪಶುವೈದ್ಯರು, ಪ್ರಯೋಗಾಲಯ ತಂತ್ರಜ್ಞರು ಮತ್ತು ನಾಲ್ವರು ಪ್ರಾಣಿ ಪಾಲಕರನ್ನು ಒಳಗೊಂಡ ಕ್ಷಿಪ್ರ ಪಡೆಯನ್ನು ರಚಿಸಿ ಸನ್ನದ್ಧವಾಗಿರಿಸಿಕೊಳ್ಳಲಾಗಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಪಿ. ಅನುಷಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-39-449855372</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಅಲ್ಲಲ್ಲಿ ಹಕ್ಕಿಜ್ವರ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.</p>.<p>ಮೃಗಾಲಯ, ಕಾರಂಜಿ ಪ್ರಕೃತಿ ಉದ್ಯಾನ ಮತ್ತು ಕೂರ್ಗಳ್ಳಿಯ ಚಾಮುಂಡಿ ವನ್ಯಪ್ರಾಣಿಗಳ ಸಂರಕ್ಷಣಾ ಕೇಂದ್ರದಲ್ಲಿನ ಪ್ರಾಣಿ-ಪಕ್ಷಿಗಳಲ್ಲಿ ಹಕ್ಕಿಜ್ವರ ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಯಲು ಪ್ರವೇಶದ್ವಾರಗಳಲ್ಲಿ ಸೋಂಕು ನಿವಾರಕ ಔಷಧಿ ದ್ರವವನ್ನು ಸಿಂಪಡಿಸಲಾಗುತ್ತಿದೆ.</p>.<p>ಮೃಗಾಲಯಕ್ಕೆ ಪ್ರವೇಶಿಸುವ ಎಲ್ಲ ಸಿಬ್ಬಂದಿ, ಅಧಿಕಾರಿಗಳು, ಆಹಾರ ಮತ್ತು ಇತರೆ ಸಾಮಗ್ರಿಗಳನ್ನು ಸಾಗಿಸುವ ಯಾವುದೇ ವಾಹನಗಳು ಸೋಂಕು ನಿವಾರಕ ಔಷಧಿ ಸಿಂಪಡಿಸಿರುವ ಮಾರ್ಗದ ಮೂಲಕ ಹಾದುಹೋಗುವಂತೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪ್ರಾಣಿ ಆವರಣದಲ್ಲೂ ಪುಟ್ ಡಿಪ್ಗಳನ್ನು ಸೋಂಕುರಹಿತಗೊಳಿಸಲಾಗಿದೆ. ಪ್ರಾಣಿ-ಪಕ್ಷಿಗಳ ಮನೆಯಲ್ಲಿ ಕೆಲಸವನ್ನು ನಿರ್ವಹಿಸುವವರು ಸ್ಯಾನಿಟೈಸರ್ ಬಳಸುವಂತೆ ಸೂಚಿಸಲಾಗಿದೆ.</p>.<p>ಪಶುವೈದ್ಯರು ಪ್ರತಿ ಪ್ರಾಣಿ–ಪಕ್ಷಿಯ ಮೇಲ್ವಿಚಾರಣೆ ಮಾಡಿ ಸೂಕ್ತ ಕ್ರಮ ವಹಿಸಲಿದ್ದಾರೆ. ಕಾರಂಜಿ ಕೆರೆಯಲ್ಲಿ ಕೆಲಸ ಮಾಡುವ ಎಲ್ಲ ಸಿಬ್ಬಂದಿಗೆ ವಲಸೆ ಹಕ್ಕಿಗಳ ಸಾವು ಕಂಡುಬಂದರೆ ಕೂಡಲೇ ವರದಿ ಸಲ್ಲಿಸಲು ತಿಳಿಸಲಾಗಿದೆ.</p>.<p>ಮೃಗಾಲಯಕ್ಕೆ ತಂದ ಜೀವಂತ ಕೋಳಿಗಳನ್ನು ಪ್ರಾಣಿಗಳಿಗೆ ಆಹಾರವಾಗಿ ನೀಡುವ ಮುನ್ನ ವೈದ್ಯಕೀಯ ಪರೀಕ್ಷೆ, ಮಾಂಸದ ಸ್ವಚ್ಛತೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮೃಗಾಲಯದ ಸಿಬ್ಬಂದಿಯ ಆಂತರಿಕ ಸಂಚಾರಗಳನ್ನು ನಿಷೇಧಿಸಲಾಗಿದೆ.</p>.<p>ಪಶುವೈದ್ಯರು, ಪ್ರಯೋಗಾಲಯ ತಂತ್ರಜ್ಞರು ಮತ್ತು ನಾಲ್ವರು ಪ್ರಾಣಿ ಪಾಲಕರನ್ನು ಒಳಗೊಂಡ ಕ್ಷಿಪ್ರ ಪಡೆಯನ್ನು ರಚಿಸಿ ಸನ್ನದ್ಧವಾಗಿರಿಸಿಕೊಳ್ಳಲಾಗಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಪಿ. ಅನುಷಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-39-449855372</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>