<p><strong>ನಂಜನಗೂಡು:</strong> ‘ಕಾಂಗ್ರೆಸ್ ಪಕ್ಷಕ್ಕಾಗಿ ಧ್ರುವನಾರಾಯಣ ಅವರು ಮಾಡಿರುವ ತ್ಯಾಗ, ಹೋರಾಟದ ಕೊಡುಗೆಯನ್ನು ಪರಿಗಣಿಸಿ ವರಿಷ್ಠರು ಪುತ್ರ ದರ್ಶನ್ ಧ್ರುವ ನಾರಾಯಣ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್ ಆಗ್ರಹಿಸಿದರು.</p>.<p>‘ದರ್ಶನ್ ಅವರ ತಂದೆ ಧ್ರುವನಾರಾಯಣ ಅವರು ಕಾರ್ಯಾಧ್ಯಕ್ಷರಾಗಿ 9 ಜಿಲ್ಲೆಗಳ ಹೊಣೆಯನ್ನು ಹೊತ್ತು ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ್ದರಿಂದ 9 ಜಿಲ್ಲೆಗಳಲ್ಲಿ ಅತೀ ಹೆಚ್ಚಿನ ಶಾಸಕರು ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದರು. ಅವರ ಸೇವೆಯನ್ನು ಪರಿಗಣಿಸಿ ಅವರ ಪುತ್ರನಿಗೆ ಸಚಿವ ಸ್ಥಾನ ನೀಡಿದ್ದಲ್ಲಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಸಹಾಯವಾಗಲಿದೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ನಗರ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ.ಶಂಕರ್ ಮಾತನಾಡಿ, ‘ರಾಜ್ಯದಲ್ಲಿ ನಾಲ್ಕರಿಂದ ಐದು ಬಾರಿ ಸಚಿವರಾದವರಿಗೆ ಮತ್ತೆ ಮಣೆ ಹಾಕಿದಲ್ಲಿ ಹೊಸ ನಾಯಕರು ಬೆಳೆಯುವುದು ಹೇಗೆ? ಹೊಸ ನಾಯಕರಿಗೆ ಅಧಿಕಾರ ಸಿಕ್ಕಲ್ಲಿ ರಾಜ್ಯದಲ್ಲಿ ಬೆಳೆಯಲು ಸಹಾಯವಾಗುತ್ತದೆ’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಮಾರುತಿ , ಶ್ರೀಕಂಠನಾಯಕ, ನಗರಸಭೆ ಮಾಜಿ ಅಧ್ಯಕ್ಷ ಶ್ರೀಕಂಠಸ್ವಾಮಿ, ಮುಖಂಡರಾದ ರಂಗದಾಸ್, ದೊರೆಸ್ವಾಮಿನಾಯಕ, ಅಬ್ದುಲ್ ಖಾದರ್, ಕರಳಪುರ ನಾಗರಾಜು, ಬದನವಾಳು ಸೋಮು, ಶ್ರೀನಿವಾಸ ಮೂರ್ತಿ, ಎನ್.ಎಂ.ಮಂಜುನಾಥ್, ಕಳಲೆ ರಾಜೇಶ್, ಉಪ್ಪಿನಹಳ್ಳಿ ಶಿವಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್, ಹೆಗ್ಗಡಹಳ್ಳಿ ಮಹೇಶ್, ಮಹೇಂದ್ರ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-38-678729038</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು:</strong> ‘ಕಾಂಗ್ರೆಸ್ ಪಕ್ಷಕ್ಕಾಗಿ ಧ್ರುವನಾರಾಯಣ ಅವರು ಮಾಡಿರುವ ತ್ಯಾಗ, ಹೋರಾಟದ ಕೊಡುಗೆಯನ್ನು ಪರಿಗಣಿಸಿ ವರಿಷ್ಠರು ಪುತ್ರ ದರ್ಶನ್ ಧ್ರುವ ನಾರಾಯಣ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್ ಆಗ್ರಹಿಸಿದರು.</p>.<p>‘ದರ್ಶನ್ ಅವರ ತಂದೆ ಧ್ರುವನಾರಾಯಣ ಅವರು ಕಾರ್ಯಾಧ್ಯಕ್ಷರಾಗಿ 9 ಜಿಲ್ಲೆಗಳ ಹೊಣೆಯನ್ನು ಹೊತ್ತು ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ್ದರಿಂದ 9 ಜಿಲ್ಲೆಗಳಲ್ಲಿ ಅತೀ ಹೆಚ್ಚಿನ ಶಾಸಕರು ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದರು. ಅವರ ಸೇವೆಯನ್ನು ಪರಿಗಣಿಸಿ ಅವರ ಪುತ್ರನಿಗೆ ಸಚಿವ ಸ್ಥಾನ ನೀಡಿದ್ದಲ್ಲಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಸಹಾಯವಾಗಲಿದೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ನಗರ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ.ಶಂಕರ್ ಮಾತನಾಡಿ, ‘ರಾಜ್ಯದಲ್ಲಿ ನಾಲ್ಕರಿಂದ ಐದು ಬಾರಿ ಸಚಿವರಾದವರಿಗೆ ಮತ್ತೆ ಮಣೆ ಹಾಕಿದಲ್ಲಿ ಹೊಸ ನಾಯಕರು ಬೆಳೆಯುವುದು ಹೇಗೆ? ಹೊಸ ನಾಯಕರಿಗೆ ಅಧಿಕಾರ ಸಿಕ್ಕಲ್ಲಿ ರಾಜ್ಯದಲ್ಲಿ ಬೆಳೆಯಲು ಸಹಾಯವಾಗುತ್ತದೆ’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಮಾರುತಿ , ಶ್ರೀಕಂಠನಾಯಕ, ನಗರಸಭೆ ಮಾಜಿ ಅಧ್ಯಕ್ಷ ಶ್ರೀಕಂಠಸ್ವಾಮಿ, ಮುಖಂಡರಾದ ರಂಗದಾಸ್, ದೊರೆಸ್ವಾಮಿನಾಯಕ, ಅಬ್ದುಲ್ ಖಾದರ್, ಕರಳಪುರ ನಾಗರಾಜು, ಬದನವಾಳು ಸೋಮು, ಶ್ರೀನಿವಾಸ ಮೂರ್ತಿ, ಎನ್.ಎಂ.ಮಂಜುನಾಥ್, ಕಳಲೆ ರಾಜೇಶ್, ಉಪ್ಪಿನಹಳ್ಳಿ ಶಿವಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್, ಹೆಗ್ಗಡಹಳ್ಳಿ ಮಹೇಶ್, ಮಹೇಂದ್ರ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-38-678729038</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>