<p><strong>ನಂಜನಗೂಡು</strong>: ನಗರದ ಹೊರವಲಯದ ಕೊರೆಹುಂಡಿಗೆ ತೆರಳುವ ರಸ್ತೆಯಲ್ಲಿ ಮಂಗಳವಾರ ಬೈಕ್ ಸಮೇತ ಯುವಕನ ಶವ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಯುವಕನ ಸಾವಿನ ಬಗ್ಗೆ ಕುಟುಂಬದವರು ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ತಾಲ್ಲೂಕಿನ ರಾಂಪುರ ಗ್ರಾಮದ ನಿವಾಸಿ ಬಸವಣ್ಣ ಎಂಬುವರ ಪುತ್ರ ಆದಿತ್ಯ (23) ಮೃತಪಟ್ಟವರು. ನಂಜನಗೂಡಿನಿಂದ ಕೊರೆಹುಂಡಿಗೆ ತೆರಳುವ ರಸ್ತೆಯಲ್ಲಿ ಹುಲ್ಲಹಳ್ಳಿ ನಾಲೆ ಸಮೀಪದ ನಿರ್ಜನ ಪ್ರದೇಶದಲ್ಲಿ ಬೈಕ್ ಹಾಗೂ ಆದಿತ್ಯನ ಶವ ಸಂಪೂರ್ಣ ಸುಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.</p><p>ಕಾರ್ಖಾನೆಯೊಂದರಲ್ಲಿ ಗುತ್ತಿಗೆ ಆಧಾರದ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದ ಆದಿತ್ಯ ಸೋಮವಾರ ಬೆಳಿಗ್ಗೆ ಮನೆಯಿಂದ ಹೋದವನು ವಾಪಸ್ ಬಂದಿರಲಿಲ್ಲ. ರಾತ್ರಿ ಬೈಕ್ ಸಮೇತ ಬೆಂಕಿಗಾಹುತಿ ಆಗಿರುವುದಾಗಿ ಪರಿಚಿತರು ಪೋನ್ ಮೂಲಕ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಮೃತನ ತಂದೆ ಮಗನ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು</strong>: ನಗರದ ಹೊರವಲಯದ ಕೊರೆಹುಂಡಿಗೆ ತೆರಳುವ ರಸ್ತೆಯಲ್ಲಿ ಮಂಗಳವಾರ ಬೈಕ್ ಸಮೇತ ಯುವಕನ ಶವ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಯುವಕನ ಸಾವಿನ ಬಗ್ಗೆ ಕುಟುಂಬದವರು ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ತಾಲ್ಲೂಕಿನ ರಾಂಪುರ ಗ್ರಾಮದ ನಿವಾಸಿ ಬಸವಣ್ಣ ಎಂಬುವರ ಪುತ್ರ ಆದಿತ್ಯ (23) ಮೃತಪಟ್ಟವರು. ನಂಜನಗೂಡಿನಿಂದ ಕೊರೆಹುಂಡಿಗೆ ತೆರಳುವ ರಸ್ತೆಯಲ್ಲಿ ಹುಲ್ಲಹಳ್ಳಿ ನಾಲೆ ಸಮೀಪದ ನಿರ್ಜನ ಪ್ರದೇಶದಲ್ಲಿ ಬೈಕ್ ಹಾಗೂ ಆದಿತ್ಯನ ಶವ ಸಂಪೂರ್ಣ ಸುಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.</p><p>ಕಾರ್ಖಾನೆಯೊಂದರಲ್ಲಿ ಗುತ್ತಿಗೆ ಆಧಾರದ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದ ಆದಿತ್ಯ ಸೋಮವಾರ ಬೆಳಿಗ್ಗೆ ಮನೆಯಿಂದ ಹೋದವನು ವಾಪಸ್ ಬಂದಿರಲಿಲ್ಲ. ರಾತ್ರಿ ಬೈಕ್ ಸಮೇತ ಬೆಂಕಿಗಾಹುತಿ ಆಗಿರುವುದಾಗಿ ಪರಿಚಿತರು ಪೋನ್ ಮೂಲಕ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಮೃತನ ತಂದೆ ಮಗನ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>