<p>ನಂಜನಗೂಡು: ‘ಸ್ವಚ್ಛ ಪರಿಸರ ನಿರ್ಮಾಣಕ್ಕೆ ಸಾರ್ವಜನಿಕರ ಜವಾಬ್ದಾರಿ ಹೆಚ್ಚಿನದಾಗಿದೆ. ಎಲ್ಲರೂ ನಮ್ಮ ಕಸ ನಮ್ಮ ಜವಾಬ್ದಾರಿ ಎಂಬುದನ್ನು ಅರಿತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮೂಲಕ ಸ್ವಚ್ಛ ನಂಜನಗೂಡು ಪುರಸ್ಕಾರಕ್ಕೆ ಸಹಕಾರ ನೀಡಬೇಕು’ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.</p>.<p>ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ‘ಓಡೋಣ ನಂಜನಗೂಡಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ’ ಎಂಬ ಘೋಷವಾಕ್ಯದಡಿ ನಗರಸಭೆ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಓಟಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ನಾಗರಿಕರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಓಟ ಹಮ್ಮಿಕೊಳ್ಳಲಾಗಿದೆ. ಸ್ವಚ್ಛ ಮತ್ತು ಆರೋಗ್ಯಕರ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆಯಾಗಿದೆ. ಆದ್ದರಿಂದ ನಮ್ಮ ಕಸ ನಮ್ಮೆಲ್ಲರ ಜವಾಬ್ದಾರಿ ಎಂಬುದನ್ನು ಅರಿತು, ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಎಲ್ಲರೂ ಸಹಕಾರ ನೀಡಬೇಕು’ ಎಂದು ಕೋರಿದರು.</p>.<p>‘ಎಲ್ಲೆಂದರಲ್ಲಿ ಕಸವನ್ನು ಬಿಸಾಡದೆ, ಸ್ವಚ್ಛವಾಗಿಟ್ಟುಕೊಂಡು ನಂಜನಗೂಡು ನಗರಸಭೆಗೆ ಸ್ವಚ್ಛ ನಗರಿ ಎಂಬ ಪುರಸ್ಕಾರ ದೊರೆಯಲು ಸಹಕಾರ ನೀಡಬೇಕು’ ಎಂದರು.</p>.<p>ನಗರಸಭೆ ಆಯುಕ್ತ ಎಂ.ಬಸವರಾಜು ಮಾತನಾಡಿ, ‘ಸಾರ್ವಜನಿಕರು ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ನಗರಸಭೆಯ ಕಸ ವಿಲೇವಾರಿ ವಾಹನಗಳಿಗೆ ನೀಡಬೇಕು. ಸ್ವಚ್ಛತೆಯ ಹಿತದೃಷ್ಟಿಯಿಂದ ವಿವಿಧ ಬಡಾವಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಕಸ ನೀಡದೆ ಬಯಲಲ್ಲಿ ಎಸೆದಲ್ಲಿ ಪ್ರಕರಣ ದಾಖಲಿಸಲಾಗುವುದು. ಕಸ ನೀಡದ ಮನೆಗಳಿಗೆ ಮುಂದಿನ ದಿನಗಳಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು. ನಾಗರಿಕರು ಜವಾಬ್ದಾರಿ ಅರಿತು ಸ್ವಚ್ಛತೆ ಕಾಪಾಡಬೇಕು’ ಎಂದು ಕೋರಿದರು.</p>.<p>ಓಟದಲ್ಲಿ ಮೈಸೂರಿನ ಮಣಿಕಂಠ ಪ್ರಥಮ ಸ್ಥಾನ, ಸುಮಂತ್ ದ್ವಿತೀಯ ಸ್ಥಾನ, ಮಿಥುನ್ ತೃತೀಯ ಸ್ಥಾನ ಪಡೆದರು. ವಿಜೇತರಾದವರಿಗೆ ಕ್ರಮವಾಗಿ ₹ 5 ಸಾವಿರ, ₹ 3 ಸಾವಿರ ಹಾಗೂ ₹ 2 ಸಾವಿರ ಬಹುಮಾನ ವಿತರಿಸಲಾಯಿತು.</p>.<p>ನಗರಸಭೆ ಮಾಜಿ ಅಧ್ಯಕ್ಷ ಶ್ರೀಕಂಠ ಸ್ವಾಮಿ, ಮಾಜಿ ಸದಸ್ಯರಾದ ಗಾಯಿತ್ರಿ, ರವಿ, ಮುಖಂಡರಾದ ಎನ್.ಎಂ.ಮಂಜುನಾಥ್, ಕಮಲೇಶ್, ಸತೀಶ್ ಗೌಡ, ಡಿವೈಎಸ್ಪಿ ಧರ್ಮೇಂದ್ರ, ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವೀಂದ್ರ, ನಗರಸಭೆ ಪರಿಸರ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮೈತ್ರಾವತಿ, ಆರೋಗ್ಯ ನಿರೀಕ್ಷಕರಾದ ಆದರ್ಶ್, ವಸಂತ್, ಎಇ ಸಮಂತ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-38-490275100</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಂಜನಗೂಡು: ‘ಸ್ವಚ್ಛ ಪರಿಸರ ನಿರ್ಮಾಣಕ್ಕೆ ಸಾರ್ವಜನಿಕರ ಜವಾಬ್ದಾರಿ ಹೆಚ್ಚಿನದಾಗಿದೆ. ಎಲ್ಲರೂ ನಮ್ಮ ಕಸ ನಮ್ಮ ಜವಾಬ್ದಾರಿ ಎಂಬುದನ್ನು ಅರಿತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮೂಲಕ ಸ್ವಚ್ಛ ನಂಜನಗೂಡು ಪುರಸ್ಕಾರಕ್ಕೆ ಸಹಕಾರ ನೀಡಬೇಕು’ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.</p>.<p>ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ‘ಓಡೋಣ ನಂಜನಗೂಡಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ’ ಎಂಬ ಘೋಷವಾಕ್ಯದಡಿ ನಗರಸಭೆ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಓಟಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ನಾಗರಿಕರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಓಟ ಹಮ್ಮಿಕೊಳ್ಳಲಾಗಿದೆ. ಸ್ವಚ್ಛ ಮತ್ತು ಆರೋಗ್ಯಕರ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆಯಾಗಿದೆ. ಆದ್ದರಿಂದ ನಮ್ಮ ಕಸ ನಮ್ಮೆಲ್ಲರ ಜವಾಬ್ದಾರಿ ಎಂಬುದನ್ನು ಅರಿತು, ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಎಲ್ಲರೂ ಸಹಕಾರ ನೀಡಬೇಕು’ ಎಂದು ಕೋರಿದರು.</p>.<p>‘ಎಲ್ಲೆಂದರಲ್ಲಿ ಕಸವನ್ನು ಬಿಸಾಡದೆ, ಸ್ವಚ್ಛವಾಗಿಟ್ಟುಕೊಂಡು ನಂಜನಗೂಡು ನಗರಸಭೆಗೆ ಸ್ವಚ್ಛ ನಗರಿ ಎಂಬ ಪುರಸ್ಕಾರ ದೊರೆಯಲು ಸಹಕಾರ ನೀಡಬೇಕು’ ಎಂದರು.</p>.<p>ನಗರಸಭೆ ಆಯುಕ್ತ ಎಂ.ಬಸವರಾಜು ಮಾತನಾಡಿ, ‘ಸಾರ್ವಜನಿಕರು ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ನಗರಸಭೆಯ ಕಸ ವಿಲೇವಾರಿ ವಾಹನಗಳಿಗೆ ನೀಡಬೇಕು. ಸ್ವಚ್ಛತೆಯ ಹಿತದೃಷ್ಟಿಯಿಂದ ವಿವಿಧ ಬಡಾವಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಕಸ ನೀಡದೆ ಬಯಲಲ್ಲಿ ಎಸೆದಲ್ಲಿ ಪ್ರಕರಣ ದಾಖಲಿಸಲಾಗುವುದು. ಕಸ ನೀಡದ ಮನೆಗಳಿಗೆ ಮುಂದಿನ ದಿನಗಳಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು. ನಾಗರಿಕರು ಜವಾಬ್ದಾರಿ ಅರಿತು ಸ್ವಚ್ಛತೆ ಕಾಪಾಡಬೇಕು’ ಎಂದು ಕೋರಿದರು.</p>.<p>ಓಟದಲ್ಲಿ ಮೈಸೂರಿನ ಮಣಿಕಂಠ ಪ್ರಥಮ ಸ್ಥಾನ, ಸುಮಂತ್ ದ್ವಿತೀಯ ಸ್ಥಾನ, ಮಿಥುನ್ ತೃತೀಯ ಸ್ಥಾನ ಪಡೆದರು. ವಿಜೇತರಾದವರಿಗೆ ಕ್ರಮವಾಗಿ ₹ 5 ಸಾವಿರ, ₹ 3 ಸಾವಿರ ಹಾಗೂ ₹ 2 ಸಾವಿರ ಬಹುಮಾನ ವಿತರಿಸಲಾಯಿತು.</p>.<p>ನಗರಸಭೆ ಮಾಜಿ ಅಧ್ಯಕ್ಷ ಶ್ರೀಕಂಠ ಸ್ವಾಮಿ, ಮಾಜಿ ಸದಸ್ಯರಾದ ಗಾಯಿತ್ರಿ, ರವಿ, ಮುಖಂಡರಾದ ಎನ್.ಎಂ.ಮಂಜುನಾಥ್, ಕಮಲೇಶ್, ಸತೀಶ್ ಗೌಡ, ಡಿವೈಎಸ್ಪಿ ಧರ್ಮೇಂದ್ರ, ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವೀಂದ್ರ, ನಗರಸಭೆ ಪರಿಸರ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮೈತ್ರಾವತಿ, ಆರೋಗ್ಯ ನಿರೀಕ್ಷಕರಾದ ಆದರ್ಶ್, ವಸಂತ್, ಎಇ ಸಮಂತ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-38-490275100</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>