<p><strong>ನಂಜನಗೂಡು</strong>: ಕಬಿನಿ ಅಣೆಕಟ್ಟೆಯಿಂದ 22 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಿದ್ದರಿಂದ ತಾಲ್ಲೂಕಿನ ರಾಂಪುರ, ಹುಲ್ಲಹಳ್ಳಿ ನಾಲೆಗಳ ಬಯಲಿನಲ್ಲಿ ರೈತರು ಬೆಳೆದ ಫಸಲು ಜಾಲಾವೃತಗೊಂಡು ಹಾಳಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಆಗ್ರಹಿಸಿದರು.</p>.<p>ನಗರದ ತಹಶೀಲ್ದಾರ್ ಕಚೇರಿ ಮುಂಭಾಗ ಗುರುವಾರ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಪರಿಹಾರಕ್ಕೆ ತಹಶೀಲ್ದಾರರಿಗೆ ಹಕ್ಕೋತ್ತಾಯ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ತಾಲ್ಲೂಕಿನಲ್ಲಿ 20 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ತಾಲ್ಲೂಕಿನ ರಾಂಪುರ, ಹುಲ್ಲಹಳ್ಳಿ ನಾಲೆ ಅಚ್ಚುಕಟ್ಟು ಪ್ರದೇಶದಲ್ಲಿ 15 ಸಾವಿರ ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಭತ್ತದ ಫಸಲು ಕಟಾವು ಮಾಡಲಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಕರೆಗೆ ₹25 ಸಾವಿರ ಖರ್ಚು ಮಾಡಿ ಬೆಳೆದಿದ್ದ ಭತ್ತದ ಫಸಲು ರೈತರ ಕೈಸೇರದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದರು.</p>.<p>‘ಅತಿವೃಷ್ಟಿ, ಅನಾವೃಷ್ಟಿಯಿಂದ ಆದ ಬೆಳೆ ನಷ್ಟ ಮತ್ತು ಪ್ರಾಣಿಗಳ ದಾಳಿಯಿಂದ ಉಂಟಾಗುವ ಪ್ರಾಣಹಾನಿಗೆ ₹10 ಸಾವಿರ ಕೋಟಿ ಪರಿಹಾರ ನಿಧಿ ಕಾಯ್ದಿರಿಸಬೇಕು, ಹುಲ್ಲಹಳ್ಳಿ, ರಾಂಪುರ ಅಚ್ಚುಕಟ್ಟು ಪ್ರದೇಶದಲ್ಲಿ ಆದ ಬೆಳೆ ನಷ್ಟಕ್ಕೆ ಕನಿಷ್ಠ ₹50 ಸಾವಿರ ಪರಿಹಾರ ಧನ ಘೋಷಿಸಬೇಕು, ಪ್ರತಿ ಬಾರಿ ಕಪಿಲಾ ನದಿ ಪ್ರವಾಹಕ್ಕೆ ಸಿಲುಕಿ ಫಸಲು ನಾಶಕ್ಕೆ ಒಳಗಾಗುತ್ತಿರುವ ರೈತರ ಕುಟುಂಬಗಳ ರಕ್ಷಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಶುಕ್ರವಾರ ನದಿ ನೀರಿನ ಮಟ್ಟ ಸ್ವಲ್ಪ ಕಡಿಮೆಯಾಗಿತ್ತು. </p>.<p>ಪ್ರತಿಭಟನೆಯಲ್ಲಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಸತೀಶ್ ರಾವ್, ಇಮ್ಮಾವು ರಘು, ಶ್ವೇತಾ, ಮಹದೇವನಾಯಕ, ನಂಜುಂಡ, ಯೋಗಿ, ಶಿವಣ್ಣ, ಶಂಕರ್ ನಾಯ್ಕ, ರಂಗಸ್ವಾಮಿ ನಾಯ್ಕ, ಸಣ್ಣ ಶೆಟ್ಟಿ, ಗೋವಿಂದ ನಾಯ್ಕ, ಪೈಲ್ವಾನ್ ಮಹದೇವ ನಾಯ್ಕ, ಪುಟ್ಟ ಸ್ವಾಮಿ ಉಪಸ್ಥಿತರಿದ್ದರು.</p>.<p>Highlights - ತಹಶೀಲ್ದಾರರಿಗೆ ಮನವಿ ಸಲ್ಲಿಕೆ 15 ಸಾವಿರ ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಭತ್ತ ಎಕರೆಗೆ ₹25 ಸಾವಿರ ಖರ್ಚು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು</strong>: ಕಬಿನಿ ಅಣೆಕಟ್ಟೆಯಿಂದ 22 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಿದ್ದರಿಂದ ತಾಲ್ಲೂಕಿನ ರಾಂಪುರ, ಹುಲ್ಲಹಳ್ಳಿ ನಾಲೆಗಳ ಬಯಲಿನಲ್ಲಿ ರೈತರು ಬೆಳೆದ ಫಸಲು ಜಾಲಾವೃತಗೊಂಡು ಹಾಳಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಆಗ್ರಹಿಸಿದರು.</p>.<p>ನಗರದ ತಹಶೀಲ್ದಾರ್ ಕಚೇರಿ ಮುಂಭಾಗ ಗುರುವಾರ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಪರಿಹಾರಕ್ಕೆ ತಹಶೀಲ್ದಾರರಿಗೆ ಹಕ್ಕೋತ್ತಾಯ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ತಾಲ್ಲೂಕಿನಲ್ಲಿ 20 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ತಾಲ್ಲೂಕಿನ ರಾಂಪುರ, ಹುಲ್ಲಹಳ್ಳಿ ನಾಲೆ ಅಚ್ಚುಕಟ್ಟು ಪ್ರದೇಶದಲ್ಲಿ 15 ಸಾವಿರ ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಭತ್ತದ ಫಸಲು ಕಟಾವು ಮಾಡಲಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಕರೆಗೆ ₹25 ಸಾವಿರ ಖರ್ಚು ಮಾಡಿ ಬೆಳೆದಿದ್ದ ಭತ್ತದ ಫಸಲು ರೈತರ ಕೈಸೇರದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದರು.</p>.<p>‘ಅತಿವೃಷ್ಟಿ, ಅನಾವೃಷ್ಟಿಯಿಂದ ಆದ ಬೆಳೆ ನಷ್ಟ ಮತ್ತು ಪ್ರಾಣಿಗಳ ದಾಳಿಯಿಂದ ಉಂಟಾಗುವ ಪ್ರಾಣಹಾನಿಗೆ ₹10 ಸಾವಿರ ಕೋಟಿ ಪರಿಹಾರ ನಿಧಿ ಕಾಯ್ದಿರಿಸಬೇಕು, ಹುಲ್ಲಹಳ್ಳಿ, ರಾಂಪುರ ಅಚ್ಚುಕಟ್ಟು ಪ್ರದೇಶದಲ್ಲಿ ಆದ ಬೆಳೆ ನಷ್ಟಕ್ಕೆ ಕನಿಷ್ಠ ₹50 ಸಾವಿರ ಪರಿಹಾರ ಧನ ಘೋಷಿಸಬೇಕು, ಪ್ರತಿ ಬಾರಿ ಕಪಿಲಾ ನದಿ ಪ್ರವಾಹಕ್ಕೆ ಸಿಲುಕಿ ಫಸಲು ನಾಶಕ್ಕೆ ಒಳಗಾಗುತ್ತಿರುವ ರೈತರ ಕುಟುಂಬಗಳ ರಕ್ಷಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಶುಕ್ರವಾರ ನದಿ ನೀರಿನ ಮಟ್ಟ ಸ್ವಲ್ಪ ಕಡಿಮೆಯಾಗಿತ್ತು. </p>.<p>ಪ್ರತಿಭಟನೆಯಲ್ಲಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಸತೀಶ್ ರಾವ್, ಇಮ್ಮಾವು ರಘು, ಶ್ವೇತಾ, ಮಹದೇವನಾಯಕ, ನಂಜುಂಡ, ಯೋಗಿ, ಶಿವಣ್ಣ, ಶಂಕರ್ ನಾಯ್ಕ, ರಂಗಸ್ವಾಮಿ ನಾಯ್ಕ, ಸಣ್ಣ ಶೆಟ್ಟಿ, ಗೋವಿಂದ ನಾಯ್ಕ, ಪೈಲ್ವಾನ್ ಮಹದೇವ ನಾಯ್ಕ, ಪುಟ್ಟ ಸ್ವಾಮಿ ಉಪಸ್ಥಿತರಿದ್ದರು.</p>.<p>Highlights - ತಹಶೀಲ್ದಾರರಿಗೆ ಮನವಿ ಸಲ್ಲಿಕೆ 15 ಸಾವಿರ ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಭತ್ತ ಎಕರೆಗೆ ₹25 ಸಾವಿರ ಖರ್ಚು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>