<p>ನಂಜನಗೂಡು: ನಿಗೂಢವಾಗಿ ನಾಪತ್ತೆಯಾಗಿದ್ದ ತಾಲೂಕಿನ ಕಸುವಿನಹಳ್ಳಿಯ ವೃದ್ಧೆ ಶಿವರುದ್ರಮ್ಮ (63) ಶವವಾಗಿ ಪತ್ತೆಯಾಗಿದ್ದು, ಜಮೀನೊಂದರ ಇಂಗು ಗುಂಡಿಯಲ್ಲಿ ಮೃತ ದೇಹ ಸಿಕ್ಕಿದೆ.</p>.<p>ಚಿನ್ನಾಭರಣಕ್ಕಾಗಿ ಸ್ಥಳೀಯನೋರ್ವ ಕೊಲೆ ಮಾಡಿದ್ದು, ಈ ಸಂಬಂಧ ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಮಹದೇವಪ್ಪ ಎಂಬಾತ ಆರೋಪಿ ಬಂಧಿಸಿದ್ದಾರೆ.</p>.<p>ಶಿವರುದ್ರಮ್ಮ ನಾಲ್ಕು ದಿನಗಳ ಹಿಂದೆ ಮನೆಯಿಂದ ತೆರಳಿದ್ದವರು. ಬಳಿಕ ನಾಪತ್ತೆಯಾಗಿದ್ದರು. ಈ ಬಗ್ಗೆ ದೂರು ದಾಖಲಾಗಿತ್ತು. ಅನುಮನಾಸ್ಪದವಾಗಿದ್ದ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಪತ್ತೆ ಹಚ್ಚುವ ಕಾರ್ಯಾಚರಣೆ ಆರಂಭಿಸಿದ್ದರು.</p>.<p>ಮೃತ ವೃದ್ಧೆ ಮೈಮೇಲೆ 70 ಗ್ರಾಂ ಚಿನ್ನಾಭರಣ ಧರಿಸಿದ್ದರು ಎನ್ನಲಾಗಿದ್ದು, ಮಹಾಲಿಂಗೇಶ್ವರ ಸ್ವಾಮಿ ದೇವಾಲಯಕ್ಕೆ ಪೂಜೆ ಸಲ್ಲಿಸುವ ಉದ್ದೇಶದಿಂದ ಬಿಲ್ವಪತ್ರೆ ಕೀಳಲೆಂದು ದೇವಾಲಯದ ಸಮೀಪಕ್ಕೆ ಆಗಮಿಸಿದ್ದರು. ಈ ಸಂದರ್ಭ ಮಹದೇವಪ್ಪನನ್ನು ನೋಡಿ ಬಿಲ್ವಪತ್ರೆ ಕಿತ್ತುಕೊಡಲು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-38-263763364</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಂಜನಗೂಡು: ನಿಗೂಢವಾಗಿ ನಾಪತ್ತೆಯಾಗಿದ್ದ ತಾಲೂಕಿನ ಕಸುವಿನಹಳ್ಳಿಯ ವೃದ್ಧೆ ಶಿವರುದ್ರಮ್ಮ (63) ಶವವಾಗಿ ಪತ್ತೆಯಾಗಿದ್ದು, ಜಮೀನೊಂದರ ಇಂಗು ಗುಂಡಿಯಲ್ಲಿ ಮೃತ ದೇಹ ಸಿಕ್ಕಿದೆ.</p>.<p>ಚಿನ್ನಾಭರಣಕ್ಕಾಗಿ ಸ್ಥಳೀಯನೋರ್ವ ಕೊಲೆ ಮಾಡಿದ್ದು, ಈ ಸಂಬಂಧ ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಮಹದೇವಪ್ಪ ಎಂಬಾತ ಆರೋಪಿ ಬಂಧಿಸಿದ್ದಾರೆ.</p>.<p>ಶಿವರುದ್ರಮ್ಮ ನಾಲ್ಕು ದಿನಗಳ ಹಿಂದೆ ಮನೆಯಿಂದ ತೆರಳಿದ್ದವರು. ಬಳಿಕ ನಾಪತ್ತೆಯಾಗಿದ್ದರು. ಈ ಬಗ್ಗೆ ದೂರು ದಾಖಲಾಗಿತ್ತು. ಅನುಮನಾಸ್ಪದವಾಗಿದ್ದ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಪತ್ತೆ ಹಚ್ಚುವ ಕಾರ್ಯಾಚರಣೆ ಆರಂಭಿಸಿದ್ದರು.</p>.<p>ಮೃತ ವೃದ್ಧೆ ಮೈಮೇಲೆ 70 ಗ್ರಾಂ ಚಿನ್ನಾಭರಣ ಧರಿಸಿದ್ದರು ಎನ್ನಲಾಗಿದ್ದು, ಮಹಾಲಿಂಗೇಶ್ವರ ಸ್ವಾಮಿ ದೇವಾಲಯಕ್ಕೆ ಪೂಜೆ ಸಲ್ಲಿಸುವ ಉದ್ದೇಶದಿಂದ ಬಿಲ್ವಪತ್ರೆ ಕೀಳಲೆಂದು ದೇವಾಲಯದ ಸಮೀಪಕ್ಕೆ ಆಗಮಿಸಿದ್ದರು. ಈ ಸಂದರ್ಭ ಮಹದೇವಪ್ಪನನ್ನು ನೋಡಿ ಬಿಲ್ವಪತ್ರೆ ಕಿತ್ತುಕೊಡಲು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-38-263763364</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>