<p><strong>ನಂಜನಗೂಡು</strong>: ‘ಜನಸಾಮಾನ್ಯರ ಕೆಲಸ ಕಾರ್ಯಗಳಿಗೆ ತೊಡಕಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು’ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.</p>.<p>ನಗರದ ವಾಲ್ಮೀಕಿ ಭವನದಲ್ಲಿ ಸೋಮವಾರ ನಡೆದ ಕರ್ನಾಟಕ ಅಭಿವೃದ್ಧಿ ಯೋಜನೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>‘ನಗರದ ಬಜಾರ್ ರಸ್ತೆಯನ್ನು ಫುಟ್ಪಾತ್ ವ್ಯಾಪಾರಿಗಳು ಅತಿಕ್ರಮಿಸಿಕೊಂಡು ವಾಹನ ಸಂಚಾರಕ್ಕೆ ತೊಡಕುಂಟು ಮಾಡುತ್ತಿರುವ ಬಗ್ಗೆ ಸ್ಥಳೀಯರು ದೂರಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರೂ ನಗರಸಭೆ ಅಧಿಕಾರಿಗಳು ಕ್ರಮವಹಿಸಿಲ್ಲ. ಜನರ ಕೆಲಸಕ್ಕೆ ಅಸಡ್ಡೆ ತೋರುವವರು ಇಲ್ಲಿಂದ ತೆರಳಬಹುದು’ ಎಂದು ಎಚ್ಚರಿಸಿದರು.</p>.<p>‘ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಅಸಮರ್ಪಕ ಪೂರೈಕೆ ಬಗ್ಗೆ ಜನರು ದೂರುತ್ತಿದ್ದಾರೆ. ಕೆಲವೆಡೆ ನೀರಿನ ಟ್ಯಾಂಕ್ಗಳು ಶಿಥಿಲಾವಸ್ಥೆಗೆ ತಲುಪಿದ್ದು, ಜಲ ಜೀವನ್ ಮಿಷನ್ ಯೋಜನೆಯೂ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ಆದ್ಯತೆ ಮೇರೆಗೆ ಕಾಮಗಾರಿ ಪೂರ್ಣಗೊಳಿಸಲು ಮುಂದಾಗಬೇಕು’ ಎಂದು ಸೂಚಿಸಿದರು.</p>.<p>ಹಳ್ಳಿಗಳಲ್ಲಿ ಮದ್ಯ ಅಕ್ರಮ ಮಾರಾಟ ವ್ಯಾಪಕವಾಗಿ ನಡೆಯುತ್ತಿದೆ. ಆದಾಯದ ಹೆಸರಿನಲ್ಲಿ ಅನಧಿಕೃತ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸುವುದು ಸರಿಯಲ್ಲ. ಮದ್ಯದಂಗಡಿಗಳ ಮಾಲೀಕರ ಮೇಲೆ ದೂರು ದಾಖಲಿಸಬೇಕು. ಡ್ರಗ್ಸ್ ಬಳಕೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.</p>.<p>ಸಂಸದ ಸುನೀಲ್ ಬೋಸ್ ಮಾತನಾಡಿ, ‘ಸಾರ್ವಜನಿಕ ಕೆಲಸದಲ್ಲಿ ಬೇಜವಾಬ್ದಾರಿ ವರ್ತನೆ ತೋರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗುವುದು’ ಎಂದು ಎಚ್ಚರಿಸಿದರು.</p>.<p>ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ಧರಾಮಯ್ಯ, ತಾಲ್ಲೂಕು ಪಂಚಾಯಿತಿ ಇಒ ಜೆರಾಲ್ಡ್ ರಾಜೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಚೆನ್ನಪ್ಪ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-38-647857343</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು</strong>: ‘ಜನಸಾಮಾನ್ಯರ ಕೆಲಸ ಕಾರ್ಯಗಳಿಗೆ ತೊಡಕಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು’ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.</p>.<p>ನಗರದ ವಾಲ್ಮೀಕಿ ಭವನದಲ್ಲಿ ಸೋಮವಾರ ನಡೆದ ಕರ್ನಾಟಕ ಅಭಿವೃದ್ಧಿ ಯೋಜನೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>‘ನಗರದ ಬಜಾರ್ ರಸ್ತೆಯನ್ನು ಫುಟ್ಪಾತ್ ವ್ಯಾಪಾರಿಗಳು ಅತಿಕ್ರಮಿಸಿಕೊಂಡು ವಾಹನ ಸಂಚಾರಕ್ಕೆ ತೊಡಕುಂಟು ಮಾಡುತ್ತಿರುವ ಬಗ್ಗೆ ಸ್ಥಳೀಯರು ದೂರಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರೂ ನಗರಸಭೆ ಅಧಿಕಾರಿಗಳು ಕ್ರಮವಹಿಸಿಲ್ಲ. ಜನರ ಕೆಲಸಕ್ಕೆ ಅಸಡ್ಡೆ ತೋರುವವರು ಇಲ್ಲಿಂದ ತೆರಳಬಹುದು’ ಎಂದು ಎಚ್ಚರಿಸಿದರು.</p>.<p>‘ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಅಸಮರ್ಪಕ ಪೂರೈಕೆ ಬಗ್ಗೆ ಜನರು ದೂರುತ್ತಿದ್ದಾರೆ. ಕೆಲವೆಡೆ ನೀರಿನ ಟ್ಯಾಂಕ್ಗಳು ಶಿಥಿಲಾವಸ್ಥೆಗೆ ತಲುಪಿದ್ದು, ಜಲ ಜೀವನ್ ಮಿಷನ್ ಯೋಜನೆಯೂ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ಆದ್ಯತೆ ಮೇರೆಗೆ ಕಾಮಗಾರಿ ಪೂರ್ಣಗೊಳಿಸಲು ಮುಂದಾಗಬೇಕು’ ಎಂದು ಸೂಚಿಸಿದರು.</p>.<p>ಹಳ್ಳಿಗಳಲ್ಲಿ ಮದ್ಯ ಅಕ್ರಮ ಮಾರಾಟ ವ್ಯಾಪಕವಾಗಿ ನಡೆಯುತ್ತಿದೆ. ಆದಾಯದ ಹೆಸರಿನಲ್ಲಿ ಅನಧಿಕೃತ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸುವುದು ಸರಿಯಲ್ಲ. ಮದ್ಯದಂಗಡಿಗಳ ಮಾಲೀಕರ ಮೇಲೆ ದೂರು ದಾಖಲಿಸಬೇಕು. ಡ್ರಗ್ಸ್ ಬಳಕೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.</p>.<p>ಸಂಸದ ಸುನೀಲ್ ಬೋಸ್ ಮಾತನಾಡಿ, ‘ಸಾರ್ವಜನಿಕ ಕೆಲಸದಲ್ಲಿ ಬೇಜವಾಬ್ದಾರಿ ವರ್ತನೆ ತೋರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗುವುದು’ ಎಂದು ಎಚ್ಚರಿಸಿದರು.</p>.<p>ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ಧರಾಮಯ್ಯ, ತಾಲ್ಲೂಕು ಪಂಚಾಯಿತಿ ಇಒ ಜೆರಾಲ್ಡ್ ರಾಜೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಚೆನ್ನಪ್ಪ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-38-647857343</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>