<p>ನಂಜನಗೂಡು: ‘ನವಿಲೂರು, ಮುದ್ದ ಹಳ್ಳಿ, ಸೂರಹಳ್ಳಿ ಮೂಲಕ ಹಲ್ಲರೆಗೆ ಸೇರುವ ಮುಖ್ಯರಸ್ತೆಯ ಅಭಿವೃದ್ಧಿ ಕಾಮಗಾರಿಗೆ ₹4 ಕೋಟಿ 57 ಲಕ್ಷ ವೆಚ್ಚ ದಲ್ಲಿ ಚಾಲನೆ ನೀಡಲಾಗಿದೆ’ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.</p>.<p>ತಾಲ್ಲೂಕಿನ ದೇವಿರಮ್ಮನಹಳ್ಳಿ, ದೇವರಸನಹಳ್ಳಿ, ಕೆಬ್ಬೆಪುರ, ನವಿಲೂರು, ಮಸಗೆ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಕಳೆದ 30 ವರ್ಷಗಳಿಂದ ರಸ್ತೆ ಅಭಿವೃದ್ಧಿ ಕಾಣದೆ ತೀವ್ರ ಹಳ್ಳ ಕೊಳ್ಳಗಳು ಉಂಟಾಗಿ, ಸಂಚಾರಕ್ಕೆ ತೀವ್ರ ತೊಂದರೆಯಾಗಿತ್ತು, ಗ್ರಾಮಸ್ಥರು ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರು, ಗ್ರಾಮಸ್ಥರ ಮನವಿಯ ಮೇರೆಗೆ 2.15 ಕಿ.ಮೀ ಉದ್ದ ಮುಖ್ಯರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು’ ಎಂದರು.</p>.<p>‘ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ದೇವಿರಮ್ಮನಹಳ್ಳಿಯ ಸಾಮಾನ್ಯ ವರ್ಗದ ಬೀದಿಯಲ್ಲಿ ₹65 ಲಕ್ಷ, ದೇವರಸನಹಳ್ಳಿಯ ಸಾಮಾನ್ಯ ವರ್ಗದ ಬೀದಿಯಲ್ಲಿ ₹25 ಲಕ್ಷ, ಮಸಗೆಯಲ್ಲಿ ₹30 ಲಕ್ಷ ವೆಚ್ಚದಲ್ಲಿ ಸಾಮಾನ್ಯ ವರ್ಗದ ಬೀದಿಯಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಯನ್ನೂ ನಡೆಸಲಾಗುವುದು. ಒಟ್ಟಾರೆ ₹6 ಕೋಟಿ 2 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ’ ಎಂದರು.</p>.<p>ಮುಂಕಡ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಕೆ.ಜಿ.ಮಹೇಶ್, ಎಸ್ಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಪ್ಪಿನಹಳ್ಳಿ ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಕರಳಾಪುರ ನಾಗರಾಜ್, ದೇಬೂರ ಅಶೋಕ್, ಕಳಲೆ ರಾಜೇಶ್, ಮುದ್ದುಮಾದಶೆಟ್ಟಿ, ತಗಡೂರುನಾಯಕ, ರಘು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-38-522208263</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಂಜನಗೂಡು: ‘ನವಿಲೂರು, ಮುದ್ದ ಹಳ್ಳಿ, ಸೂರಹಳ್ಳಿ ಮೂಲಕ ಹಲ್ಲರೆಗೆ ಸೇರುವ ಮುಖ್ಯರಸ್ತೆಯ ಅಭಿವೃದ್ಧಿ ಕಾಮಗಾರಿಗೆ ₹4 ಕೋಟಿ 57 ಲಕ್ಷ ವೆಚ್ಚ ದಲ್ಲಿ ಚಾಲನೆ ನೀಡಲಾಗಿದೆ’ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.</p>.<p>ತಾಲ್ಲೂಕಿನ ದೇವಿರಮ್ಮನಹಳ್ಳಿ, ದೇವರಸನಹಳ್ಳಿ, ಕೆಬ್ಬೆಪುರ, ನವಿಲೂರು, ಮಸಗೆ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಕಳೆದ 30 ವರ್ಷಗಳಿಂದ ರಸ್ತೆ ಅಭಿವೃದ್ಧಿ ಕಾಣದೆ ತೀವ್ರ ಹಳ್ಳ ಕೊಳ್ಳಗಳು ಉಂಟಾಗಿ, ಸಂಚಾರಕ್ಕೆ ತೀವ್ರ ತೊಂದರೆಯಾಗಿತ್ತು, ಗ್ರಾಮಸ್ಥರು ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರು, ಗ್ರಾಮಸ್ಥರ ಮನವಿಯ ಮೇರೆಗೆ 2.15 ಕಿ.ಮೀ ಉದ್ದ ಮುಖ್ಯರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು’ ಎಂದರು.</p>.<p>‘ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ದೇವಿರಮ್ಮನಹಳ್ಳಿಯ ಸಾಮಾನ್ಯ ವರ್ಗದ ಬೀದಿಯಲ್ಲಿ ₹65 ಲಕ್ಷ, ದೇವರಸನಹಳ್ಳಿಯ ಸಾಮಾನ್ಯ ವರ್ಗದ ಬೀದಿಯಲ್ಲಿ ₹25 ಲಕ್ಷ, ಮಸಗೆಯಲ್ಲಿ ₹30 ಲಕ್ಷ ವೆಚ್ಚದಲ್ಲಿ ಸಾಮಾನ್ಯ ವರ್ಗದ ಬೀದಿಯಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಯನ್ನೂ ನಡೆಸಲಾಗುವುದು. ಒಟ್ಟಾರೆ ₹6 ಕೋಟಿ 2 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ’ ಎಂದರು.</p>.<p>ಮುಂಕಡ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಕೆ.ಜಿ.ಮಹೇಶ್, ಎಸ್ಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಪ್ಪಿನಹಳ್ಳಿ ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಕರಳಾಪುರ ನಾಗರಾಜ್, ದೇಬೂರ ಅಶೋಕ್, ಕಳಲೆ ರಾಜೇಶ್, ಮುದ್ದುಮಾದಶೆಟ್ಟಿ, ತಗಡೂರುನಾಯಕ, ರಘು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-38-522208263</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>