<p>ನಂಜನಗೂಡು: ‘ಕರ್ತವ್ಯ ನಿರ್ವಹಣೆಯಲ್ಲಿ ಸಮರ್ಪಣಾ ಭಾವ ಅತಿ ಮುಖ್ಯ’ ಎಂದು ಮೈಸೂರಿನ ರಕ್ಷಣಾ ತಂತ್ರಜ್ಞಾನ ಸಂಸ್ಥೆಯ ಜೈವಿಕ ರಕ್ಷಣಾ ವಿಭಾಗದ ಮುಖ್ಯಸ್ಥ ಆರ್.ಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಸುತ್ತೂರು ಶ್ರೀಕ್ಷೇತ್ರದಲ್ಲಿ ವೀರಸಿಂಹಾಸನ ಮಹಾಸಂಸ್ಥಾನ ಮಠ, ಶಿವರಾತ್ರೀಶ್ವರ ಧಾರ್ಮಿಕ ದತ್ತಿ ಹಾಗೂ ಜೆಎಸ್ಎಸ್ ಮಹಾವಿದ್ಯಾಪೀಠದ ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ ಫಾರ್ಮಸಿ ಮತ್ತು ಲೈಫ್ಸೈನ್ಸ್ ವಿದ್ಯಾರ್ಥಿಗಳ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ದೇಶಿ ಹಾಗೂ ವಿದೇಶಿ ಭಾಷೆಗಳನ್ನು ಕಲಿಯುವುದರಿಂದ ಲೋಕಜ್ಞಾನದ ಜೊತೆಗೆ ಸಂವಹನ ಸುಲಭವಾಗುತ್ತದೆ. ವೃತ್ತಿ ಮಿತ್ರರೊಂದಿಗೆ ಗೌರವ ಹಾಗೂ ಸಹಕಾರದಿಂದ ವರ್ತಿಸುವುದನ್ನು ಕಲಿಯಬೇಕು’ ಎಂದು ಸಲಹೆ ನೀಡಿದರು.</p>.<p>‘ಫಾರ್ಮಸಿ ಹಾಗೂ ಲೈಫ್ಸೈನ್ಸ್ ವಿದ್ಯಾರ್ಥಿಗಳಿಗೆ ಭಾರತೀಯ ರಕ್ಷಣಾ ಕ್ಷೇತ್ರದಲ್ಲೂ ಅನೇಕ ಅವಕಾಶಗಳಿವೆ. ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದರು.</p>.<p>ಭಾರತೀಯ ಫಾರ್ಮಸಿ ಮಂಡಳಿಯ ಕಾರ್ಯಕಾರಿ ಸಮಿತಿಯ ಸದಸ್ಯ ಡಾ.ಸಲೀಂಉಲ್ಲಾ ಖಾನ್, ‘ಮನಸ್ಸನ್ನು ಪ್ರಶಾಂತವಾಗಿಟ್ಟುಕೊಳ್ಳಬೇಕು. ತಲೆಯಲ್ಲಿ ಅನಗತ್ಯ ವಿಚಾರಗಳನ್ನು ಇಟ್ಟುಕೊಂಡಿಲ್ಲದಿದ್ದರೆ ಹೊಸ ವಿಷಯಗಳ ಕಲಿಕೆಗೆ ಸಹಾಯವಾಗುತ್ತದೆ’ ಎಂದು ತಿಳಿಸಿದರು.</p>.<p>ಪ್ರೊ.ಜಿ.ಆರ್. ಸ್ಮಿತಾ ಮಾತನಾಡಿ, ‘ಭಾರತೀಯ ಸಂಸ್ಕೃತಿಯು ವೈಜ್ಞಾನಿಕ ನೆಲೆಗಟ್ಟಿನಿಂದ ಕೂಡಿದೆ. ವಿಜ್ಞಾನ ಹಾಗೂ ಖಗೋಳವಿಜ್ಞಾನದೊಂದಿಗೆ ಸಂಬಂಧ ಹೊಂದಿದ್ದು, ದೇವಾಲಯಗಳ ನಿರ್ಮಾಣದಲ್ಲಿ ಬಳಸಿಕೊಂಡಿರುವುದನ್ನು ನೋಡಬಹುದು’ ಎಂದರು.</p>.<p>ಗ್ರೂಪ್ ಫಾರ್ಮಾಸ್ಯುಟಿಕಲ್ಸ್ ಉಪಾಧ್ಯಕ್ಷ ಸುನೀಲ್ ಚಿಪ್ಲುಂಕರ್ ಮಾತನಾಡಿ, ‘ಮಾನವೀಯ ಸಂಬಂಧಗಳಲ್ಲಿ ಸಾಮರಸ್ಯವಿರಬೇಕು. ಕುಟುಂಬ, ಸ್ನೇಹಿತರು, ಸಹೋದ್ಯೋಗಿಗಳು ಮತ್ತು ಸಮಾಜದ ಇತರ ವ್ಯಕ್ತಿಗಳೊಂದಿಗಿನ ಸಂಬಂಧಗಳು ಜೀವನದ ಗುಣಮಟ್ಟವನ್ನು ನಿರ್ಧರಿಸುತ್ತವೆ’ ಎಂದು ತಿಳಿಸಿದರು.</p>.<p>ಆರ್.ಎಸ್. ಹರೀಶ್ ಪ್ರಾರ್ಥಿಸಿದರು. ಡಾ.ಆನಂದ್ಕುಮಾರ್ ಟೆಂಗ್ಲಿ ಸ್ವಾಗತಿಸಿದರು. ಡಾ.ಕೆ.ಎಲ್. ಕೃಷ್ಣಾ ವಂದಿಸಿದರು. ಡಾ.ಎಚ್.ಎನ್. ವಿಶ್ವಾಸ್ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-38-530725757</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಂಜನಗೂಡು: ‘ಕರ್ತವ್ಯ ನಿರ್ವಹಣೆಯಲ್ಲಿ ಸಮರ್ಪಣಾ ಭಾವ ಅತಿ ಮುಖ್ಯ’ ಎಂದು ಮೈಸೂರಿನ ರಕ್ಷಣಾ ತಂತ್ರಜ್ಞಾನ ಸಂಸ್ಥೆಯ ಜೈವಿಕ ರಕ್ಷಣಾ ವಿಭಾಗದ ಮುಖ್ಯಸ್ಥ ಆರ್.ಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಸುತ್ತೂರು ಶ್ರೀಕ್ಷೇತ್ರದಲ್ಲಿ ವೀರಸಿಂಹಾಸನ ಮಹಾಸಂಸ್ಥಾನ ಮಠ, ಶಿವರಾತ್ರೀಶ್ವರ ಧಾರ್ಮಿಕ ದತ್ತಿ ಹಾಗೂ ಜೆಎಸ್ಎಸ್ ಮಹಾವಿದ್ಯಾಪೀಠದ ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ ಫಾರ್ಮಸಿ ಮತ್ತು ಲೈಫ್ಸೈನ್ಸ್ ವಿದ್ಯಾರ್ಥಿಗಳ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ದೇಶಿ ಹಾಗೂ ವಿದೇಶಿ ಭಾಷೆಗಳನ್ನು ಕಲಿಯುವುದರಿಂದ ಲೋಕಜ್ಞಾನದ ಜೊತೆಗೆ ಸಂವಹನ ಸುಲಭವಾಗುತ್ತದೆ. ವೃತ್ತಿ ಮಿತ್ರರೊಂದಿಗೆ ಗೌರವ ಹಾಗೂ ಸಹಕಾರದಿಂದ ವರ್ತಿಸುವುದನ್ನು ಕಲಿಯಬೇಕು’ ಎಂದು ಸಲಹೆ ನೀಡಿದರು.</p>.<p>‘ಫಾರ್ಮಸಿ ಹಾಗೂ ಲೈಫ್ಸೈನ್ಸ್ ವಿದ್ಯಾರ್ಥಿಗಳಿಗೆ ಭಾರತೀಯ ರಕ್ಷಣಾ ಕ್ಷೇತ್ರದಲ್ಲೂ ಅನೇಕ ಅವಕಾಶಗಳಿವೆ. ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದರು.</p>.<p>ಭಾರತೀಯ ಫಾರ್ಮಸಿ ಮಂಡಳಿಯ ಕಾರ್ಯಕಾರಿ ಸಮಿತಿಯ ಸದಸ್ಯ ಡಾ.ಸಲೀಂಉಲ್ಲಾ ಖಾನ್, ‘ಮನಸ್ಸನ್ನು ಪ್ರಶಾಂತವಾಗಿಟ್ಟುಕೊಳ್ಳಬೇಕು. ತಲೆಯಲ್ಲಿ ಅನಗತ್ಯ ವಿಚಾರಗಳನ್ನು ಇಟ್ಟುಕೊಂಡಿಲ್ಲದಿದ್ದರೆ ಹೊಸ ವಿಷಯಗಳ ಕಲಿಕೆಗೆ ಸಹಾಯವಾಗುತ್ತದೆ’ ಎಂದು ತಿಳಿಸಿದರು.</p>.<p>ಪ್ರೊ.ಜಿ.ಆರ್. ಸ್ಮಿತಾ ಮಾತನಾಡಿ, ‘ಭಾರತೀಯ ಸಂಸ್ಕೃತಿಯು ವೈಜ್ಞಾನಿಕ ನೆಲೆಗಟ್ಟಿನಿಂದ ಕೂಡಿದೆ. ವಿಜ್ಞಾನ ಹಾಗೂ ಖಗೋಳವಿಜ್ಞಾನದೊಂದಿಗೆ ಸಂಬಂಧ ಹೊಂದಿದ್ದು, ದೇವಾಲಯಗಳ ನಿರ್ಮಾಣದಲ್ಲಿ ಬಳಸಿಕೊಂಡಿರುವುದನ್ನು ನೋಡಬಹುದು’ ಎಂದರು.</p>.<p>ಗ್ರೂಪ್ ಫಾರ್ಮಾಸ್ಯುಟಿಕಲ್ಸ್ ಉಪಾಧ್ಯಕ್ಷ ಸುನೀಲ್ ಚಿಪ್ಲುಂಕರ್ ಮಾತನಾಡಿ, ‘ಮಾನವೀಯ ಸಂಬಂಧಗಳಲ್ಲಿ ಸಾಮರಸ್ಯವಿರಬೇಕು. ಕುಟುಂಬ, ಸ್ನೇಹಿತರು, ಸಹೋದ್ಯೋಗಿಗಳು ಮತ್ತು ಸಮಾಜದ ಇತರ ವ್ಯಕ್ತಿಗಳೊಂದಿಗಿನ ಸಂಬಂಧಗಳು ಜೀವನದ ಗುಣಮಟ್ಟವನ್ನು ನಿರ್ಧರಿಸುತ್ತವೆ’ ಎಂದು ತಿಳಿಸಿದರು.</p>.<p>ಆರ್.ಎಸ್. ಹರೀಶ್ ಪ್ರಾರ್ಥಿಸಿದರು. ಡಾ.ಆನಂದ್ಕುಮಾರ್ ಟೆಂಗ್ಲಿ ಸ್ವಾಗತಿಸಿದರು. ಡಾ.ಕೆ.ಎಲ್. ಕೃಷ್ಣಾ ವಂದಿಸಿದರು. ಡಾ.ಎಚ್.ಎನ್. ವಿಶ್ವಾಸ್ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-38-530725757</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>