<p>ನಂಜನಗೂಡು: ‘ಉಪ್ಪಾರ ಸಮುದಾಯ ಆರ್ಥಿಕವಾಗಿ, ರಾಜಕೀಯವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದೆ. ಹೀಗಾಗಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಒದಗಿಸಲು ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ತಾಲೂಕು ಉಪ್ಪಾರ ಸಮುದಾಯದ ಜಿಲ್ಲಾಧ್ಯಕ್ಷ ಕರಳಾಪುರ ನಾಗರಾಜು ಆಗ್ರಹಿಸಿದರು.</p>.<p>ನಗರದ ಶ್ರೀಕಂಠೇಶ್ವರ ದೇವಾಲಯದ ಬಳಿ ಇರುವ ಉಪ್ಪಾರ ಸಮುದಾಯದಲ್ಲಿ ಸಮುದಾಯದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಉಪ್ಪಾರ ಸಮುದಾಯ ಶಾಸಕ ಪುಟ್ಟರಂಗಶೆಟ್ಟಿ ಅವರ ಮಾತಿಗೆ ಬೆಲೆ ನೀಡಿ ಸಮುದಾಯದ ಶೇ 90ರಷ್ಟು ಜನರು ಕಾಂಗ್ರೆಸ್ ಬೆಂಬಲಿಸುತ್ತಾ ಬಂದಿದ್ದಾರೆ. ಅವರಿಗೆ ನೂತನ ಸಚಿವ ಸಂಪುಟದಲ್ಲಾದರೂ ಸಚಿವ ಸ್ಥಾನ ನೀಡಿ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ಮುಂದಾಗಬೇಕು’ ಎಂದು ಒತ್ತಾಯಿಸಿದರು.</p>.<p>‘ಧ್ರುವನಾರಾಯಣ್ ಅವರು ಕಾಂಗ್ರೆಸ್ಗೆ ಶ್ರಮಿಸಿರುವ ಸೇವೆ ಪರಿಗಣಿಸಿ ಮೈಸೂರು ಜಿಲ್ಲೆಯಿಂದ ಶಾಸಕ ದರ್ಶನ್ ಧ್ರುವನಾರಾಯಣ್ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದರು.</p>.<p>ತಾ.ಪಂ ಮಾಜಿ ಸದಸ್ಯ ಎಚ್ಎಸ್ ಮೂಗಶೆಟ್ಟಿ ಮಾತನಾಡಿದರು. ಕನಕ ನಗರ ಮಹದೇವು, ಹೆಮ್ಮರಗಾಲ ಸೋಮಣ್ಣ, ಬಾಲಚಂದ್ರು, ಗೋವಿಂದರಾಜು, ಶ್ರೀನಿವಾಸ್, ಮುದ್ದುಮಾದಶೆಟ್ಟಿ, ಗಜೇಂದ್ರ, ಸಿದ್ದಶೆಟ್ಟಿ, ನಾಗರಾಜು, ಯೋಗೀಶ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-38-1955113403</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಂಜನಗೂಡು: ‘ಉಪ್ಪಾರ ಸಮುದಾಯ ಆರ್ಥಿಕವಾಗಿ, ರಾಜಕೀಯವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದೆ. ಹೀಗಾಗಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಒದಗಿಸಲು ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ತಾಲೂಕು ಉಪ್ಪಾರ ಸಮುದಾಯದ ಜಿಲ್ಲಾಧ್ಯಕ್ಷ ಕರಳಾಪುರ ನಾಗರಾಜು ಆಗ್ರಹಿಸಿದರು.</p>.<p>ನಗರದ ಶ್ರೀಕಂಠೇಶ್ವರ ದೇವಾಲಯದ ಬಳಿ ಇರುವ ಉಪ್ಪಾರ ಸಮುದಾಯದಲ್ಲಿ ಸಮುದಾಯದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಉಪ್ಪಾರ ಸಮುದಾಯ ಶಾಸಕ ಪುಟ್ಟರಂಗಶೆಟ್ಟಿ ಅವರ ಮಾತಿಗೆ ಬೆಲೆ ನೀಡಿ ಸಮುದಾಯದ ಶೇ 90ರಷ್ಟು ಜನರು ಕಾಂಗ್ರೆಸ್ ಬೆಂಬಲಿಸುತ್ತಾ ಬಂದಿದ್ದಾರೆ. ಅವರಿಗೆ ನೂತನ ಸಚಿವ ಸಂಪುಟದಲ್ಲಾದರೂ ಸಚಿವ ಸ್ಥಾನ ನೀಡಿ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ಮುಂದಾಗಬೇಕು’ ಎಂದು ಒತ್ತಾಯಿಸಿದರು.</p>.<p>‘ಧ್ರುವನಾರಾಯಣ್ ಅವರು ಕಾಂಗ್ರೆಸ್ಗೆ ಶ್ರಮಿಸಿರುವ ಸೇವೆ ಪರಿಗಣಿಸಿ ಮೈಸೂರು ಜಿಲ್ಲೆಯಿಂದ ಶಾಸಕ ದರ್ಶನ್ ಧ್ರುವನಾರಾಯಣ್ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದರು.</p>.<p>ತಾ.ಪಂ ಮಾಜಿ ಸದಸ್ಯ ಎಚ್ಎಸ್ ಮೂಗಶೆಟ್ಟಿ ಮಾತನಾಡಿದರು. ಕನಕ ನಗರ ಮಹದೇವು, ಹೆಮ್ಮರಗಾಲ ಸೋಮಣ್ಣ, ಬಾಲಚಂದ್ರು, ಗೋವಿಂದರಾಜು, ಶ್ರೀನಿವಾಸ್, ಮುದ್ದುಮಾದಶೆಟ್ಟಿ, ಗಜೇಂದ್ರ, ಸಿದ್ದಶೆಟ್ಟಿ, ನಾಗರಾಜು, ಯೋಗೀಶ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-38-1955113403</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>