<p><strong>ನಂಜನಗೂಡು (ಮೈಸೂರು):</strong> ತಾಲ್ಲೂಕಿನ ಕೊತ್ತನಹಳ್ಳಿ ಗ್ರಾಮದಲ್ಲಿ ಸೋಮವಾರ ಜಯರಾಮ ಎಂಬವರ ಪತ್ನಿ ಮಹದೇವಮ್ಮ (45), ಮಗಳು ಪ್ರಿಯಾ (20) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ. </p>.<p>ದ್ವಿತೀಯ ಪಿಯುಸಿ ಉತ್ತೀರ್ಣಳಾಗಿದ್ದ ಪ್ರಿಯಾ ಸಿಇಟಿ, ಎನ್ಇಇಟಿ ಪರೀಕ್ಷೆ ಬರೆದಿದ್ದು, ಕಡಿಮೆ ಅಂಕ ಬಂದಿದೆ ಎಂದು ಮನನೊಂದಿದ್ದಳು. ಇದರಿಂದಾಗಿ ತಾಯಿ ಕೂಡ ಖಿನ್ನತೆಗೆ ಒಳಗಾಗಿದ್ದರು. ಸೋಮವಾರ ಬೆಳಿಗ್ಗೆ ಮನೆಯ ಕೊಟ್ಟಿಗೆಯಲ್ಲಿ ತಾಯಿ ಮಹದೇವಮ್ಮ ಮತ್ತು ಮಗಳು ಪ್ರಿಯಾ ಇಬ್ಬರು ಅಕ್ಕ-ಪಕ್ಕದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿದ್ದಾರೆ.</p>.<p>ಆರೋಪ: ‘ಮೃತ ಮಹದೇವಮ್ಮಳ ಪತಿ ಜಯರಾಮ ಮಹದೇವಮ್ಮಳಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ, ಈ ಸಂಬಂಧ ದಿನನಿತ್ಯ ಖ್ಯಾತೆ ತೆಗೆದು ಜಗಳ ಮಾಡುತ್ತಿದ್ ದಎಂದು ಪೊಲೀಸರಿಗೆ ದೂರನ್ನೂ ನೀಡಿದ್ದರು. ಪೋಲೀಸರು ಕ್ರಮ ಕೈಗೊಂಡಿರಲಿಲ್ಲ. ಜಯರಾಮನ ವರ್ತನೆ ಮಿತಿ ಮೀರಿದ್ದರಿಂದ ಬೇಸತ್ತು ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮಹದೇವಮ್ಮ ಅವರ ತವರಿನ ಸಂಬಂಧಿಕರು ಆರೋಪಿಸಿದ್ದಾರೆ.</p>.<p> ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಭೇಟಿ ನೀಡಿ ಮಹಜರು ನಡೆಸಿದರು. ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು (ಮೈಸೂರು):</strong> ತಾಲ್ಲೂಕಿನ ಕೊತ್ತನಹಳ್ಳಿ ಗ್ರಾಮದಲ್ಲಿ ಸೋಮವಾರ ಜಯರಾಮ ಎಂಬವರ ಪತ್ನಿ ಮಹದೇವಮ್ಮ (45), ಮಗಳು ಪ್ರಿಯಾ (20) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ. </p>.<p>ದ್ವಿತೀಯ ಪಿಯುಸಿ ಉತ್ತೀರ್ಣಳಾಗಿದ್ದ ಪ್ರಿಯಾ ಸಿಇಟಿ, ಎನ್ಇಇಟಿ ಪರೀಕ್ಷೆ ಬರೆದಿದ್ದು, ಕಡಿಮೆ ಅಂಕ ಬಂದಿದೆ ಎಂದು ಮನನೊಂದಿದ್ದಳು. ಇದರಿಂದಾಗಿ ತಾಯಿ ಕೂಡ ಖಿನ್ನತೆಗೆ ಒಳಗಾಗಿದ್ದರು. ಸೋಮವಾರ ಬೆಳಿಗ್ಗೆ ಮನೆಯ ಕೊಟ್ಟಿಗೆಯಲ್ಲಿ ತಾಯಿ ಮಹದೇವಮ್ಮ ಮತ್ತು ಮಗಳು ಪ್ರಿಯಾ ಇಬ್ಬರು ಅಕ್ಕ-ಪಕ್ಕದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿದ್ದಾರೆ.</p>.<p>ಆರೋಪ: ‘ಮೃತ ಮಹದೇವಮ್ಮಳ ಪತಿ ಜಯರಾಮ ಮಹದೇವಮ್ಮಳಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ, ಈ ಸಂಬಂಧ ದಿನನಿತ್ಯ ಖ್ಯಾತೆ ತೆಗೆದು ಜಗಳ ಮಾಡುತ್ತಿದ್ ದಎಂದು ಪೊಲೀಸರಿಗೆ ದೂರನ್ನೂ ನೀಡಿದ್ದರು. ಪೋಲೀಸರು ಕ್ರಮ ಕೈಗೊಂಡಿರಲಿಲ್ಲ. ಜಯರಾಮನ ವರ್ತನೆ ಮಿತಿ ಮೀರಿದ್ದರಿಂದ ಬೇಸತ್ತು ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮಹದೇವಮ್ಮ ಅವರ ತವರಿನ ಸಂಬಂಧಿಕರು ಆರೋಪಿಸಿದ್ದಾರೆ.</p>.<p> ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಭೇಟಿ ನೀಡಿ ಮಹಜರು ನಡೆಸಿದರು. ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>