<p><strong>ಮೈಸೂರು:</strong> ‘ನಾರಾಯಣ ಗುರುಗಳ ಸಿದ್ಧಾಂತ ಸಾರ್ವಕಾಲಿಕ’ ಎಂದು ಸೋಲೂರು ಆರ್ಯ ಈಡಿಗ ಸಂಸ್ಥಾನದ ಪೀಠಾಧ್ಯಕ್ಷ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು.</p>.<p>ನಗರದ ಜೆ.ಕೆ.ಮೈದಾನದ ಸಭಾಂಗಣದಲ್ಲಿ ನಾರಾಯಣ ಧರ್ಮ ಪರಿಪಾಲನಾ ಯೋಗ ಶಾಖೆ, ಬ್ರಹ್ಮಶ್ರೀ ನಾರಾಯಣ ಗುರು ಮಿಷನ್ ಮತ್ತು ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಭಾನುವಾರ ನಡೆದ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಯೊಬ್ಬರೂ ನಾರಾಯಣ ಗುರುಗಳ ಆದರ್ಶ, ತತ್ವ– ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವು ಜಾತಿ, ಧರ್ಮ ತಾರತಮ್ಯಗಳ ಭೇದಭಾವ ಮೀರಿದ ಸಾರ್ವತ್ರಿಕ ಮಾನವೀಯ ಮೌಲ್ಯ ಪ್ರತಿಪಾದಿಸುತ್ತವೆ’ ಎಂದು ತಿಳಿಸಿದರು.</p>.<p><strong>ವಿದ್ಯೆಯಿಂದ ಪ್ರಬುದ್ಧರಾಗಿ</strong></p>.<p>‘ಅವರು ಸಾತ್ವಿಕ ಮನೋಭಾವ ಹೊಂದಿ ಮೌನ ಕ್ರಾಂತಿಯ ಹೋರಾಟ ನಡೆಸಿದ್ದರು. ಸಮುದಾಯ ವಿದ್ಯೆಯಿಂದ ಪ್ರಬುದ್ಧರಾಗಿ, ಸಂಘಟನೆಯಿಂದ ಶಕ್ತರಾಗಿ ಎಂಬ ಸಂದೇಶ ಸಾರಿದ್ದರು. ಸಮಾಜದಲ್ಲಿದ್ದ ತಾರತಮ್ಯ ಹೋಗಲಾಡಿಸಿ, ಶೋಷಿತ ವರ್ಗದ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜೀವನವನ್ನೇ ಮುಡಿಪಾಗಿಟ್ಟಿದ್ದ ಮಹಾನುಭಾವ’ ಎಂದು ಸ್ಮರಿಸಿದರು.</p>.<p>‘ಮಕ್ಕಳಿಗೆ ಶಿಕ್ಷಣ ಕೊಡಿಸುವಲ್ಲಿ ಹೆಚ್ಚಿನ ಒತ್ತು ನೀಡಿದರೆ ಸಮುದಾಯದ ಅಭಿವೃದ್ಧಿ ಸಾಧ್ಯ. ಎಲ್ಲಾ ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಜೊತೆಗೆ ಸಂಸ್ಕಾರವನ್ನೂ ಕಲಿಸಬೇಕು’ ಎಂದು ಸಲಹೆ ನೀಡಿದರು.</p>.<p>ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ, ‘ನಾರಾಯಣ ಗುರುಗಳು ಅಂದಿನ ಕಾಲಘಟ್ಟದಲ್ಲಿ ಸಮಾಜದಲ್ಲಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡುವ ಮೂಲಕ ಶಿಕ್ಷಣಕ್ಕೆ ಆದ್ಯತೆ ನೀಡಿದ್ದರು. ಜಾತಿ ಪದ್ಧತಿ ಮತ್ತು ಶೋಷಣೆ ವಿರುದ್ಧ ಹೋರಾಡಿ ಶೋಷಿತ ವರ್ಗದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಿದ್ದರು’ ಎಂದು ತಿಳಿಸಿದರು.</p>.<p>ಎಸ್ಎನ್ಡಿಪಿ ಕೊಡಗು ಯೂನಿಯನ್ ಅಧ್ಯಕ್ಷ ವಿ.ಕೆ.ಲೋಕೇಶ್ ಮಾತನಾಡಿ, ‘ಅಂದಿನ ಕಾಲದಲ್ಲಿದ್ದ ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದ ನಾರಾಯಣ ಗುರುಗಳು, ಅನಕ್ಷರತೆ ಹೋಗಲಾಡಿಸಲು ಶಿಕ್ಷಣಕ್ಕೆ ಒತ್ತು ನೀಡಿ ಸಾಮಾಜಿಕ ಸುಧಾರಣೆಗೆ ನಾಂದಿ ಹಾಡಿದ್ದರು’ ಎಂದರು.</p>.<p>ಕಾರ್ಯಕ್ರಮಕ್ಕೂ ಮುನ್ನ ಮಕ್ಕಳಿಗೆ ಹೂವಿನ ರಂಗೋಲಿ, ಚಿತ್ರಕಲಾ ಸ್ಪರ್ಧೆ ನಡೆಯಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಾಧಕರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ತಿರುವಾತಿರ ನೃತ್ಯ, ಜಾನು ಕಲಾತಂಡದಿಂದ ಹಾಸ್ಯ ಕಾರ್ಯಕ್ರಮ ನಡೆಯಿತು.</p>.<p>ನಾರಾಯಣ ಧರ್ಮ ಪರಿಪಾಲನಾ ಯೋಗ ಶಾಖೆ ಅಧ್ಯಕ್ಷ ಜಿ.ರಾಜೇದ್ರನ್, ಬ್ರಹ್ಮಶ್ರೀ ನಾರಾಯಣಗುರು ಮಿಷನ್ ಅಂಡ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸುಕುಮಾರನ್, ಮನೋಜ್ಕುಮಾರ್, ಸಂತೋಷ್ರಾಮ್, ವಿದ್ಯಾಸಾಗರ ಕದಂಬ, ಬಿ.ವಿ.ವೆಂಕಪ್ಪ, ಪ್ರೇಮಾನಂದ್, ರಾಘವನ್, ಸತ್ಯನ್, ಆನಂದ್, ಸೂರ್ಯನಾರಾಯಣ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನಾರಾಯಣ ಗುರುಗಳ ಸಿದ್ಧಾಂತ ಸಾರ್ವಕಾಲಿಕ’ ಎಂದು ಸೋಲೂರು ಆರ್ಯ ಈಡಿಗ ಸಂಸ್ಥಾನದ ಪೀಠಾಧ್ಯಕ್ಷ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು.</p>.<p>ನಗರದ ಜೆ.ಕೆ.ಮೈದಾನದ ಸಭಾಂಗಣದಲ್ಲಿ ನಾರಾಯಣ ಧರ್ಮ ಪರಿಪಾಲನಾ ಯೋಗ ಶಾಖೆ, ಬ್ರಹ್ಮಶ್ರೀ ನಾರಾಯಣ ಗುರು ಮಿಷನ್ ಮತ್ತು ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಭಾನುವಾರ ನಡೆದ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಯೊಬ್ಬರೂ ನಾರಾಯಣ ಗುರುಗಳ ಆದರ್ಶ, ತತ್ವ– ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವು ಜಾತಿ, ಧರ್ಮ ತಾರತಮ್ಯಗಳ ಭೇದಭಾವ ಮೀರಿದ ಸಾರ್ವತ್ರಿಕ ಮಾನವೀಯ ಮೌಲ್ಯ ಪ್ರತಿಪಾದಿಸುತ್ತವೆ’ ಎಂದು ತಿಳಿಸಿದರು.</p>.<p><strong>ವಿದ್ಯೆಯಿಂದ ಪ್ರಬುದ್ಧರಾಗಿ</strong></p>.<p>‘ಅವರು ಸಾತ್ವಿಕ ಮನೋಭಾವ ಹೊಂದಿ ಮೌನ ಕ್ರಾಂತಿಯ ಹೋರಾಟ ನಡೆಸಿದ್ದರು. ಸಮುದಾಯ ವಿದ್ಯೆಯಿಂದ ಪ್ರಬುದ್ಧರಾಗಿ, ಸಂಘಟನೆಯಿಂದ ಶಕ್ತರಾಗಿ ಎಂಬ ಸಂದೇಶ ಸಾರಿದ್ದರು. ಸಮಾಜದಲ್ಲಿದ್ದ ತಾರತಮ್ಯ ಹೋಗಲಾಡಿಸಿ, ಶೋಷಿತ ವರ್ಗದ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜೀವನವನ್ನೇ ಮುಡಿಪಾಗಿಟ್ಟಿದ್ದ ಮಹಾನುಭಾವ’ ಎಂದು ಸ್ಮರಿಸಿದರು.</p>.<p>‘ಮಕ್ಕಳಿಗೆ ಶಿಕ್ಷಣ ಕೊಡಿಸುವಲ್ಲಿ ಹೆಚ್ಚಿನ ಒತ್ತು ನೀಡಿದರೆ ಸಮುದಾಯದ ಅಭಿವೃದ್ಧಿ ಸಾಧ್ಯ. ಎಲ್ಲಾ ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಜೊತೆಗೆ ಸಂಸ್ಕಾರವನ್ನೂ ಕಲಿಸಬೇಕು’ ಎಂದು ಸಲಹೆ ನೀಡಿದರು.</p>.<p>ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ, ‘ನಾರಾಯಣ ಗುರುಗಳು ಅಂದಿನ ಕಾಲಘಟ್ಟದಲ್ಲಿ ಸಮಾಜದಲ್ಲಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡುವ ಮೂಲಕ ಶಿಕ್ಷಣಕ್ಕೆ ಆದ್ಯತೆ ನೀಡಿದ್ದರು. ಜಾತಿ ಪದ್ಧತಿ ಮತ್ತು ಶೋಷಣೆ ವಿರುದ್ಧ ಹೋರಾಡಿ ಶೋಷಿತ ವರ್ಗದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಿದ್ದರು’ ಎಂದು ತಿಳಿಸಿದರು.</p>.<p>ಎಸ್ಎನ್ಡಿಪಿ ಕೊಡಗು ಯೂನಿಯನ್ ಅಧ್ಯಕ್ಷ ವಿ.ಕೆ.ಲೋಕೇಶ್ ಮಾತನಾಡಿ, ‘ಅಂದಿನ ಕಾಲದಲ್ಲಿದ್ದ ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದ ನಾರಾಯಣ ಗುರುಗಳು, ಅನಕ್ಷರತೆ ಹೋಗಲಾಡಿಸಲು ಶಿಕ್ಷಣಕ್ಕೆ ಒತ್ತು ನೀಡಿ ಸಾಮಾಜಿಕ ಸುಧಾರಣೆಗೆ ನಾಂದಿ ಹಾಡಿದ್ದರು’ ಎಂದರು.</p>.<p>ಕಾರ್ಯಕ್ರಮಕ್ಕೂ ಮುನ್ನ ಮಕ್ಕಳಿಗೆ ಹೂವಿನ ರಂಗೋಲಿ, ಚಿತ್ರಕಲಾ ಸ್ಪರ್ಧೆ ನಡೆಯಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಾಧಕರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ತಿರುವಾತಿರ ನೃತ್ಯ, ಜಾನು ಕಲಾತಂಡದಿಂದ ಹಾಸ್ಯ ಕಾರ್ಯಕ್ರಮ ನಡೆಯಿತು.</p>.<p>ನಾರಾಯಣ ಧರ್ಮ ಪರಿಪಾಲನಾ ಯೋಗ ಶಾಖೆ ಅಧ್ಯಕ್ಷ ಜಿ.ರಾಜೇದ್ರನ್, ಬ್ರಹ್ಮಶ್ರೀ ನಾರಾಯಣಗುರು ಮಿಷನ್ ಅಂಡ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸುಕುಮಾರನ್, ಮನೋಜ್ಕುಮಾರ್, ಸಂತೋಷ್ರಾಮ್, ವಿದ್ಯಾಸಾಗರ ಕದಂಬ, ಬಿ.ವಿ.ವೆಂಕಪ್ಪ, ಪ್ರೇಮಾನಂದ್, ರಾಘವನ್, ಸತ್ಯನ್, ಆನಂದ್, ಸೂರ್ಯನಾರಾಯಣ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>