<p><strong>ಪಿರಿಯಾಪಟ್ಟಣ:</strong> ‘ಆರೋಗ್ಯವಂತರಾಗಿದ್ದರೆ ಮಾತ್ರ ದೀರ್ಘಾಯುಷಿಗಳಾಗಿ ಬದುಕಲು ಸಾಧ್ಯ’ ಎಂದು ಪಟ್ಟಣದ ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶ ಎಂ. ರಾಜು ಎಂದು ತಿಳಿಸಿದರು.<br><br> ಪಟ್ಟಣಲ್ಲಿ ಗುರುವಾರ ನಡೆದ ರಾಷ್ಟ್ರೀಯ ಪೋಷಣ್ ಅಭಿಯಾನ್ ಸಪ್ತಾಹವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯಾರಾದರೂ ಅನಾರೋಗ್ಯಕ್ಕೀಡಾದರೆ ಅವರು ಮಾತ್ರ ತೊಂದರೆ ಅನುಭವಿಸುವುದಿಲ್ಲ, ಅವರ ಕುಟುಂಬದವರು, ಅವಲಂಬಿತರು ಆರ್ಥಿಕವಾಗಿ ಮತ್ತು ಮಾನಸಿಕವಾಗಿ ತೊಂದರೆ ಅನುಭವಿಸುತ್ತಾರೆ ಎಂದು ಹೇಳಿದರು.</p>.<p>ಅಪೌಷ್ಟಿಕತೆಯಿಂದ ಮಕ್ಕಳು, ಮಹಿಳೆಯರು, ವಯೋವೃದ್ಧರು, ಗರ್ಭಿಣಿಯರು ಬಳಲ ಬಾರದು ಎಂದು ಕೇಂದ್ರ ಸರ್ಕಾರ ರಾಷ್ಟ್ರೀಯ ಪೋಷಣ್ ಅಭಿಯಾನ್ ಜಾರಿಗೆ ತಂದಿದ್ದು, ಇದರೊಂದಿಗೆ ವ್ಯಾಪಕ ಪ್ರಚಾರ ಮಾಡುವ ಮೂಲಕ ಅಪೌಷ್ಟಿಕತೆ ಹೋಗಲಾಡಿಸಲು ಯತ್ನಿಸುತ್ತಿದೆ ಎಂದರು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ. ಆರ್. ಯೋಗೀಶ್ , ಟಿಎಚ್ಒ ಡಾ. ಶ್ರೀನಿವಾಸ್, ಸಿಡಿಪಿಒ ಗೀತಾ, ವಕೀಲರ ಸಂಘದ ಅಧ್ಯಕ್ಷ ಧನಪಾಲ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ. ಪಿ. ಲತಾ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ:</strong> ‘ಆರೋಗ್ಯವಂತರಾಗಿದ್ದರೆ ಮಾತ್ರ ದೀರ್ಘಾಯುಷಿಗಳಾಗಿ ಬದುಕಲು ಸಾಧ್ಯ’ ಎಂದು ಪಟ್ಟಣದ ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶ ಎಂ. ರಾಜು ಎಂದು ತಿಳಿಸಿದರು.<br><br> ಪಟ್ಟಣಲ್ಲಿ ಗುರುವಾರ ನಡೆದ ರಾಷ್ಟ್ರೀಯ ಪೋಷಣ್ ಅಭಿಯಾನ್ ಸಪ್ತಾಹವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯಾರಾದರೂ ಅನಾರೋಗ್ಯಕ್ಕೀಡಾದರೆ ಅವರು ಮಾತ್ರ ತೊಂದರೆ ಅನುಭವಿಸುವುದಿಲ್ಲ, ಅವರ ಕುಟುಂಬದವರು, ಅವಲಂಬಿತರು ಆರ್ಥಿಕವಾಗಿ ಮತ್ತು ಮಾನಸಿಕವಾಗಿ ತೊಂದರೆ ಅನುಭವಿಸುತ್ತಾರೆ ಎಂದು ಹೇಳಿದರು.</p>.<p>ಅಪೌಷ್ಟಿಕತೆಯಿಂದ ಮಕ್ಕಳು, ಮಹಿಳೆಯರು, ವಯೋವೃದ್ಧರು, ಗರ್ಭಿಣಿಯರು ಬಳಲ ಬಾರದು ಎಂದು ಕೇಂದ್ರ ಸರ್ಕಾರ ರಾಷ್ಟ್ರೀಯ ಪೋಷಣ್ ಅಭಿಯಾನ್ ಜಾರಿಗೆ ತಂದಿದ್ದು, ಇದರೊಂದಿಗೆ ವ್ಯಾಪಕ ಪ್ರಚಾರ ಮಾಡುವ ಮೂಲಕ ಅಪೌಷ್ಟಿಕತೆ ಹೋಗಲಾಡಿಸಲು ಯತ್ನಿಸುತ್ತಿದೆ ಎಂದರು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ. ಆರ್. ಯೋಗೀಶ್ , ಟಿಎಚ್ಒ ಡಾ. ಶ್ರೀನಿವಾಸ್, ಸಿಡಿಪಿಒ ಗೀತಾ, ವಕೀಲರ ಸಂಘದ ಅಧ್ಯಕ್ಷ ಧನಪಾಲ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ. ಪಿ. ಲತಾ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>