<p><strong>ಮೈಸೂರು:</strong> ‘ಪರಿಶಿಷ್ಟ ಪಂಗಡಕ್ಕೆ ನೀಡುತ್ತಿರುವ ಮೀಸಲಾತಿಯನ್ನು ಶೇ.3ರಿಂದ ಶೇ 7ಕ್ಕೆ ಹೆಚ್ಚಿಸಬೇಕೆಂಬ ಸಮಾಜದ ಬೇಡಿಕೆಯನ್ನು ಈಡೇರಿಸಲು ರಾಜ್ಯ ಸರ್ಕಾರವು ಐತಿಹಾಸಿಕ ನಿರ್ಣಯ ಮಾಡಿರುವುದು ಸ್ವಾಗತಾರ್ಹವಾಗಿದೆ’ ಎಂದು ಮೇಯರ್ ಶಿವಕುಮಾರ್ ಹೇಳಿದರು.</p>.<p>ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಕ್ರಮ ವಹಿಸಿದ ಹಿನ್ನೆಲೆಯಲ್ಲಿ ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಸುಣ್ಣದಕೇರಿಯ ಮಲೆಮಹದೇಶ್ವರ ದೇವಸ್ಥಾನದ ಎದುರು ಶನಿವಾರ ನಾಯಕ ಸಮಾಜದವರು ನಡೆಸಿದ ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ಸಿಹಿ ವಿತರಿಸಿ ಅವರು ಮಾತನಾಡಿದರು.</p>.<p>‘ಬೇಡಿಕೆ ಈಡೇರಿಸುವ ಕುರಿತು ಸರ್ವ ಪಕ್ಷಗಳ ಸಭೆಯಲ್ಲಿ ಹೆಚ್ಚಿಸುವ ನಿರ್ಧಾರ ಮಾಡಿದಲ್ಲದೆ, ಸಚಿವ ಸಂಪುಟ ಸಭೆಯಲ್ಲೂ ಅಸ್ತು ಎಂದಿರುವುದು ಸ್ವಾಗತಾರ್ಹವಾಗಿದೆ. ವಾಲ್ಮೀಕಿ ಮಠದ ಸ್ವಾಮೀಜಿಯ ಹೋರಾಟ ಮತ್ತು ಇಡೀ ನಾಯಕ ಸಮಾಜಕ್ಕೆ ಬಿಜೆಪಿ ಸರ್ಕಾರವು ದೊಡ್ಡ ಕೊಡುಗೆಯನ್ನು ನೀಡಿದೆ. ಇದು ಸಮಾಜದವರಲ್ಲಿ ಹರ್ಷ ಉಂಟು ಮಾಡಿದೆ’ ಎಂದು ಹೇಳಿದರು.</p>.<p>‘ಪರಿವಾರ, ತಳವಾರ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ್ದ ಸರ್ಕಾರವು ಈಗ ಮತ್ತೊಂದು ನಿರ್ಧಾರ ಕೈಗೊಂಡಿರುವುದು ನಮ್ಮ ಸರ್ಕಾರವು ಸಮಾಜದ ಮೇಲೆ ಇಟ್ಟಿರುವ ವಿಶ್ವಾಸವನ್ನು ತೋರಿಸುತ್ತದೆ. ಸ್ವಾಮೀಜಿ ಹೋರಾಟಕ್ಕೆ ಇಡೀ ನಾಯಕ ಸಮಾಜವೇ ಬೆನ್ನಿಗೆ ನಿಂತಿತ್ತು. ಸಚಿವ ಬಿ.ಶ್ರೀರಾಮುಲು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಸರ್ಕಾರದ ಮೇಲೆ ಒತ್ತಡ ತಂದಿದ್ದಾರೆ’ ಎಂದರು.</p>.<p>ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮುಖಂಡರು, ಸ್ವಾಮೀಜಿ ಪರವಾಗಿ ಜೈಕಾರ ಹಾಕಿದರು.</p>.<p>ಮುಖಂಡರಾದ ಸುಂದರರಾಜ್, ನಾಗೇಶ್, ಲಕ್ಷ್ಮಣ್, ಕೃಷ್ಣನಾಯಕ, ವಿಜಯಕುಮಾರ ನಾಯಕ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಪರಿಶಿಷ್ಟ ಪಂಗಡಕ್ಕೆ ನೀಡುತ್ತಿರುವ ಮೀಸಲಾತಿಯನ್ನು ಶೇ.3ರಿಂದ ಶೇ 7ಕ್ಕೆ ಹೆಚ್ಚಿಸಬೇಕೆಂಬ ಸಮಾಜದ ಬೇಡಿಕೆಯನ್ನು ಈಡೇರಿಸಲು ರಾಜ್ಯ ಸರ್ಕಾರವು ಐತಿಹಾಸಿಕ ನಿರ್ಣಯ ಮಾಡಿರುವುದು ಸ್ವಾಗತಾರ್ಹವಾಗಿದೆ’ ಎಂದು ಮೇಯರ್ ಶಿವಕುಮಾರ್ ಹೇಳಿದರು.</p>.<p>ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಕ್ರಮ ವಹಿಸಿದ ಹಿನ್ನೆಲೆಯಲ್ಲಿ ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಸುಣ್ಣದಕೇರಿಯ ಮಲೆಮಹದೇಶ್ವರ ದೇವಸ್ಥಾನದ ಎದುರು ಶನಿವಾರ ನಾಯಕ ಸಮಾಜದವರು ನಡೆಸಿದ ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ಸಿಹಿ ವಿತರಿಸಿ ಅವರು ಮಾತನಾಡಿದರು.</p>.<p>‘ಬೇಡಿಕೆ ಈಡೇರಿಸುವ ಕುರಿತು ಸರ್ವ ಪಕ್ಷಗಳ ಸಭೆಯಲ್ಲಿ ಹೆಚ್ಚಿಸುವ ನಿರ್ಧಾರ ಮಾಡಿದಲ್ಲದೆ, ಸಚಿವ ಸಂಪುಟ ಸಭೆಯಲ್ಲೂ ಅಸ್ತು ಎಂದಿರುವುದು ಸ್ವಾಗತಾರ್ಹವಾಗಿದೆ. ವಾಲ್ಮೀಕಿ ಮಠದ ಸ್ವಾಮೀಜಿಯ ಹೋರಾಟ ಮತ್ತು ಇಡೀ ನಾಯಕ ಸಮಾಜಕ್ಕೆ ಬಿಜೆಪಿ ಸರ್ಕಾರವು ದೊಡ್ಡ ಕೊಡುಗೆಯನ್ನು ನೀಡಿದೆ. ಇದು ಸಮಾಜದವರಲ್ಲಿ ಹರ್ಷ ಉಂಟು ಮಾಡಿದೆ’ ಎಂದು ಹೇಳಿದರು.</p>.<p>‘ಪರಿವಾರ, ತಳವಾರ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ್ದ ಸರ್ಕಾರವು ಈಗ ಮತ್ತೊಂದು ನಿರ್ಧಾರ ಕೈಗೊಂಡಿರುವುದು ನಮ್ಮ ಸರ್ಕಾರವು ಸಮಾಜದ ಮೇಲೆ ಇಟ್ಟಿರುವ ವಿಶ್ವಾಸವನ್ನು ತೋರಿಸುತ್ತದೆ. ಸ್ವಾಮೀಜಿ ಹೋರಾಟಕ್ಕೆ ಇಡೀ ನಾಯಕ ಸಮಾಜವೇ ಬೆನ್ನಿಗೆ ನಿಂತಿತ್ತು. ಸಚಿವ ಬಿ.ಶ್ರೀರಾಮುಲು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಸರ್ಕಾರದ ಮೇಲೆ ಒತ್ತಡ ತಂದಿದ್ದಾರೆ’ ಎಂದರು.</p>.<p>ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮುಖಂಡರು, ಸ್ವಾಮೀಜಿ ಪರವಾಗಿ ಜೈಕಾರ ಹಾಕಿದರು.</p>.<p>ಮುಖಂಡರಾದ ಸುಂದರರಾಜ್, ನಾಗೇಶ್, ಲಕ್ಷ್ಮಣ್, ಕೃಷ್ಣನಾಯಕ, ವಿಜಯಕುಮಾರ ನಾಯಕ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>