ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಲಗಿರಿ ತಳವಾರ ನೇಮಕ

Last Updated 3 ಡಿಸೆಂಬರ್ 2022, 15:40 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನಭಾರತೀಯ ಭಾಷಾ ಸಂಸ್ಥಾನ(ಸಿಐಐಎಲ್‌)ದಲ್ಲಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕರನ್ನಾಗಿ ನಿವೃತ್ತ ಕುಲಪತಿ ಪ್ರೊ.ನೀಲಗಿರಿ ತಳವಾರ್ ಅವರನ್ನು ನೇಮಕ ಮಾಡಲಾಗಿದೆ.

ಕನ್ನಡದ ಅಭಿವೃದ್ಧಿಗಾಗಿ ಸಿಐಐಎಲ್‌ ನಿರ್ದೇಶಕರು ಹಾಗೂ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ನೋಡಲ್‌ ಅಧಿಕಾರಿಯ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನದಲ್ಲಿ ಹಾಗೂ ರಾಜ್ಯ ಸರ್ಕಾರದ ಸಮನ್ವಯದೊಂದಿಗೆ ಕೆಲಸ ಮಾಡುವ ಹುದ್ದೆ ಇದಾಗಿದೆ.

‘ನ.29ರಿಂದ ಕೆಲಸ ಆರಂಭಿಸಿದ್ದೇನೆ. ಶಾಸ್ತ್ರೀಯ ಕನ್ನಡದ ಬೆಳವಣಿಗೆಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಯೋಜನೆ ಇದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT