<p><strong>ಮೈಸೂರು</strong>: ‘ಶಿಕ್ಷಣ ವ್ಯವಸ್ಥೆಯ ಅಮೂಲಾಗ್ರ ಬದಲಾವಣೆಗಾಗಿಯೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಲಾಗಿದೆ’ ಎಂದು ಇತಿಹಾಸ ತಜ್ಞ ಡಾ.ಶೆಲ್ವಪಿಳ್ಳೈ ಅಯ್ಯಂಗಾರ್ ಹೇಳಿದರು.</p>.<p>ಚಾಮರಾಜಪುರಂನಲ್ಲಿ ಬುಧವಾರ ‘ಶ್ರೀ ಜಯಚಾಮರಾಜ ಅರಸು ಎಜುಕೇಶನ್ ಟ್ರಸ್ಟ್’ನ ‘ಶ್ರೀ ಚಾಮರಾಜೇಂದ್ರ ಸ್ಕೂಲ್ ಆಫ್ ಎಕ್ಸಲೆನ್ಸ್’ ಲೋಕಾರ್ಪಣೆಯಲ್ಲಿ ಅವರು ಮಾತನಾಡಿದರು.</p>.<p>‘ಸ್ವಾತಂತ್ರ್ಯ ನಂತರವೂ ಬ್ರಿಟಿಷರ ಮೆಕಾಲೆ ಶಿಕ್ಷಣ ಪದ್ಧತಿ ಮುಂದುವರಿದಿದೆ. ಕೌಶಲಾಧಾರಿತ ಶಿಕ್ಷಣ ದೊರೆಯದ್ದರಿಂದ ನಿರುದ್ಯೋಗ ಹೆಚ್ಚಾಗಿದೆ. ಲಕ್ಷಾಂತರ ಮಂದಿ ಎಂ.ಎ, ಪಿಎಚ್.ಡಿ ಪದವಿ ಪಡೆದರೂ ಅರ್ಹತೆಗೆ ತಕ್ಕಂತೆ ಕೆಲಸ ಸಿಗುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘1986ರ ಶಿಕ್ಷಣ ನೀತಿ ನಂತರ ಹೊಸ ನೀತಿ ಜಾರಿಗೊಂಡಿಲ್ಲ. ನೈತಿಕ ಹಾಗೂ ಮೌಲ್ಯಾಧಾರಿತ ಕೌಶಲ ಪ್ರಧಾನ ಶಿಕ್ಷಣವು ಬೇಕಿದೆ. ಎನ್ಇಪಿಯಿಂದಾಗಿ ಇಷ್ಟಪಟ್ಟ ವಿಷಯ ಕಲಿಯಬಹುದು. ಅಂತರ್ಶಿಸ್ತೀಯ ಮಾದರಿಯ ಪಠ್ಯಕ್ರಮ ಇರಲಿದೆ. ಗಣಿತವನ್ನು ಕಥೆ, ನಾಟಕದ ರೂಪದಲ್ಲಿ ಕಲಿಯಬಹುದು’ ಎಂದರು.</p>.<p>‘ಮೈಸೂರು ವಿಶ್ವವಿದ್ಯಾಲಯ ಇದೀಗ ಜಿಲ್ಲೆಗೆ ಮಾತ್ರ ಸೀಮಿತಗೊಂಡಿದೆ. ಶಿಕ್ಷಣ ಹಾಗೂ ಸಂಶೋಧನಾ ಚಟುವಟಿಕೆಗಳಿಗಿಂತ ಕಟ್ಟಡ ಕಾಮಗಾರಿಗಳೇ ಹೆಚ್ಚು ನಡೆಯುತ್ತಿವೆ. ಪಕ್ಷಪಾತಗಳು ಹೆಚ್ಚಿವೆ. ಹೀಗಾಗಿ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ’ ಎಂದು ಹೇಳಿದರು.</p>.<p>‘ಮಹಾರಾಜರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಶಿಕ್ಷಣ ಕ್ರಾಂತಿ ಮಾಡಿದರು. ಕೃಷಿ ಹಾಗೂ ಕೈಗಾರಿಕೆಗೂ ಆದ್ಯತೆ ನೀಡಿದರು. ಹೀಗಾಗಿಯೇ ಸಂಸ್ಥಾನವು ಮಾದರಿಯಾಗಿತ್ತು. ಆಗಿನ ಕಾಲದ ಭಾರತದ ಯಾವುದೇ ಭಾಗಕ್ಕೆ ಹೋಲಿಸಿದರೂ ಮೈಸೂರು ಸಂಸ್ಥಾನದ ಶಿಕ್ಷಣ ಮಟ್ಟವು ಎತ್ತರದ ಸ್ಥಾನ ಹೊಂದಿತ್ತು’ ಎಂದರು.</p>.<p>ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಮಾತನಾಡಿ, ‘ವಿದ್ಯೆಯನ್ನು ದಾನ ಮಾಡಿದರೆ ವಾಪಸ್ ಪಡೆಯಲಾಗದು. ಹೀಗಾಗಿಯೇ ಶತಮಾನದ ಹಿಂದೆಯೇ ವಾಣಿವಿಲಾಸ, ಚಾಮರಾಜೇಂದ್ರ ಶಾಲೆಗಳನ್ನು ಸ್ಥಾಪಿಸಲಾಯಿತು. ಕಾಲೇಜುಗಳು, ವಿಶ್ವವಿದ್ಯಾಲಯ ಸ್ಥಾಪನೆಯಾಗಿವೆ’ ಎಂದು ಸ್ಮರಿಸಿದರು. </p>.<p>‘ಚಾಮರಾಜೇಂದ್ರ ಒಡೆಯರ್ ಅವರು 1881ರಲ್ಲೇ ಪ್ರಜಾಪ್ರತಿನಿಧಿ ಸಭೆ ಸ್ಥಾಪಿಸಿದರು. ಸಭೆ, ಚಿಕಾಗೊದಲ್ಲಿ ವಿಶ್ವ ಧರ್ಮ ಸಮ್ಮೇಳನಕ್ಕೆ ವಿವೇಕಾನಂದರನ್ನು ಕಳುಹಿಸಿಕೊಟ್ಟರು. ಕೈಗಾರಿಕೆ, ಕೃಷಿಗೆ ಸಮಾನ ಪ್ರೋತ್ಸಾಹ ನೀಡಿದರು’ ಎಂದರು. </p>.<p>‘ಚಾಮರಾಜೇಂದ್ರ ಉತ್ಕೃಷ್ಠತಾ ಶಾಲೆಯು ಮಾದರಿ ಶಾಲೆಯಾಗಿದ್ದು, ಎನ್ಇಪಿ ಅಳವಡಿಸಿಕೊಂಡಿದೆ’ ಎಂದರು.</p>.<p>ಟ್ರಸ್ಟ್ ಅಧ್ಯಕ್ಷ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶಾಲೆಯ ವೆಬ್ಸೈಟ್ ಲೋಕಾರ್ಪಣೆ ಮಾಡಿದರು.</p>.<p>ಡಿಡಿಪಿಐ ರಾಮಚಂದ್ರರಾಜೇ ಅರಸ್, ಟ್ರಸ್ಟ್ನ ಕಾರ್ಯದರ್ಶಿ ಮಹೇಶ್ ಎನ್. ಅರಸ್, ಭಾರತೀ ಶ್ರೀಧರ್ ರಾಜೇ ಅರಸ್, ಪದ್ಮಶ್ರೀ ಅರಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಶಿಕ್ಷಣ ವ್ಯವಸ್ಥೆಯ ಅಮೂಲಾಗ್ರ ಬದಲಾವಣೆಗಾಗಿಯೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಲಾಗಿದೆ’ ಎಂದು ಇತಿಹಾಸ ತಜ್ಞ ಡಾ.ಶೆಲ್ವಪಿಳ್ಳೈ ಅಯ್ಯಂಗಾರ್ ಹೇಳಿದರು.</p>.<p>ಚಾಮರಾಜಪುರಂನಲ್ಲಿ ಬುಧವಾರ ‘ಶ್ರೀ ಜಯಚಾಮರಾಜ ಅರಸು ಎಜುಕೇಶನ್ ಟ್ರಸ್ಟ್’ನ ‘ಶ್ರೀ ಚಾಮರಾಜೇಂದ್ರ ಸ್ಕೂಲ್ ಆಫ್ ಎಕ್ಸಲೆನ್ಸ್’ ಲೋಕಾರ್ಪಣೆಯಲ್ಲಿ ಅವರು ಮಾತನಾಡಿದರು.</p>.<p>‘ಸ್ವಾತಂತ್ರ್ಯ ನಂತರವೂ ಬ್ರಿಟಿಷರ ಮೆಕಾಲೆ ಶಿಕ್ಷಣ ಪದ್ಧತಿ ಮುಂದುವರಿದಿದೆ. ಕೌಶಲಾಧಾರಿತ ಶಿಕ್ಷಣ ದೊರೆಯದ್ದರಿಂದ ನಿರುದ್ಯೋಗ ಹೆಚ್ಚಾಗಿದೆ. ಲಕ್ಷಾಂತರ ಮಂದಿ ಎಂ.ಎ, ಪಿಎಚ್.ಡಿ ಪದವಿ ಪಡೆದರೂ ಅರ್ಹತೆಗೆ ತಕ್ಕಂತೆ ಕೆಲಸ ಸಿಗುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘1986ರ ಶಿಕ್ಷಣ ನೀತಿ ನಂತರ ಹೊಸ ನೀತಿ ಜಾರಿಗೊಂಡಿಲ್ಲ. ನೈತಿಕ ಹಾಗೂ ಮೌಲ್ಯಾಧಾರಿತ ಕೌಶಲ ಪ್ರಧಾನ ಶಿಕ್ಷಣವು ಬೇಕಿದೆ. ಎನ್ಇಪಿಯಿಂದಾಗಿ ಇಷ್ಟಪಟ್ಟ ವಿಷಯ ಕಲಿಯಬಹುದು. ಅಂತರ್ಶಿಸ್ತೀಯ ಮಾದರಿಯ ಪಠ್ಯಕ್ರಮ ಇರಲಿದೆ. ಗಣಿತವನ್ನು ಕಥೆ, ನಾಟಕದ ರೂಪದಲ್ಲಿ ಕಲಿಯಬಹುದು’ ಎಂದರು.</p>.<p>‘ಮೈಸೂರು ವಿಶ್ವವಿದ್ಯಾಲಯ ಇದೀಗ ಜಿಲ್ಲೆಗೆ ಮಾತ್ರ ಸೀಮಿತಗೊಂಡಿದೆ. ಶಿಕ್ಷಣ ಹಾಗೂ ಸಂಶೋಧನಾ ಚಟುವಟಿಕೆಗಳಿಗಿಂತ ಕಟ್ಟಡ ಕಾಮಗಾರಿಗಳೇ ಹೆಚ್ಚು ನಡೆಯುತ್ತಿವೆ. ಪಕ್ಷಪಾತಗಳು ಹೆಚ್ಚಿವೆ. ಹೀಗಾಗಿ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ’ ಎಂದು ಹೇಳಿದರು.</p>.<p>‘ಮಹಾರಾಜರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಶಿಕ್ಷಣ ಕ್ರಾಂತಿ ಮಾಡಿದರು. ಕೃಷಿ ಹಾಗೂ ಕೈಗಾರಿಕೆಗೂ ಆದ್ಯತೆ ನೀಡಿದರು. ಹೀಗಾಗಿಯೇ ಸಂಸ್ಥಾನವು ಮಾದರಿಯಾಗಿತ್ತು. ಆಗಿನ ಕಾಲದ ಭಾರತದ ಯಾವುದೇ ಭಾಗಕ್ಕೆ ಹೋಲಿಸಿದರೂ ಮೈಸೂರು ಸಂಸ್ಥಾನದ ಶಿಕ್ಷಣ ಮಟ್ಟವು ಎತ್ತರದ ಸ್ಥಾನ ಹೊಂದಿತ್ತು’ ಎಂದರು.</p>.<p>ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಮಾತನಾಡಿ, ‘ವಿದ್ಯೆಯನ್ನು ದಾನ ಮಾಡಿದರೆ ವಾಪಸ್ ಪಡೆಯಲಾಗದು. ಹೀಗಾಗಿಯೇ ಶತಮಾನದ ಹಿಂದೆಯೇ ವಾಣಿವಿಲಾಸ, ಚಾಮರಾಜೇಂದ್ರ ಶಾಲೆಗಳನ್ನು ಸ್ಥಾಪಿಸಲಾಯಿತು. ಕಾಲೇಜುಗಳು, ವಿಶ್ವವಿದ್ಯಾಲಯ ಸ್ಥಾಪನೆಯಾಗಿವೆ’ ಎಂದು ಸ್ಮರಿಸಿದರು. </p>.<p>‘ಚಾಮರಾಜೇಂದ್ರ ಒಡೆಯರ್ ಅವರು 1881ರಲ್ಲೇ ಪ್ರಜಾಪ್ರತಿನಿಧಿ ಸಭೆ ಸ್ಥಾಪಿಸಿದರು. ಸಭೆ, ಚಿಕಾಗೊದಲ್ಲಿ ವಿಶ್ವ ಧರ್ಮ ಸಮ್ಮೇಳನಕ್ಕೆ ವಿವೇಕಾನಂದರನ್ನು ಕಳುಹಿಸಿಕೊಟ್ಟರು. ಕೈಗಾರಿಕೆ, ಕೃಷಿಗೆ ಸಮಾನ ಪ್ರೋತ್ಸಾಹ ನೀಡಿದರು’ ಎಂದರು. </p>.<p>‘ಚಾಮರಾಜೇಂದ್ರ ಉತ್ಕೃಷ್ಠತಾ ಶಾಲೆಯು ಮಾದರಿ ಶಾಲೆಯಾಗಿದ್ದು, ಎನ್ಇಪಿ ಅಳವಡಿಸಿಕೊಂಡಿದೆ’ ಎಂದರು.</p>.<p>ಟ್ರಸ್ಟ್ ಅಧ್ಯಕ್ಷ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶಾಲೆಯ ವೆಬ್ಸೈಟ್ ಲೋಕಾರ್ಪಣೆ ಮಾಡಿದರು.</p>.<p>ಡಿಡಿಪಿಐ ರಾಮಚಂದ್ರರಾಜೇ ಅರಸ್, ಟ್ರಸ್ಟ್ನ ಕಾರ್ಯದರ್ಶಿ ಮಹೇಶ್ ಎನ್. ಅರಸ್, ಭಾರತೀ ಶ್ರೀಧರ್ ರಾಜೇ ಅರಸ್, ಪದ್ಮಶ್ರೀ ಅರಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>