<p><strong>ಮೈಸೂರು: </strong>‘ನೇತಾಜಿ ಸುಭಾಷ್ ಚಂದ್ರಬೋಸ್ ಅಪ್ರತಿಮ ದೇಶ ಭಕ್ತ’ ಎಂದು ವಿದ್ವಾಂಸ ಪ್ರೊ.ಕೆ. ಅನಂತರಾಮು ಹೇಳಿದರು.</p>.<p>ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮತ್ತು ವಾತ್ಸಲ್ಯ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ನಟರಾಜ ಪ್ರತಿಷ್ಠಾನ ಸಂಸ್ಥೆಯ ಸಭಾಂಗಣದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಜನ್ಮದಿನಾಚರಣೆ ಪ್ರಯುಕ್ತ ಮಂಗಳವಾರ ನಡೆದ ವಿಶೇಷ ಉಪನ್ಯಾಸ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ರಾಷ್ಟ್ರಭಕ್ತಿಯು ಅತ್ಯಂತ ಪ್ರಮುಖವಾದ ಮೌಲ್ಯವಾಗಿದ್ದು, ಇಂದಿನ ಯುವ ಸಮುದಾಯ ಅದನ್ನು ರೂಢಿಸಿಕೊಳ್ಳಬೇಕು. ಸ್ವಾಭಿಮಾನ, ಸಮಾಜಸೇವೆ, ಧೈರ್ಯ, ಅಚಲ ಆತ್ಮವಿಶ್ವಾಸ, ಅಪಾರವಾದ ದೇಶಪ್ರೇಮದಂತಹ ಆದರ್ಶ ವ್ಯಕ್ತಿತ್ವವನ್ನು ಹೊಂದಿದ್ದ ನೇತಾಜಿ ಯುವ ಸಮುದಾಯಕ್ಕೆ ಸ್ಫೂರ್ತಿಯಾಗಿದ್ದಾರೆ’ ಎಂದರು.</p>.<p>ಕೆಎಸ್ಒಯು ಕುಲಸಚಿವ ಪ್ರೊ.ಕೆ.ಎಲ್.ಎನ್.ಮೂರ್ತಿ ಮಾತನಾಡಿ, ‘ಭಾರತದ ಸ್ವಾತಂತ್ರ್ಯ ಸಮರಕ್ಕೆ ನೇತಾಜಿ ಕೊಡುಗೆ ಅಪಾರವಾಗಿದೆ. ಇಂಡಿಯನ್ ನ್ಯಾಷನಲ್ ಆರ್ಮಿಯನ್ನು ಕಟ್ಟಿ ಬ್ರಿಟಿಷರನ್ನು ಭಾರತದಿಂದ ತೊಲಗಿಸಬೇಕೆಂದು ಅವಿರತ ಹೋರಾಟವನ್ನು ಮಾಡಿದರು. ಭಾರತವು ಪೂರ್ಣ ಸ್ವರಾಜ್ಯವನ್ನು ಪಡೆಯಬೇಕು ಎನ್ನುವುದು ನೇತಾಜಿಯವರ ಕನಸಾಗಿತ್ತು’ ಎಂದು ನೆನೆದರು.</p>.<p>ಸಂಯೋಜನಾಧಿಕಾರಿ ಡಾ.ಮಂಜುನಾಥ್ ಪಿ., ವಿಶೇಷಾಧಿಕಾರಿ ಪ್ರೊ.ಎಸ್.ಶಿವರಾಜಪ್ಪ, ಪ್ರಾಂಶುಪಾಲ ಡಾ.ಮಹೇಶ್ ದಳಪತಿ, ಡಾ.ಜ್ಯೋತಿ ಶಂಕರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ನೇತಾಜಿ ಸುಭಾಷ್ ಚಂದ್ರಬೋಸ್ ಅಪ್ರತಿಮ ದೇಶ ಭಕ್ತ’ ಎಂದು ವಿದ್ವಾಂಸ ಪ್ರೊ.ಕೆ. ಅನಂತರಾಮು ಹೇಳಿದರು.</p>.<p>ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮತ್ತು ವಾತ್ಸಲ್ಯ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ನಟರಾಜ ಪ್ರತಿಷ್ಠಾನ ಸಂಸ್ಥೆಯ ಸಭಾಂಗಣದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಜನ್ಮದಿನಾಚರಣೆ ಪ್ರಯುಕ್ತ ಮಂಗಳವಾರ ನಡೆದ ವಿಶೇಷ ಉಪನ್ಯಾಸ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ರಾಷ್ಟ್ರಭಕ್ತಿಯು ಅತ್ಯಂತ ಪ್ರಮುಖವಾದ ಮೌಲ್ಯವಾಗಿದ್ದು, ಇಂದಿನ ಯುವ ಸಮುದಾಯ ಅದನ್ನು ರೂಢಿಸಿಕೊಳ್ಳಬೇಕು. ಸ್ವಾಭಿಮಾನ, ಸಮಾಜಸೇವೆ, ಧೈರ್ಯ, ಅಚಲ ಆತ್ಮವಿಶ್ವಾಸ, ಅಪಾರವಾದ ದೇಶಪ್ರೇಮದಂತಹ ಆದರ್ಶ ವ್ಯಕ್ತಿತ್ವವನ್ನು ಹೊಂದಿದ್ದ ನೇತಾಜಿ ಯುವ ಸಮುದಾಯಕ್ಕೆ ಸ್ಫೂರ್ತಿಯಾಗಿದ್ದಾರೆ’ ಎಂದರು.</p>.<p>ಕೆಎಸ್ಒಯು ಕುಲಸಚಿವ ಪ್ರೊ.ಕೆ.ಎಲ್.ಎನ್.ಮೂರ್ತಿ ಮಾತನಾಡಿ, ‘ಭಾರತದ ಸ್ವಾತಂತ್ರ್ಯ ಸಮರಕ್ಕೆ ನೇತಾಜಿ ಕೊಡುಗೆ ಅಪಾರವಾಗಿದೆ. ಇಂಡಿಯನ್ ನ್ಯಾಷನಲ್ ಆರ್ಮಿಯನ್ನು ಕಟ್ಟಿ ಬ್ರಿಟಿಷರನ್ನು ಭಾರತದಿಂದ ತೊಲಗಿಸಬೇಕೆಂದು ಅವಿರತ ಹೋರಾಟವನ್ನು ಮಾಡಿದರು. ಭಾರತವು ಪೂರ್ಣ ಸ್ವರಾಜ್ಯವನ್ನು ಪಡೆಯಬೇಕು ಎನ್ನುವುದು ನೇತಾಜಿಯವರ ಕನಸಾಗಿತ್ತು’ ಎಂದು ನೆನೆದರು.</p>.<p>ಸಂಯೋಜನಾಧಿಕಾರಿ ಡಾ.ಮಂಜುನಾಥ್ ಪಿ., ವಿಶೇಷಾಧಿಕಾರಿ ಪ್ರೊ.ಎಸ್.ಶಿವರಾಜಪ್ಪ, ಪ್ರಾಂಶುಪಾಲ ಡಾ.ಮಹೇಶ್ ದಳಪತಿ, ಡಾ.ಜ್ಯೋತಿ ಶಂಕರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>