‘ಬುಧವಾರ ಮಧ್ಯಾಹ್ನ 12ರಿಂದ ಗಡಿಯಲ್ಲಿ ನಿಗಾ ವಹಿಸಲಾಗಿದೆ. ಅಲ್ಲಿ ಇಬ್ಬರು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಥರ್ಮಲ್ ಸ್ಕ್ಯಾನ್ ಮಾಡಿ ಜ್ವರ ತಪಾಸಣೆ ನಡೆಸಿದ ನಂತರ ಪ್ರವೇಶ ಕೊಡುವಂತೆ ಸೂಚಿಸಲಾಗಿದೆ. ಕೇರಳದಿಂದ ಬರುವವರ ಮೇಲೆ ನಿಗಾ ವಹಿಸುವಂತೆ ದೊಡ್ಡಬೈರನಕುಪ್ಪೆ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಲಾಗಿದೆ. ಕರಪತ್ರಗಳನ್ನು ಮುದ್ರಿಸಲಾಗಿದ್ದು, ಅವುಗಳನ್ನು ಹಂಚಿಕೆ ಮಾಡಿ ಜಾಗೃತಿ ಮೂಡಿಸಲಾಗುವುದು’ ಎಂದು ಎಚ್.ಡಿ. ಕೋಟೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿ ‘ಪ್ರಜಾವಾಣಿ’ಗೆ ತಿಳಿಸಿದರು.