<p><strong>ಮೈಸೂರು:</strong> ಕಡೂರಿನ ನವೀನ್ ಕುಮಾರ್ ತಂಡದ ‘ವೀರಗಾಸೆ’, ಶಕೀಲ್ ಅಹ್ಮದ್ ನಿರ್ದೇಶನದ ‘ನಿರ್ದಿಗಂತ’ ಪ್ರಸ್ತುತಿ ‘ಕೊಡಲ್ಲ ಅಂದ್ರೆ ಕೊಡಲ್ಲ’ ನಾಟಕ ಪ್ರದರ್ಶನದೊಂದಿಗೆ ಭಾನುವಾರ, ಇಲ್ಲಿನ ಕಿರುರಂಗಮಂದಿರದಲ್ಲಿ 5 ದಿನ ನಡೆದ ‘ನಿರಂತರ ರಂಗ ಉತ್ಸವ’ಕ್ಕೆ ವೈಭವದ ತೆರೆಬಿತ್ತು.</p>.<p>ಜಾನಪದ, ರಂಗಗೀತೆ, ಹಿಂದೂಸ್ಥಾನಿ ಸಂಗೀತ, ನಾಟಕಗಳ ಹೂರಣದ ಸವಿಯನ್ನು ಎಲ್ಲರು ಸವಿದರು.</p>.<p>ಇದಕ್ಕೂ ಮೊದಲು ನಡೆದ ಸಮಾರೋಪದಲ್ಲಿ ಮಾತನಾಡಿದ ಲೇಖಕ ದೇವನೂರ ಬಸವರಾಜು, ‘ರಂಗಭೂಮಿ ಸದಭಿರುಚಿ, ಸಾಮರಸ್ಯ ಮತ್ತು ಮಾನವೀಯ ಮೌಲ್ಯ ಬೆಳೆಸುವ ಸಂಜೀವಿನಿ. ಜನರ ಬದುಕನ್ನು ಹಸನು ಮಾಡುವ ಅದು, ಸಮಾಜದಲ್ಲಿ ಪ್ರೀತಿ ಮತ್ತು ಸಾಮರಸ್ಯವನ್ನು ನೆಲೆಗೊಳಿಸುತ್ತದೆ’ ಎಂದರು. </p>.<p>‘ಪ್ರಸಕ್ತ ಕಾಲಘಟ್ಟವು ವಿಷಮಯವಾಗಿದ್ದು, ಜಾತಿ, ಧರ್ಮದ ಅಸಹನೆ ಹೆಚ್ಚಾಗಿದೆ. ಜನರಲ್ಲಿ ಪ್ರೀತಿ ಮತ್ತು ವಿಶ್ವಾಸವನ್ನು ಮರುನಿರ್ಮಿಸಲು ರಂಗಭೂಮಿ ಅತ್ಯುತ್ತಮ ಮಾರ್ಗವಾಗಿದೆ. ಮಾನವೀಯತೆ ಎಲ್ಲೆಡೆ ನೆಲೆಗೊಳಿಸಬೇಕಿದೆ. ಇಲ್ಲದಿದ್ದರೆ ಮುಂದಿನ ಪೀಳಿಗೆಯ ನೆಮ್ಮದಿ ಹಾಳಾಗಲಿದೆ’ ಎಂದು ಹೇಳಿದರು. </p>.<p>ರಂಗಕರ್ಮಿ ಚಿದಂಬರರಾವ್ ಜಂಬೆ ಮಾತನಾಡಿ, ‘ನಿರಂತರವು ಸಹಜರಂಗ ರಂಗ ತರಬೇತಿ ಶಿಬಿರ, ಕಾವ್ಯ ಓದು, ಸಾಹಿತ್ಯ ಹಾಗೂ ನಾಟಕಗಳ ಅಧ್ಯಯನದ ಮೂಲಕ ವಿದ್ಯಾರ್ಥಿಗಳನ್ನು ಸರಿಯಾದ ದಿಕ್ಕಿನತ್ತ ಕರೆದೊಯ್ಯುತ್ತಿದೆ’ ಎಂದರು. </p>.<p>ನಿರಂತರ ಫೌಂಡೇಷನ್ ಅಧ್ಯಕ್ಷ ಎಂ.ಎಂ.ಸುಗುಣ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಕಡೂರಿನ ನವೀನ್ ಕುಮಾರ್ ತಂಡದ ‘ವೀರಗಾಸೆ’, ಶಕೀಲ್ ಅಹ್ಮದ್ ನಿರ್ದೇಶನದ ‘ನಿರ್ದಿಗಂತ’ ಪ್ರಸ್ತುತಿ ‘ಕೊಡಲ್ಲ ಅಂದ್ರೆ ಕೊಡಲ್ಲ’ ನಾಟಕ ಪ್ರದರ್ಶನದೊಂದಿಗೆ ಭಾನುವಾರ, ಇಲ್ಲಿನ ಕಿರುರಂಗಮಂದಿರದಲ್ಲಿ 5 ದಿನ ನಡೆದ ‘ನಿರಂತರ ರಂಗ ಉತ್ಸವ’ಕ್ಕೆ ವೈಭವದ ತೆರೆಬಿತ್ತು.</p>.<p>ಜಾನಪದ, ರಂಗಗೀತೆ, ಹಿಂದೂಸ್ಥಾನಿ ಸಂಗೀತ, ನಾಟಕಗಳ ಹೂರಣದ ಸವಿಯನ್ನು ಎಲ್ಲರು ಸವಿದರು.</p>.<p>ಇದಕ್ಕೂ ಮೊದಲು ನಡೆದ ಸಮಾರೋಪದಲ್ಲಿ ಮಾತನಾಡಿದ ಲೇಖಕ ದೇವನೂರ ಬಸವರಾಜು, ‘ರಂಗಭೂಮಿ ಸದಭಿರುಚಿ, ಸಾಮರಸ್ಯ ಮತ್ತು ಮಾನವೀಯ ಮೌಲ್ಯ ಬೆಳೆಸುವ ಸಂಜೀವಿನಿ. ಜನರ ಬದುಕನ್ನು ಹಸನು ಮಾಡುವ ಅದು, ಸಮಾಜದಲ್ಲಿ ಪ್ರೀತಿ ಮತ್ತು ಸಾಮರಸ್ಯವನ್ನು ನೆಲೆಗೊಳಿಸುತ್ತದೆ’ ಎಂದರು. </p>.<p>‘ಪ್ರಸಕ್ತ ಕಾಲಘಟ್ಟವು ವಿಷಮಯವಾಗಿದ್ದು, ಜಾತಿ, ಧರ್ಮದ ಅಸಹನೆ ಹೆಚ್ಚಾಗಿದೆ. ಜನರಲ್ಲಿ ಪ್ರೀತಿ ಮತ್ತು ವಿಶ್ವಾಸವನ್ನು ಮರುನಿರ್ಮಿಸಲು ರಂಗಭೂಮಿ ಅತ್ಯುತ್ತಮ ಮಾರ್ಗವಾಗಿದೆ. ಮಾನವೀಯತೆ ಎಲ್ಲೆಡೆ ನೆಲೆಗೊಳಿಸಬೇಕಿದೆ. ಇಲ್ಲದಿದ್ದರೆ ಮುಂದಿನ ಪೀಳಿಗೆಯ ನೆಮ್ಮದಿ ಹಾಳಾಗಲಿದೆ’ ಎಂದು ಹೇಳಿದರು. </p>.<p>ರಂಗಕರ್ಮಿ ಚಿದಂಬರರಾವ್ ಜಂಬೆ ಮಾತನಾಡಿ, ‘ನಿರಂತರವು ಸಹಜರಂಗ ರಂಗ ತರಬೇತಿ ಶಿಬಿರ, ಕಾವ್ಯ ಓದು, ಸಾಹಿತ್ಯ ಹಾಗೂ ನಾಟಕಗಳ ಅಧ್ಯಯನದ ಮೂಲಕ ವಿದ್ಯಾರ್ಥಿಗಳನ್ನು ಸರಿಯಾದ ದಿಕ್ಕಿನತ್ತ ಕರೆದೊಯ್ಯುತ್ತಿದೆ’ ಎಂದರು. </p>.<p>ನಿರಂತರ ಫೌಂಡೇಷನ್ ಅಧ್ಯಕ್ಷ ಎಂ.ಎಂ.ಸುಗುಣ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>