<p><strong>ಮೈಸೂರು: </strong>ವ್ಯಕ್ತಿಯನ್ನು ಲಿಂಗಾಧಾರಿತವಾಗಿ ಗುರುತಿಸದೇ ಅವರ ವ್ಯಕ್ತಿತ್ವದಿಂದ ಗುರುತಿಸಬೇಕು ಎಂದು ಮೈಸೂರು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಕೆ.ಸಿ.ದಿವ್ಯಶ್ರೀ ಅಭಿಪ್ರಾಯಪಟ್ಟರು.</p>.<p>ಮೈಸೂರು ಜಿಲ್ಲಾ ವಕೀಲರ ಸಂಘದ ವತಿಯಿಂದ ಇಲ್ಲಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶನಿವಾರ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಸಮಸ್ಯೆಗಳನ್ನು ಅವಕಾಶಗಳನ್ನಾಗಿ ಬಳಕೆ ಮಾಡಿಕೊಳ್ಳಬೇಕು. ಆಗ ಎಂತಹುದೇ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಬಹುದು. ಸಿಕ್ಕಂತಹ ಅವಕಾಶಗಳನ್ನು ಬಿಡದೇ ಸವಾಲಾಗಿ ಸ್ವೀಕರಿಸಿ, ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಆತ್ಮವಿಶ್ವಾಸ ಇಮ್ಮಡಿಸುತ್ತದೆ ಎಂದರು.</p>.<p>ಸಮಾನತೆ ಎಂಬುದು ಒಂದು ಸಾಮಾಜಿಕ ಮನಸ್ಥಿತಿಯಾಗಿದೆ. ಪುರುಷ ಮತ್ತು ಮಹಿಳೆಯ ನಡುವೆ ಸಮಾನತೆ ಬರಬೇಕಿದೆ ಎಂದು ಹೇಳಿದರು.</p>.<p>ಯಶಸ್ವಿ ಪುರುಷನ ಹಿಂದೆ ಮಹಿಳೆ ಇದ್ದಂತೆ, ಯಶಸ್ವಿ ಮಹಿಳೆಯ ಹಿಂದೆಯೂ ಪುರುಷರ ಸಹಕಾರ ಇದ್ದೇ ಇರುತ್ತದೆ. ಆರೋಗ್ಯಕರ ಸಮಾಜದಲ್ಲಿ ಮಹಿಳೆ ಮತ್ತು ಪುರುಷರಿಬ್ಬರ ಪಾತ್ರವೂ ಅತಿ ಮುಖ್ಯ ಎಂದರು.</p>.<p>ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ್ ಮಾತನಾಡಿ, ‘ಕೂಡು ಕುಟುಂಬದಲ್ಲಿರುವ ಸಂತೋಷ ಬೇರೆಲ್ಲೂ ಇಲ್ಲ. ಅತ್ತೆ, ಮಾವ, ನಾದಿನಿ ಇಲ್ಲದಿರುವ ಕುಟುಂಬಕ್ಕೆ ಹುಡುಗಿ ಕೊಡುತ್ತೇವೆ ಎಂಬುದು ಒಳ್ಳೆಯ ಬೆಳವಣಿಗೆ ಅಲ್ಲ’ ಎಂದು ಹೇಳಿದರು.</p>.<p>ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಸದಸ್ಯ ಬಿ.ಆರ್.ಚಂದ್ರಮೌಳಿ, ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಸ್.ಆನಂದ್ ಕುಮಾರ್, ಉಪಾಧ್ಯಕ್ಷ ಎಸ್.ಜಿ.ಶಿವಣ್ಣೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ವ್ಯಕ್ತಿಯನ್ನು ಲಿಂಗಾಧಾರಿತವಾಗಿ ಗುರುತಿಸದೇ ಅವರ ವ್ಯಕ್ತಿತ್ವದಿಂದ ಗುರುತಿಸಬೇಕು ಎಂದು ಮೈಸೂರು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಕೆ.ಸಿ.ದಿವ್ಯಶ್ರೀ ಅಭಿಪ್ರಾಯಪಟ್ಟರು.</p>.<p>ಮೈಸೂರು ಜಿಲ್ಲಾ ವಕೀಲರ ಸಂಘದ ವತಿಯಿಂದ ಇಲ್ಲಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶನಿವಾರ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಸಮಸ್ಯೆಗಳನ್ನು ಅವಕಾಶಗಳನ್ನಾಗಿ ಬಳಕೆ ಮಾಡಿಕೊಳ್ಳಬೇಕು. ಆಗ ಎಂತಹುದೇ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಬಹುದು. ಸಿಕ್ಕಂತಹ ಅವಕಾಶಗಳನ್ನು ಬಿಡದೇ ಸವಾಲಾಗಿ ಸ್ವೀಕರಿಸಿ, ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಆತ್ಮವಿಶ್ವಾಸ ಇಮ್ಮಡಿಸುತ್ತದೆ ಎಂದರು.</p>.<p>ಸಮಾನತೆ ಎಂಬುದು ಒಂದು ಸಾಮಾಜಿಕ ಮನಸ್ಥಿತಿಯಾಗಿದೆ. ಪುರುಷ ಮತ್ತು ಮಹಿಳೆಯ ನಡುವೆ ಸಮಾನತೆ ಬರಬೇಕಿದೆ ಎಂದು ಹೇಳಿದರು.</p>.<p>ಯಶಸ್ವಿ ಪುರುಷನ ಹಿಂದೆ ಮಹಿಳೆ ಇದ್ದಂತೆ, ಯಶಸ್ವಿ ಮಹಿಳೆಯ ಹಿಂದೆಯೂ ಪುರುಷರ ಸಹಕಾರ ಇದ್ದೇ ಇರುತ್ತದೆ. ಆರೋಗ್ಯಕರ ಸಮಾಜದಲ್ಲಿ ಮಹಿಳೆ ಮತ್ತು ಪುರುಷರಿಬ್ಬರ ಪಾತ್ರವೂ ಅತಿ ಮುಖ್ಯ ಎಂದರು.</p>.<p>ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ್ ಮಾತನಾಡಿ, ‘ಕೂಡು ಕುಟುಂಬದಲ್ಲಿರುವ ಸಂತೋಷ ಬೇರೆಲ್ಲೂ ಇಲ್ಲ. ಅತ್ತೆ, ಮಾವ, ನಾದಿನಿ ಇಲ್ಲದಿರುವ ಕುಟುಂಬಕ್ಕೆ ಹುಡುಗಿ ಕೊಡುತ್ತೇವೆ ಎಂಬುದು ಒಳ್ಳೆಯ ಬೆಳವಣಿಗೆ ಅಲ್ಲ’ ಎಂದು ಹೇಳಿದರು.</p>.<p>ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಸದಸ್ಯ ಬಿ.ಆರ್.ಚಂದ್ರಮೌಳಿ, ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಸ್.ಆನಂದ್ ಕುಮಾರ್, ಉಪಾಧ್ಯಕ್ಷ ಎಸ್.ಜಿ.ಶಿವಣ್ಣೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>