‘ರೋಪ್ ವೇ’ ಯೋಜನೆಯನ್ನು ಬಜೆಟ್ನಲ್ಲಿ ಪ್ರಸ್ತಾಪಿಸುತ್ತಿದ್ದಂತೆಯೇ ಸಾಂಸ್ಕೃತಿಕ ನಗರಿಯಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಪರಿಸರ ಪ್ರಿಯರು, ಸಾಮಾಜಿಕ ಸಂಘಟನೆಗಳು ಒಗ್ಗೂಡಿ ‘ಚಾಮುಂಡಿಬೆಟ್ಟ ಉಳಿಸಿ ಸಮಿತಿ’ ರಚಿಸಿ ಹೋರಾಟ ನಡೆಸಿದ್ದವು. ವನ್ಯಜೀವಿ, ಭೂಗರ್ಭ ಶಾಸಜ್ಞ, ಪರಿಸರ, ಜಲತಜ್ಞರು, ಎಂಜಿನಿಯರ್, ವಕೀಲರು, ರಾಜಕಾರಣಿಗಳು ಸೇರಿದಂತೆ ಹಲವರು ಕೈ ಜೋಡಿಸಿದ್ದರು. ಬೆಟ್ಟದಲ್ಲಿ ರೋಪ್ ವೇ ಬಂದರೆ ಏನೆಲ್ಲಾ ಅನಾಹುತಗಳಾಗುತ್ತವೆ ಎಂಬುದನ್ನೂ ತಜ್ಞರು ವಿಸ್ತೃತವಾಗಿ ತೆರೆದಿಟ್ಟಿದ್ದರು.