<p><strong>ಹುಣಸೂರು:</strong> ‘ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಹಲವು ಯೋಜನೆಗಳು ಜಾರಿಯಲ್ಲಿದ್ದು, ಓಝೋನ್ ಪದರ ರಕ್ಷಣೆ, ಶಬ್ದ ಮಾಲಿನ್ಯ ನಿಯಂತ್ರಣವೂ ಅತಿ ಮುಖ್ಯ’ ಎಂದು ಗಾವಡಗೆರೆ ಹೋಬಳಿ ಮುಳ್ಳೂರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ವಸಂತಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಅತ್ತಿಗುಪ್ಪೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಇಕೋ ಕ್ಲಬ್ನಿಂದ ಸೋಮವಾರ ಆಯೋಜಿಸಿದ್ದ ಪರಿಸರ ದಿನ ಕಾರ್ಯಕ್ರಮ, ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಪರಿಸರ ಮಾಲಿನ್ಯದಿಂದ ವಾತಾವರಣದ ಮೇಲೆ ದುಷ್ಪರಿಣಾಮ ಬೀರುತ್ತದೆ, ಇದನ್ನು ನಿಯಂತ್ರಿಸಲು ಹಸಿರು ಹೊದಿಕೆ ನಿರ್ಮಿಸಿ ಓಝೋನ್ನಲ್ಲಿ ಉಂಟಾಗಬಹುದಾದ ಅಪಾಯವನ್ನು ನಿಯಂತ್ರಿಸಬಹುದು. ರಸ್ತೆಯಲ್ಲಿ ಚಲಿಸುವ ವಾಹನಗಳಿಂದ ಅನಗತ್ಯವಾಗಿ ಶಬ್ದ ಮಾಲಿನ್ಯ ಉಂಟಾಗುತ್ತಿದ್ದು, ಚಾಲಕರಿಗೆ ವಿವಿಧ ಮಾಲಿನ್ಯ ಕುರಿತು ಜಾಗೃತಿ ಅಗತ್ಯವಿದೆ’ ಎಂದರು.</p>.<p>‘ಪರಿಸರದಲ್ಲಿ ಮಾನವರು ಮಾತ್ರ ಬದುಕುತ್ತಿಲ್ಲ, ನಮ್ಮೊಂದಿಗೆ ಪಕ್ಷಿ, ಪ್ರಾಣಿ, ಜಲಚರಗಳು ಸೇರಿದಂತೆ ಅನೇಕ ಜೀವಿಗಳು ಬದುಕುತ್ತಿದ್ದು ಅವುಗಳ ಸಂರಕ್ಷಣೆ ಪ್ರತಿಯೊಬ್ಬರ ಹೆಗಲಿಗಿದೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಯಮುನಾ, ಸದಸ್ಯರಾದ ನಟರಾಜು, ಆಶಾ, ಚಂದ್ರೇಗೌಡ, ಇಂದ್ರೇಗೌಡ, ಮರೀಗೌಡ, ಸ್ವಾಮಿಗೌಡ, ಮುಖ್ಯಶಿಕ್ಷಕಿ ಶೋಭಾ, ಶ್ರೀರಾಮು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ‘ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಹಲವು ಯೋಜನೆಗಳು ಜಾರಿಯಲ್ಲಿದ್ದು, ಓಝೋನ್ ಪದರ ರಕ್ಷಣೆ, ಶಬ್ದ ಮಾಲಿನ್ಯ ನಿಯಂತ್ರಣವೂ ಅತಿ ಮುಖ್ಯ’ ಎಂದು ಗಾವಡಗೆರೆ ಹೋಬಳಿ ಮುಳ್ಳೂರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ವಸಂತಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಅತ್ತಿಗುಪ್ಪೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಇಕೋ ಕ್ಲಬ್ನಿಂದ ಸೋಮವಾರ ಆಯೋಜಿಸಿದ್ದ ಪರಿಸರ ದಿನ ಕಾರ್ಯಕ್ರಮ, ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಪರಿಸರ ಮಾಲಿನ್ಯದಿಂದ ವಾತಾವರಣದ ಮೇಲೆ ದುಷ್ಪರಿಣಾಮ ಬೀರುತ್ತದೆ, ಇದನ್ನು ನಿಯಂತ್ರಿಸಲು ಹಸಿರು ಹೊದಿಕೆ ನಿರ್ಮಿಸಿ ಓಝೋನ್ನಲ್ಲಿ ಉಂಟಾಗಬಹುದಾದ ಅಪಾಯವನ್ನು ನಿಯಂತ್ರಿಸಬಹುದು. ರಸ್ತೆಯಲ್ಲಿ ಚಲಿಸುವ ವಾಹನಗಳಿಂದ ಅನಗತ್ಯವಾಗಿ ಶಬ್ದ ಮಾಲಿನ್ಯ ಉಂಟಾಗುತ್ತಿದ್ದು, ಚಾಲಕರಿಗೆ ವಿವಿಧ ಮಾಲಿನ್ಯ ಕುರಿತು ಜಾಗೃತಿ ಅಗತ್ಯವಿದೆ’ ಎಂದರು.</p>.<p>‘ಪರಿಸರದಲ್ಲಿ ಮಾನವರು ಮಾತ್ರ ಬದುಕುತ್ತಿಲ್ಲ, ನಮ್ಮೊಂದಿಗೆ ಪಕ್ಷಿ, ಪ್ರಾಣಿ, ಜಲಚರಗಳು ಸೇರಿದಂತೆ ಅನೇಕ ಜೀವಿಗಳು ಬದುಕುತ್ತಿದ್ದು ಅವುಗಳ ಸಂರಕ್ಷಣೆ ಪ್ರತಿಯೊಬ್ಬರ ಹೆಗಲಿಗಿದೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಯಮುನಾ, ಸದಸ್ಯರಾದ ನಟರಾಜು, ಆಶಾ, ಚಂದ್ರೇಗೌಡ, ಇಂದ್ರೇಗೌಡ, ಮರೀಗೌಡ, ಸ್ವಾಮಿಗೌಡ, ಮುಖ್ಯಶಿಕ್ಷಕಿ ಶೋಭಾ, ಶ್ರೀರಾಮು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>