<p><strong>ತಿ. ನರಸೀಪುರ (ಮೈಸೂರು ಜಿಲ್ಲೆ)</strong>: ಇಲ್ಲಿನ ಪುರಸಭೆಯಲ್ಲಿ ನಡೆದಿರುವ ತೆರಿಗೆ ವಂಚನೆ ಪ್ರಕರಣದ ಕುರಿತು ಮುಖ್ಯಾಧಿಕಾರಿ ಬಿ.ಕೆ.ವಸಂತ ಕುಮಾರಿ ಅವರು ಮಾತನಾಡಿದ್ದಾರೆನ್ನಲಾದ ಆಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಅದರಲ್ಲಿರುವ ಗೊಂದಲಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಅವರಿಗೆ ಪಟ್ಟಣ ಠಾಣೆಯ ಇನ್ಸ್ಪೆಕ್ಟರ್ ನೋಟಿಸ್ ನೀಡಿದ್ದಾರೆ.</p><p>ಜುಲೈ 19ರಂದು ವಸಂತ ಕುಮಾರಿ ಅವರು ಪುರಸಭೆ ಸದಸ್ಯ ಟಿ.ಎಂ.ನಂಜುಂಡಸ್ವಾಮಿ ವಿರುದ್ಧ ದೂರು ದಾಖಲಿಸಿದ್ದರು. ‘ಕೆಲವು ಆಸ್ತಿ ಮಾಲಿಕರು ಅವರೊಂದಿಗೆ ಸೇರಿ ಸರ್ಕಾರಕ್ಕೆ ಸಲ್ಲಬೇಕಿದ್ದ ತೆರಿಗೆ ವಂಚಿಸುವ ಉದ್ದೇಶದಿಂದ ಕೆನರಾ ಬ್ಯಾಂಕ್ನ ನಕಲಿ ಸಹಿ ಮಾಡಿ, ₹3,43,626 ಆಸ್ತಿ ತೆರಿಗೆ ಪಾವತಿಸಿರುವುದಾಗಿ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ’ ಎಂದು ಆರೋಪಿಸಿದ್ದರು. </p>.<p>ಪ್ರಕರಣ ದಾಖಲಿಸಿಕೊಂಡ ಪೊಲೀಸರು ಜುಲೈ 23ರ ರಾತ್ರಿ ನಂಜುಂಡಸ್ವಾಮಿ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ಬೆಳವಣಿಗೆಗಳ ಬಳಿಕ ಸೇವಾಶ್ರಯ ಫೌಂಡೇಷನ್ ಟ್ರಸ್ಟ್ ನ ಅಧ್ಯಕ್ಷ ಆರ್.ಮಣಿಕಂಠ ರಾಜ್ ಗೌಡ ಮುಖ್ಯಾಧಿಕಾರಿಗೆ ಕರೆ ಮಾಡಿ ಮಾತನಾಡಿದ್ದರು. ಅವರಿಬ್ಬರ ನಡುವಿನ ಸಂಭಾಷಣೆಯ 57 ನಿಮಿಷದ ಆಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.</p>.<p>ಆಡಿಯೊದಲ್ಲಿ ಮಣಿಕಂಠ ಅವರು, ‘ಒಂದು ₹40 ಲಕ್ಷ ಮಾಡಿದ್ದಾನಾ ಮೇಡಂ’ ಎಂದು ಅಧಿಕಾರಿಯನ್ನು ಕೇಳುತ್ತಾರೆ. ಅವರು ಪ್ರತಿಕ್ರಿಯಿಸಿ, ‘ಎಲ್ಲಿ ಹೇಳಿದ್ರಿ, ₹ 30 ರಿಂದ ₹ 40 ಕೋಟಿ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಇರುವ ಕಾಲದಿಂದಲೂ ಮಾಡಿದ್ದಾರೆ. ನಾವು 3, 4 ಸಾವಿರ ಖಾತೆ ಮಾಡಿದ್ದು, ಅದರಲ್ಲಿ 1 ಸಾವಿರ ಖಾತೆ ಇವನದ್ದೇ ಇದೆ’ ಎಂದು ತಿಳಿಸಿದ್ದಾರೆ. ಆದರೆ, ಇಲ್ಲಿ ನಂಜುಂಡಸ್ವಾಮಿ ಹೆಸರನ್ನು ಉಲ್ಲೇಖಿಸಿಲ್ಲ.</p>.<p>ಈ ಬಗ್ಗೆ ಸ್ಪಷ್ಟನೆ ಕೇಳಿ ಇನ್ಸ್ಪೆಕ್ಟರ್ ಧನಂಜಯ ಅವರು ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ್ದು, ‘ಆಡಿಯೊ ನಿಮ್ಮದೆಯೇ, ಪ್ರಕರಣವು ವಿಚಾರಣೆ ಹಂತದಲ್ಲಿರುವಾಗ ಯಾಕೆ ಈ ಬಗ್ಗೆ ಮಾತನಾಡಿದ್ದೀರಿ. ನೀವು ನೀಡಿರುವ ದೂರಿನಲ್ಲಿ ಹಾಗೂ ಆಡಿಯೊದಲ್ಲಿ ವಂಚನೆಯ ಮೊತ್ತದ ವಿವರದಲ್ಲಿ ವ್ಯತ್ಯಾಸ ಏಕಿದೆ’ ಎಂದು ಸ್ಪಷ್ಟನೆ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿ. ನರಸೀಪುರ (ಮೈಸೂರು ಜಿಲ್ಲೆ)</strong>: ಇಲ್ಲಿನ ಪುರಸಭೆಯಲ್ಲಿ ನಡೆದಿರುವ ತೆರಿಗೆ ವಂಚನೆ ಪ್ರಕರಣದ ಕುರಿತು ಮುಖ್ಯಾಧಿಕಾರಿ ಬಿ.ಕೆ.ವಸಂತ ಕುಮಾರಿ ಅವರು ಮಾತನಾಡಿದ್ದಾರೆನ್ನಲಾದ ಆಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಅದರಲ್ಲಿರುವ ಗೊಂದಲಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಅವರಿಗೆ ಪಟ್ಟಣ ಠಾಣೆಯ ಇನ್ಸ್ಪೆಕ್ಟರ್ ನೋಟಿಸ್ ನೀಡಿದ್ದಾರೆ.</p><p>ಜುಲೈ 19ರಂದು ವಸಂತ ಕುಮಾರಿ ಅವರು ಪುರಸಭೆ ಸದಸ್ಯ ಟಿ.ಎಂ.ನಂಜುಂಡಸ್ವಾಮಿ ವಿರುದ್ಧ ದೂರು ದಾಖಲಿಸಿದ್ದರು. ‘ಕೆಲವು ಆಸ್ತಿ ಮಾಲಿಕರು ಅವರೊಂದಿಗೆ ಸೇರಿ ಸರ್ಕಾರಕ್ಕೆ ಸಲ್ಲಬೇಕಿದ್ದ ತೆರಿಗೆ ವಂಚಿಸುವ ಉದ್ದೇಶದಿಂದ ಕೆನರಾ ಬ್ಯಾಂಕ್ನ ನಕಲಿ ಸಹಿ ಮಾಡಿ, ₹3,43,626 ಆಸ್ತಿ ತೆರಿಗೆ ಪಾವತಿಸಿರುವುದಾಗಿ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ’ ಎಂದು ಆರೋಪಿಸಿದ್ದರು. </p>.<p>ಪ್ರಕರಣ ದಾಖಲಿಸಿಕೊಂಡ ಪೊಲೀಸರು ಜುಲೈ 23ರ ರಾತ್ರಿ ನಂಜುಂಡಸ್ವಾಮಿ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ಬೆಳವಣಿಗೆಗಳ ಬಳಿಕ ಸೇವಾಶ್ರಯ ಫೌಂಡೇಷನ್ ಟ್ರಸ್ಟ್ ನ ಅಧ್ಯಕ್ಷ ಆರ್.ಮಣಿಕಂಠ ರಾಜ್ ಗೌಡ ಮುಖ್ಯಾಧಿಕಾರಿಗೆ ಕರೆ ಮಾಡಿ ಮಾತನಾಡಿದ್ದರು. ಅವರಿಬ್ಬರ ನಡುವಿನ ಸಂಭಾಷಣೆಯ 57 ನಿಮಿಷದ ಆಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.</p>.<p>ಆಡಿಯೊದಲ್ಲಿ ಮಣಿಕಂಠ ಅವರು, ‘ಒಂದು ₹40 ಲಕ್ಷ ಮಾಡಿದ್ದಾನಾ ಮೇಡಂ’ ಎಂದು ಅಧಿಕಾರಿಯನ್ನು ಕೇಳುತ್ತಾರೆ. ಅವರು ಪ್ರತಿಕ್ರಿಯಿಸಿ, ‘ಎಲ್ಲಿ ಹೇಳಿದ್ರಿ, ₹ 30 ರಿಂದ ₹ 40 ಕೋಟಿ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಇರುವ ಕಾಲದಿಂದಲೂ ಮಾಡಿದ್ದಾರೆ. ನಾವು 3, 4 ಸಾವಿರ ಖಾತೆ ಮಾಡಿದ್ದು, ಅದರಲ್ಲಿ 1 ಸಾವಿರ ಖಾತೆ ಇವನದ್ದೇ ಇದೆ’ ಎಂದು ತಿಳಿಸಿದ್ದಾರೆ. ಆದರೆ, ಇಲ್ಲಿ ನಂಜುಂಡಸ್ವಾಮಿ ಹೆಸರನ್ನು ಉಲ್ಲೇಖಿಸಿಲ್ಲ.</p>.<p>ಈ ಬಗ್ಗೆ ಸ್ಪಷ್ಟನೆ ಕೇಳಿ ಇನ್ಸ್ಪೆಕ್ಟರ್ ಧನಂಜಯ ಅವರು ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ್ದು, ‘ಆಡಿಯೊ ನಿಮ್ಮದೆಯೇ, ಪ್ರಕರಣವು ವಿಚಾರಣೆ ಹಂತದಲ್ಲಿರುವಾಗ ಯಾಕೆ ಈ ಬಗ್ಗೆ ಮಾತನಾಡಿದ್ದೀರಿ. ನೀವು ನೀಡಿರುವ ದೂರಿನಲ್ಲಿ ಹಾಗೂ ಆಡಿಯೊದಲ್ಲಿ ವಂಚನೆಯ ಮೊತ್ತದ ವಿವರದಲ್ಲಿ ವ್ಯತ್ಯಾಸ ಏಕಿದೆ’ ಎಂದು ಸ್ಪಷ್ಟನೆ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>