<p><strong>ಮೈಸೂರು: </strong>‘ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಅಸಾಂವಿಧಾನಿಕ ಮಾತ್ರವಲ್ಲದೆ, ಈ ದೇಶದ ಜನರ ಮೇಲೆ ಸರ್ಕಾರ ನಡೆಸಿರುವ ಕ್ರೌರ್ಯ‘ ಎಂದು ಗಾಂಧೀಜಿ ಅವರ ಮೊಮ್ಮಗ ಹಾಗೂ ಹಿರಿಯ ಪತ್ರಕರ್ತ ರಾಜಮೋಹನ ಗಾಂಧಿ ಟೀಕಿಸಿದರು.</p>.<p>ಗಾಂಧಿ ವಿಚಾರ ಪರಿಷತ್ತು, ಮೈಸೂರು ವಿಶ್ವವಿದ್ಯಾಲಯದ ಗಾಂಧಿ ಅಧ್ಯಯನ ಕೇಂದ್ರದ ವತಿಯಿಂದ ಏರ್ಪಡಿಸಿದ್ದ ‘ಮಾಧ್ಯಮ: ಪ್ರಜಾಸತ್ತೆ’ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿದ್ದ ಅವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ನಾವು ಭಾರತೀಯರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೂ ಪೌರತ್ವ ಸಾಬೀತುಪಡಿಸಬೇಕು ಎನ್ನುವುದರಲ್ಲಿ ಅರ್ಥವಿಲ್ಲ. ಇದಕ್ಕೆ ನನ್ನ ವಿರೋಧವಿದೆ. ಇಂತಹ ಕಾಯ್ದೆ ಹೇರಿರುವುದು ದುರದೃಷ್ಟಕರ’ ಎಂದರು.</p>.<p>‘ಗಾಂಧೀಜಿ 1907–08 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಎನ್ಆರ್ಸಿಯಂತಹ ಕಾಯ್ದೆಯ ವಿರುದ್ಧವೇ ತಮ್ಮ ಮೊದಲ ಸತ್ಯಾಗ್ರಹ ನಡೆಸಿದ್ದರು ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಾರತೀಯರು ಅಲ್ಲಿ ತಮ್ಮ ಪೌರತ್ವ ನೋಂದಣಿ ಮಾಡಬೇಕಾಗಿತ್ತು. ಗಾಂಧೀಜಿ ಅದನ್ನು ವಿರೋಧಿಸಿದ್ದರು’ ಎಂದು ಹೇಳಿದರು.</p>.<p>ಎನ್ಆರ್ಸಿಯಿಂದ ಅಸ್ಸಾಂನಲ್ಲಿ ಲಕ್ಷಾಂತರ ಮಂದಿ ತಮ್ಮ ಪೌರತ್ವ ಸಾಬೀತುಪಡಿಸಲು ಅಪಾರ ಹಣ ಹಾಗೂ ಸಮಯ ವ್ಯಯಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಆ ಕಷ್ಟವನ್ನು ದೇಶದ ಎಲ್ಲರ ಜನರ ಮೇಲೆ ಹೇರಲು ಸರ್ಕಾರ ಮುಂದಾಗಿರುವುದು ಖೇದಕರ ಎಂದರು.</p>.<p>ಜನರ ಭಿನ್ನಾಭಿಪ್ರಾಯವನ್ನು ವಿರೋಧಿಸುವ ಯಾವುದೇ ಸರ್ಕಾರ ದೀರ್ಘ ಅವಧಿಯವರೆಗೆ ಅಧಿಕಾರದಲ್ಲಿ ಉಳಿಯದು. ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಮತ್ತು ಟೀಕಿಸುವ ಹಕ್ಕು ಜನರಿಗೆ ಇರಬೇಕು. ಆ ಹಕ್ಕನ್ನು ಕಸಿಯುವ ಸರ್ಕಾರದ ಪ್ರಯತ್ನಕ್ಕೆ ದೇಶದ ವಿವಿಧ ಭಾಗಗಳಲ್ಲಿ ಈಗಾಗಲೇ ವಿರೋಧ ವ್ಯಕ್ತವಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಅಸಾಂವಿಧಾನಿಕ ಮಾತ್ರವಲ್ಲದೆ, ಈ ದೇಶದ ಜನರ ಮೇಲೆ ಸರ್ಕಾರ ನಡೆಸಿರುವ ಕ್ರೌರ್ಯ‘ ಎಂದು ಗಾಂಧೀಜಿ ಅವರ ಮೊಮ್ಮಗ ಹಾಗೂ ಹಿರಿಯ ಪತ್ರಕರ್ತ ರಾಜಮೋಹನ ಗಾಂಧಿ ಟೀಕಿಸಿದರು.</p>.<p>ಗಾಂಧಿ ವಿಚಾರ ಪರಿಷತ್ತು, ಮೈಸೂರು ವಿಶ್ವವಿದ್ಯಾಲಯದ ಗಾಂಧಿ ಅಧ್ಯಯನ ಕೇಂದ್ರದ ವತಿಯಿಂದ ಏರ್ಪಡಿಸಿದ್ದ ‘ಮಾಧ್ಯಮ: ಪ್ರಜಾಸತ್ತೆ’ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿದ್ದ ಅವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ನಾವು ಭಾರತೀಯರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೂ ಪೌರತ್ವ ಸಾಬೀತುಪಡಿಸಬೇಕು ಎನ್ನುವುದರಲ್ಲಿ ಅರ್ಥವಿಲ್ಲ. ಇದಕ್ಕೆ ನನ್ನ ವಿರೋಧವಿದೆ. ಇಂತಹ ಕಾಯ್ದೆ ಹೇರಿರುವುದು ದುರದೃಷ್ಟಕರ’ ಎಂದರು.</p>.<p>‘ಗಾಂಧೀಜಿ 1907–08 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಎನ್ಆರ್ಸಿಯಂತಹ ಕಾಯ್ದೆಯ ವಿರುದ್ಧವೇ ತಮ್ಮ ಮೊದಲ ಸತ್ಯಾಗ್ರಹ ನಡೆಸಿದ್ದರು ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಾರತೀಯರು ಅಲ್ಲಿ ತಮ್ಮ ಪೌರತ್ವ ನೋಂದಣಿ ಮಾಡಬೇಕಾಗಿತ್ತು. ಗಾಂಧೀಜಿ ಅದನ್ನು ವಿರೋಧಿಸಿದ್ದರು’ ಎಂದು ಹೇಳಿದರು.</p>.<p>ಎನ್ಆರ್ಸಿಯಿಂದ ಅಸ್ಸಾಂನಲ್ಲಿ ಲಕ್ಷಾಂತರ ಮಂದಿ ತಮ್ಮ ಪೌರತ್ವ ಸಾಬೀತುಪಡಿಸಲು ಅಪಾರ ಹಣ ಹಾಗೂ ಸಮಯ ವ್ಯಯಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಆ ಕಷ್ಟವನ್ನು ದೇಶದ ಎಲ್ಲರ ಜನರ ಮೇಲೆ ಹೇರಲು ಸರ್ಕಾರ ಮುಂದಾಗಿರುವುದು ಖೇದಕರ ಎಂದರು.</p>.<p>ಜನರ ಭಿನ್ನಾಭಿಪ್ರಾಯವನ್ನು ವಿರೋಧಿಸುವ ಯಾವುದೇ ಸರ್ಕಾರ ದೀರ್ಘ ಅವಧಿಯವರೆಗೆ ಅಧಿಕಾರದಲ್ಲಿ ಉಳಿಯದು. ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಮತ್ತು ಟೀಕಿಸುವ ಹಕ್ಕು ಜನರಿಗೆ ಇರಬೇಕು. ಆ ಹಕ್ಕನ್ನು ಕಸಿಯುವ ಸರ್ಕಾರದ ಪ್ರಯತ್ನಕ್ಕೆ ದೇಶದ ವಿವಿಧ ಭಾಗಗಳಲ್ಲಿ ಈಗಾಗಲೇ ವಿರೋಧ ವ್ಯಕ್ತವಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>