<p><strong>ಮೈಸೂರು:</strong> ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸುವ ತನ್ನ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯದಿದ್ದರೆ ಕರ್ನಾಟಕ ಬಚಾವೊ, ಸರ್ಕಾರ ಹಠಾವೊ ಎಂಬ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ಪ್ರಜಾಪಾರ್ಟಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ಶಿವಣ್ಣ ಎಚ್ಚರಿಕೆ ನೀಡಿದರು.</p>.<p>ಇದು ನಿಜಕ್ಕೂ ಕನ್ನಡಿಗರಿಗೆ ಮಾಡುತ್ತಿರುವ ಬಹುದೊಡ್ಡ ಅನ್ಯಾಯ. ಕೇವಲ ಚುನಾವಣೆಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಸರ್ಕಾರ ಮರಾಠರ ಓಲೈಕೆಗೆ ಮುಂದಾಗಿದೆ ಎಂದು ಇಲ್ಲಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.</p>.<p>ಸರ್ಕಾರ ಧರ್ಮ ಧರ್ಮಗಳ ನಡುವೆ, ಜನಾಂಗಗಳ ನಡುವೆ ಹಾಗೂ ಭಾಷೆಗಳ ನಡುವೆ ಕೋಮುಭಾವನೆ ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಕೂಡಲೇ ತನ್ನ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರ ವಿಶೇಷವಾಗಿ ಶಕ್ತಿ ತುಂಬುವ ಕಾರ್ಯ ಮಾಡಿಲ್ಲ. ಇದಕ್ಕೆ ಬದಲು ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ₹ 50 ಕೋಟಿ ಹಣ ನೀಡಿರುವುದು ನಿಜಕ್ಕೂ ದೊಡ್ಡ ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಬಾರ್ಬಾಸಾ ಬೇಯರ್ಸ್ ಮಾತನಾಡಿ, ‘ಸಂಸದ ಪ್ರತಾಪಸಿಂಹ ಅವರು ಸಂಸದೆ ಸುಮಲತಾ ಅವರನ್ನು ಕುರಿತು ಹಗುರವಾಗಿ ಮಾತನಾಡಿದ್ದಾರೆ. ಕೂಡಲೇ ಪ್ರತಾಪಸಿಂಹ ಕ್ಷಮೆ ಕೋರಬೇಕು’ ಎಂದು ಆಗ್ರಹಿಸಿದರು.</p>.<p>ರಾಜ್ಯ ಘಟಕದ ಉಪಾಧ್ಯಕ್ಷ ಯೋಗೇಶ್, ಜಂಟಿ ಕಾರ್ಯದರ್ಶಿ ಬಿ.ಆರ್.ಲೋಕೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸುವ ತನ್ನ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯದಿದ್ದರೆ ಕರ್ನಾಟಕ ಬಚಾವೊ, ಸರ್ಕಾರ ಹಠಾವೊ ಎಂಬ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ಪ್ರಜಾಪಾರ್ಟಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ಶಿವಣ್ಣ ಎಚ್ಚರಿಕೆ ನೀಡಿದರು.</p>.<p>ಇದು ನಿಜಕ್ಕೂ ಕನ್ನಡಿಗರಿಗೆ ಮಾಡುತ್ತಿರುವ ಬಹುದೊಡ್ಡ ಅನ್ಯಾಯ. ಕೇವಲ ಚುನಾವಣೆಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಸರ್ಕಾರ ಮರಾಠರ ಓಲೈಕೆಗೆ ಮುಂದಾಗಿದೆ ಎಂದು ಇಲ್ಲಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.</p>.<p>ಸರ್ಕಾರ ಧರ್ಮ ಧರ್ಮಗಳ ನಡುವೆ, ಜನಾಂಗಗಳ ನಡುವೆ ಹಾಗೂ ಭಾಷೆಗಳ ನಡುವೆ ಕೋಮುಭಾವನೆ ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಕೂಡಲೇ ತನ್ನ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರ ವಿಶೇಷವಾಗಿ ಶಕ್ತಿ ತುಂಬುವ ಕಾರ್ಯ ಮಾಡಿಲ್ಲ. ಇದಕ್ಕೆ ಬದಲು ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ₹ 50 ಕೋಟಿ ಹಣ ನೀಡಿರುವುದು ನಿಜಕ್ಕೂ ದೊಡ್ಡ ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಬಾರ್ಬಾಸಾ ಬೇಯರ್ಸ್ ಮಾತನಾಡಿ, ‘ಸಂಸದ ಪ್ರತಾಪಸಿಂಹ ಅವರು ಸಂಸದೆ ಸುಮಲತಾ ಅವರನ್ನು ಕುರಿತು ಹಗುರವಾಗಿ ಮಾತನಾಡಿದ್ದಾರೆ. ಕೂಡಲೇ ಪ್ರತಾಪಸಿಂಹ ಕ್ಷಮೆ ಕೋರಬೇಕು’ ಎಂದು ಆಗ್ರಹಿಸಿದರು.</p>.<p>ರಾಜ್ಯ ಘಟಕದ ಉಪಾಧ್ಯಕ್ಷ ಯೋಗೇಶ್, ಜಂಟಿ ಕಾರ್ಯದರ್ಶಿ ಬಿ.ಆರ್.ಲೋಕೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>