<p><strong>ಮೈಸೂರು:</strong> ‘ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿ ಕುರಿತು ಸಮಿತಿ ವರದಿ ಬಳಿಕ ಸೂಕ್ತ ನಿರ್ಣಯ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p>.<p>ನಗರದ ಕೆಎಸ್ಒಯು ಘಟಿಕೋತ್ಸವ ಭವನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಶನಿವಾರ ನಡೆದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ‘ಈಗಾಗಲೇ 5 ರಾಜ್ಯಗಳು ಒಪಿಎಸ್ಗೆ ಮರಳಿವೆ. ನಮ್ಮದೂ ಸೇರಿದರೆ 6 ರಾಜ್ಯಗಳಾಗುತ್ತದೆ ಅಷ್ಟೇ’ ಎಂದರು.</p>.<p>ಇದಕ್ಕೆ ಸಭಿಕರು ‘6ನೇ ರಾಜ್ಯ ಮತ್ತು 6ನೇ ಗ್ಯಾರಂಟಿ ನೀಡಿ’ ಎಂದು ಒತ್ತಾಯಿಸಿದರು.</p>.<p>‘ಹೊಸ ಪಿಂಚಣಿ ಯೋಜನೆ (ಎನ್ಪಿಎಸ್) ಜಾರಿಗೆ ತಂದಿದ್ದು ಕೇಂದ್ರ ಸರ್ಕಾರ. ಆದರೆ, ನಮ್ಮನ್ನು ಹಿಡಿದುಕೊಂಡಿದ್ದೀರಾ. ಅದೇನೆ ಇರಲಿ, ವರದಿ ಬಂದ ಬಳಿಕ ನಿಮ್ಮೊಂದಿಗೆ ಚರ್ಚಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>‘ಶಾಲಾ ಶಿಕ್ಷಕರ ನೇಮಕಾತಿಯಲ್ಲಿನ ಸಿ ಅಂಡ್ ಆರ್ ನಿಯಮಗಳ ಬಗ್ಗೆಯೂ ಚರ್ಚಿಸಲಾಗುವುದು. ಆರೋಗ್ಯ ಸಂಜೀವಿನಿ ಬಗ್ಗೆಯೂ ಸೂಕ್ತ ತೀರ್ಮಾನ ಮಾಡಲಾಗಿದೆ’ ಎಂದರು.</p>.<p>‘ನಿಮ್ಮೆಲ್ಲ ಸಮಸ್ಯೆಗಳನ್ನು ಸರ್ಕಾರ ತೆರೆದ ಮನಸ್ಸಿನಿಂದ ಬಗೆಹರಿಸಲಿದೆ. ನೀವೂ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಬಡವರು, ದಲಿತರು, ಶೋಷಿತರ ಪರ ಕೆಲಸ ಮಾಡಬೇಕು’ ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿ ಕುರಿತು ಸಮಿತಿ ವರದಿ ಬಳಿಕ ಸೂಕ್ತ ನಿರ್ಣಯ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p>.<p>ನಗರದ ಕೆಎಸ್ಒಯು ಘಟಿಕೋತ್ಸವ ಭವನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಶನಿವಾರ ನಡೆದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ‘ಈಗಾಗಲೇ 5 ರಾಜ್ಯಗಳು ಒಪಿಎಸ್ಗೆ ಮರಳಿವೆ. ನಮ್ಮದೂ ಸೇರಿದರೆ 6 ರಾಜ್ಯಗಳಾಗುತ್ತದೆ ಅಷ್ಟೇ’ ಎಂದರು.</p>.<p>ಇದಕ್ಕೆ ಸಭಿಕರು ‘6ನೇ ರಾಜ್ಯ ಮತ್ತು 6ನೇ ಗ್ಯಾರಂಟಿ ನೀಡಿ’ ಎಂದು ಒತ್ತಾಯಿಸಿದರು.</p>.<p>‘ಹೊಸ ಪಿಂಚಣಿ ಯೋಜನೆ (ಎನ್ಪಿಎಸ್) ಜಾರಿಗೆ ತಂದಿದ್ದು ಕೇಂದ್ರ ಸರ್ಕಾರ. ಆದರೆ, ನಮ್ಮನ್ನು ಹಿಡಿದುಕೊಂಡಿದ್ದೀರಾ. ಅದೇನೆ ಇರಲಿ, ವರದಿ ಬಂದ ಬಳಿಕ ನಿಮ್ಮೊಂದಿಗೆ ಚರ್ಚಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>‘ಶಾಲಾ ಶಿಕ್ಷಕರ ನೇಮಕಾತಿಯಲ್ಲಿನ ಸಿ ಅಂಡ್ ಆರ್ ನಿಯಮಗಳ ಬಗ್ಗೆಯೂ ಚರ್ಚಿಸಲಾಗುವುದು. ಆರೋಗ್ಯ ಸಂಜೀವಿನಿ ಬಗ್ಗೆಯೂ ಸೂಕ್ತ ತೀರ್ಮಾನ ಮಾಡಲಾಗಿದೆ’ ಎಂದರು.</p>.<p>‘ನಿಮ್ಮೆಲ್ಲ ಸಮಸ್ಯೆಗಳನ್ನು ಸರ್ಕಾರ ತೆರೆದ ಮನಸ್ಸಿನಿಂದ ಬಗೆಹರಿಸಲಿದೆ. ನೀವೂ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಬಡವರು, ದಲಿತರು, ಶೋಷಿತರ ಪರ ಕೆಲಸ ಮಾಡಬೇಕು’ ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>