<p><strong>ಮೈಸೂರು</strong>: ದೇಶದ ಸೈನಿಕರ ಶಕ್ತಿ, ಸ್ಥೈರ್ಯವನ್ನು ಜಾಗತಿಕವಾಗಿ ಬಿಂಬಿಸಿದ ‘ಸಿಂಧೂರ’ ಕಾರ್ಯಾಚರಣೆಯ ಪರಿಕಲ್ಪನೆಯನ್ನು ಹೂವುಗಳಲ್ಲಿ ಕಟ್ಟಿಕೊಡಲು ಸಿದ್ಧತೆ ನಡೆದಿದೆ.</p>.<p>ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ, ಹಾರ್ಡಿಂಗ್ ವೃತ್ತದ ಕುಪ್ಪಣ್ಣ (ಕರ್ಜನ್) ಉದ್ಯಾನದಲ್ಲಿ ನಡೆಯುವ ಫಲ–ಪುಷ್ಪ ಪ್ರದರ್ಶನದಲ್ಲಿ ಆಪರೇಷನ್ ಸಿಂಧೂರ ಗಮನಸೆಳೆಯಲಿದೆ. ಶತ್ರುರಾಷ್ಟ್ರದ ವಿರುದ್ಧ ದಿಟ್ಟತನದಿಂದ ಹೋರಾಡಿ ದೇಶಕ್ಕೆ ಕೀರ್ತಿ ತಂದವರಿಗೆ ಗೌರವ ಸಲ್ಲಿಸುವ ಭಾಗವಾಗಿ ಈ ಪ್ರಯತ್ನ ನಡೆದಿದೆ. ಪ್ರಾತಿನಿಧಿಕವಾಗಿ ಕರ್ನಲ್ ಸೋಫಿಯಾ ಹಾಗೂ ವ್ಯೋಮಿಕಾ ಸಿಂಗ್ ಅವರಿಗೆ ಕೃತಜ್ಞತೆ ಹೇಳುವುದಕ್ಕಾಗಿ ಪುಷ್ಪಗಳಿಂದ ಅವರ ಪ್ರತಿಕೃತಿಗಳನ್ನು ಸಿಂಗರಿಸಲಾಗುತ್ತಿದೆ. ಆರ್ಮಿ ಟ್ರಕ್, ಏರ್ಜೆಟ್ ಹಾಗೂ ಯುದ್ಧ ನೌಕೆ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಗುಲಾಬಿ, ಸೇವಂತಿಗೆ ಮೊದಲಾದ ಹೂವುಗಳನ್ನು ಬಳಸಲಾಗುತ್ತಿದೆ.</p>.<p>ದಸರಾ ಉದ್ಘಾಟನೆಯ ದಿನದಂದೇ ಅಂದರೆ ಸೆ.22ರಂದೇ ಫಲಪುಷ್ಪಗಳ ವಿಶಿಷ್ಟ ಲೋಕವೂ ತೆರೆದುಕೊಳ್ಳಲಿದೆ. ನಿತ್ಯವೂ 40ಸಾವಿರದಿಂದ 50ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯೊಂದಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ.</p>.<p>ಈ ಬಾರಿ ವಿಜಯದಶಮಿ ಮೆರವಣಿಗೆಯು ಗಾಂಧಿ ಜಯಂತಿ ದಿನವಾದ ಅ.2ರಂದು ನಡೆಯಲಿದೆ. ಈ ಕಾರಣದಿಂದ ರಾಷ್ಟ್ರಪಿತನಿಗೆ ನಮಿಸುವ ಪರಿಕಲ್ಪನೆಯ ಹೂವುಗಳ ಕಲಾಕೃತಿಯ ಘಮ ಹರಡಲಿದೆ. ಕನ್ಯಾಕುಮಾರಿಯಲ್ಲಿರುವ ಗಾಂಧೀಜಿ ಸ್ಮಾರಕ ಮ್ಯೂಸಿಯಂ (ಮಹಾತ್ಮ ಗಾಂಧಿ ಮಂಟಪ)ವನ್ನು ಮೂರು ಲಕ್ಷ ಗುಲಾಬಿ ಹೂವುಗಳಿಂದ ಗಾಜಿನ ಮನೆಯಲ್ಲಿ ನಿರ್ಮಿಸಲಾಗುತ್ತಿದೆ. ಇದು ಈ ವರ್ಷದ ಮುಖ್ಯ ಪರಿಕಲ್ಪನೆಯಾಗಿದೆ.</p>.<p>ರಾಜ್ಯ ಸರ್ಕಾರದಿಂದ ಜಾರಿಗೊಳಿಸಲಾಗಿರುವ ‘ಪಂಚ ಗ್ಯಾರಂಟಿ’ ಯೋಜನೆಗಳನ್ನು ಬಿಂಬಿಸುವುದಕ್ಕಾಗಿಯೂ ಫಲಪುಷ್ಪಗಳನ್ನು ಬಳಸಿಕೊಳ್ಳಲಾಗುತ್ತಿದೆ. ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳ ಮಾದರಿಗಳ ಬಗ್ಗೆ ತಿಳಿಸಿಕೊಡುವ ಕಲಾಕೃತಿಗಳಿಗೆ ಕಲಾವಿದರು ವಿವಿಧ ಹೂವುಗಳಿಂದ ‘ಜೀವ’ ನೀಡಲಿದ್ದಾರೆ.</p>.<p>ಉಳಿದಂತೆ, ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್, ಅಂಬಾರಿ ಹೊತ್ತ ಆನೆ, ನವದುರ್ಗೆಯರು, ಭೂಮಿಯನ್ನು ರಕ್ಷಿಸಿ ಎಂದು ಸಾರುವ ಸಂದೇಶ, ತಂಡಿ ಸಡಕ್ ಹಾಗೂ ಮಕ್ಕಳ ಉದ್ಯಾನ ಇರಲಿದೆ.</p>.<p>ಇಲಾಖೆಯ ವತಿಯಿಂದ 60ಸಾವಿರ ಹೂವಿನ ಸಸಿಗಳನ್ನು ಬೆಳೆಸಿದ್ದು, ಅವುಗಳನ್ನು ಬಳಸಿ, ಆಕರ್ಷಕವಾಗಿ ಜೋಡಿಸಿ ಇಡೀ ಉದ್ಯಾನವನ್ನು ಅಲಂಕರಿಸಲಾಗುವುದು. ನಿಶಾದ್ಬಾಗ್ ಎಂದೂ ಕರೆಯುವ ಈ ಉದ್ಯಾನ 10 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ.</p>.<p>ಇಲಾಖೆಯ ಯೋಜನೆಗಳನ್ನು ತಿಳಿಸುವ, ಸಾವಯವ ಕೃಷಿಗೆ ಸಂಬಂಧಿಸಿದ ಹಾಗೂ ಕೃಷಿ ಮಳಿಗೆಗಳನ್ನು ಕೂಡ ತೆರೆಯಲಾಗುತ್ತಿದೆ. ಆಹಾರ ಪದಾರ್ಥಗಳ ಮಳಿಗೆಯೂ ಇರಲಿದೆ. ತೋಟಗಾರಿಕೆ ಇಲಾಖೆಯಿಂದ ಸಸ್ಯ ಸಂತೆ ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ಮಾರಾಟಕ್ಕೆ ಇಡಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ದೇಶದ ಸೈನಿಕರ ಶಕ್ತಿ, ಸ್ಥೈರ್ಯವನ್ನು ಜಾಗತಿಕವಾಗಿ ಬಿಂಬಿಸಿದ ‘ಸಿಂಧೂರ’ ಕಾರ್ಯಾಚರಣೆಯ ಪರಿಕಲ್ಪನೆಯನ್ನು ಹೂವುಗಳಲ್ಲಿ ಕಟ್ಟಿಕೊಡಲು ಸಿದ್ಧತೆ ನಡೆದಿದೆ.</p>.<p>ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ, ಹಾರ್ಡಿಂಗ್ ವೃತ್ತದ ಕುಪ್ಪಣ್ಣ (ಕರ್ಜನ್) ಉದ್ಯಾನದಲ್ಲಿ ನಡೆಯುವ ಫಲ–ಪುಷ್ಪ ಪ್ರದರ್ಶನದಲ್ಲಿ ಆಪರೇಷನ್ ಸಿಂಧೂರ ಗಮನಸೆಳೆಯಲಿದೆ. ಶತ್ರುರಾಷ್ಟ್ರದ ವಿರುದ್ಧ ದಿಟ್ಟತನದಿಂದ ಹೋರಾಡಿ ದೇಶಕ್ಕೆ ಕೀರ್ತಿ ತಂದವರಿಗೆ ಗೌರವ ಸಲ್ಲಿಸುವ ಭಾಗವಾಗಿ ಈ ಪ್ರಯತ್ನ ನಡೆದಿದೆ. ಪ್ರಾತಿನಿಧಿಕವಾಗಿ ಕರ್ನಲ್ ಸೋಫಿಯಾ ಹಾಗೂ ವ್ಯೋಮಿಕಾ ಸಿಂಗ್ ಅವರಿಗೆ ಕೃತಜ್ಞತೆ ಹೇಳುವುದಕ್ಕಾಗಿ ಪುಷ್ಪಗಳಿಂದ ಅವರ ಪ್ರತಿಕೃತಿಗಳನ್ನು ಸಿಂಗರಿಸಲಾಗುತ್ತಿದೆ. ಆರ್ಮಿ ಟ್ರಕ್, ಏರ್ಜೆಟ್ ಹಾಗೂ ಯುದ್ಧ ನೌಕೆ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಗುಲಾಬಿ, ಸೇವಂತಿಗೆ ಮೊದಲಾದ ಹೂವುಗಳನ್ನು ಬಳಸಲಾಗುತ್ತಿದೆ.</p>.<p>ದಸರಾ ಉದ್ಘಾಟನೆಯ ದಿನದಂದೇ ಅಂದರೆ ಸೆ.22ರಂದೇ ಫಲಪುಷ್ಪಗಳ ವಿಶಿಷ್ಟ ಲೋಕವೂ ತೆರೆದುಕೊಳ್ಳಲಿದೆ. ನಿತ್ಯವೂ 40ಸಾವಿರದಿಂದ 50ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯೊಂದಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ.</p>.<p>ಈ ಬಾರಿ ವಿಜಯದಶಮಿ ಮೆರವಣಿಗೆಯು ಗಾಂಧಿ ಜಯಂತಿ ದಿನವಾದ ಅ.2ರಂದು ನಡೆಯಲಿದೆ. ಈ ಕಾರಣದಿಂದ ರಾಷ್ಟ್ರಪಿತನಿಗೆ ನಮಿಸುವ ಪರಿಕಲ್ಪನೆಯ ಹೂವುಗಳ ಕಲಾಕೃತಿಯ ಘಮ ಹರಡಲಿದೆ. ಕನ್ಯಾಕುಮಾರಿಯಲ್ಲಿರುವ ಗಾಂಧೀಜಿ ಸ್ಮಾರಕ ಮ್ಯೂಸಿಯಂ (ಮಹಾತ್ಮ ಗಾಂಧಿ ಮಂಟಪ)ವನ್ನು ಮೂರು ಲಕ್ಷ ಗುಲಾಬಿ ಹೂವುಗಳಿಂದ ಗಾಜಿನ ಮನೆಯಲ್ಲಿ ನಿರ್ಮಿಸಲಾಗುತ್ತಿದೆ. ಇದು ಈ ವರ್ಷದ ಮುಖ್ಯ ಪರಿಕಲ್ಪನೆಯಾಗಿದೆ.</p>.<p>ರಾಜ್ಯ ಸರ್ಕಾರದಿಂದ ಜಾರಿಗೊಳಿಸಲಾಗಿರುವ ‘ಪಂಚ ಗ್ಯಾರಂಟಿ’ ಯೋಜನೆಗಳನ್ನು ಬಿಂಬಿಸುವುದಕ್ಕಾಗಿಯೂ ಫಲಪುಷ್ಪಗಳನ್ನು ಬಳಸಿಕೊಳ್ಳಲಾಗುತ್ತಿದೆ. ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳ ಮಾದರಿಗಳ ಬಗ್ಗೆ ತಿಳಿಸಿಕೊಡುವ ಕಲಾಕೃತಿಗಳಿಗೆ ಕಲಾವಿದರು ವಿವಿಧ ಹೂವುಗಳಿಂದ ‘ಜೀವ’ ನೀಡಲಿದ್ದಾರೆ.</p>.<p>ಉಳಿದಂತೆ, ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್, ಅಂಬಾರಿ ಹೊತ್ತ ಆನೆ, ನವದುರ್ಗೆಯರು, ಭೂಮಿಯನ್ನು ರಕ್ಷಿಸಿ ಎಂದು ಸಾರುವ ಸಂದೇಶ, ತಂಡಿ ಸಡಕ್ ಹಾಗೂ ಮಕ್ಕಳ ಉದ್ಯಾನ ಇರಲಿದೆ.</p>.<p>ಇಲಾಖೆಯ ವತಿಯಿಂದ 60ಸಾವಿರ ಹೂವಿನ ಸಸಿಗಳನ್ನು ಬೆಳೆಸಿದ್ದು, ಅವುಗಳನ್ನು ಬಳಸಿ, ಆಕರ್ಷಕವಾಗಿ ಜೋಡಿಸಿ ಇಡೀ ಉದ್ಯಾನವನ್ನು ಅಲಂಕರಿಸಲಾಗುವುದು. ನಿಶಾದ್ಬಾಗ್ ಎಂದೂ ಕರೆಯುವ ಈ ಉದ್ಯಾನ 10 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ.</p>.<p>ಇಲಾಖೆಯ ಯೋಜನೆಗಳನ್ನು ತಿಳಿಸುವ, ಸಾವಯವ ಕೃಷಿಗೆ ಸಂಬಂಧಿಸಿದ ಹಾಗೂ ಕೃಷಿ ಮಳಿಗೆಗಳನ್ನು ಕೂಡ ತೆರೆಯಲಾಗುತ್ತಿದೆ. ಆಹಾರ ಪದಾರ್ಥಗಳ ಮಳಿಗೆಯೂ ಇರಲಿದೆ. ತೋಟಗಾರಿಕೆ ಇಲಾಖೆಯಿಂದ ಸಸ್ಯ ಸಂತೆ ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ಮಾರಾಟಕ್ಕೆ ಇಡಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>