<p><strong>ಮೈಸೂರು</strong>: ತಂದೆ–ತಾಯಿ ಇಬ್ಬರನ್ನೂ ಕಳೆದುಕೊಂಡು ವಿದ್ಯಾರ್ಥಿನಿಲಯಗಳಲ್ಲಿ ಓದಿದ ‘ತಬ್ಬಲಿ’ ಹುಡುಗಿ ವಿ.ತೇಜಸ್ವಿನಿ, ಎಂ.ಎ ಕನ್ನಡದಲ್ಲಿ 10 ಚಿನ್ನದ ಪದಕ ಹಾಗೂ 4 ನಗದು ಬಹುಮಾನ ಪಡೆದು ಸಾಧನೆ ಮಾಡಿದ್ದಾರೆ. </p><p>ಭಾನುವಾರ ನಡೆದ ಮೈಸೂರು ವಿಶ್ವವಿದ್ಯಾಲಯದ 104ನೇ ಘಟಿಕೋತ್ಸವದಲ್ಲಿ ಪದಕ ಪಡೆದ ಸಂಭ್ರಮವನ್ನು ದಾರಿ ತೋರಿದ ಶಿಕ್ಷಕರೊಂದಿಗೆ ಹಂಚಿಕೊಂಡರು.</p><p>ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಗ್ರಾಮದ ತೇಜಸ್ವಿನಿ, 4ನೇ ತರಗತಿ ಓದುವಾಗ ತಾಯಿ ನಾಗಮ್ಮ, ದ್ವಿತೀಯ ಪಿಯು ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾಗ ತಂದೆ ಎಚ್.ವೆಂಕಟೇಶ್ ಅವರನ್ನು ಕಳೆದುಕೊಂಡರು. ಉನ್ನತ ಶಿಕ್ಷಣ ಪಡೆಯುವ ಕನಸು ಕಮರಿದ್ದಾಗ ಅವರಿಗೆ ಶಿಕ್ಷಕರು–ಉಪನ್ಯಾಸಕರು ನೆರವಾದರು.</p><p>ಪ್ರಾಥಮಿಕ–ಪ್ರೌಢಶಲಾ ಶಿಕ್ಷಣವನ್ನು ತಲಕಾಡಿನ ಸರ್ಕಾರಿ ಶಾಲೆಗಳಲ್ಲಿ, ಪೂರೈಸಿದ ಅವರು, ಮಳವಳ್ಳಿ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಓದಿ, ಮೈಸೂರಿನ ಮಹಾರಾಣಿ ಕಲಾ ಕಾಲೇಜಿನಲ್ಲಿ ಬಿ.ಎ ಪದವಿಯನ್ನು 9 ಚಿನ್ನದ ಪದಕ ಹಾಗೂ 10 ನಗದು ಬಹುಮಾನದೊಂದಿಗೆ ಉತ್ತೀರ್ಣರಾಗಿದ್ದರು.</p><p>‘ಶಿಕ್ಷಕರು– ಸ್ನೇಹಿತರ ಪ್ರೋತ್ಸಾಹದಿಂದ ಸಾಧನೆ ಸಾಧ್ಯವಾಗಿದೆ. ವಿದ್ಯಾರ್ಥಿನಿಲಯಗಳಲ್ಲಿ ಅನ್ನವಿಕ್ಕಿದ, ದಾರಿ ತೋರಿದ ಎಲ್ಲರನ್ನು ನೆನೆಯುವೆ. ಪಿಎಚ್ಡಿ ಮಾಡಬೇಕು. ಉಪನ್ಯಾಸಕಿಯಾಗಿ ಕನ್ನಡ ಭಾಷೆ–ಸಾಹಿತ್ಯವನ್ನು ಮಕ್ಕಳಿಗೆ ಕಲಿಸಬೇಕೆಂಬುದೇ ನನ್ನಾಸೆ’ ಎಂದು ತೇಜಸ್ವಿನಿ ನುಡಿದರು. </p><p>ಅಂಧೆಯ ಸಾಧನೆ: ಹುಟ್ಟಿನಿಂದಲೇ ಅಂಧೆಯಾದ ಎಸ್.ಅನಘಾ, ಕನ್ನಡ ಎಂ.ಎ ಪದವಿಯಲ್ಲಿ ಚಿನ್ನ ಪದಕ ಪಡೆದಿದ್ದಾರೆ. ಕರ್ನಾಟಕ ಶಾಸ್ತ್ರೀಯ ಸಂಗೀತದ ಸೀನಿಯರ್ ಪರೀಕ್ಷೆಯನ್ನು ಪಾಸು ಮಾಡಿರುವ ಅವರು, ವಿದ್ವತ್ ಪರೀಕ್ಷೆ ತೆಗೆದುಕೊಂಡಿದ್ದಾರೆ. ಅನಿವಾಸಿ ಭಾರತೀಯರಿಗೆ ಆನ್ಲೈನ್ನಲ್ಲಿ ಸಂಗೀತ ಪಾಠ ಮಾಡುತ್ತಾ ಈ ಸಾಧನೆ ಮಾಡಿದ್ದಾರೆ.</p><p>ಪೋಷಕರಾದ ಪುಷ್ಪಲತಾ– ಕೆ.ಸತೀಶ್ ದಂಪತಿ ಮಗಳಿಗೆ ಆತ್ಮವಿಶ್ವಾಸ ತುಂಬಿದ್ದಾರೆ. ಕನ್ನಡ ಸಂಶೋಧನಾ ಕ್ಷೇತ್ರದಲ್ಲಿ ಕೆಲಸ ಮಾಡುವ ಆಸೆ ಅನಘಾ ಅವರದ್ದು. </p>. <p>‘ಕಣ್ಣುಗಳಿಲ್ಲದಿರುವುದು ಬದುಕಿನ ತೊಡಕಲ್ಲ. ಇತರ ಇಂದ್ರಿಯಗಳ ಸಾಮರ್ಥ್ಯ ಹೆಚ್ಚೇ ಇದೆ. ಸ್ವಾವಲಂಬಿಯಾಗಿ ಬದುಕಲು ಶಿಕ್ಷಣ ಪಡೆಯಬೇಕು. ಹೀಗಾಗಿಯೇ ಸಂಗೀತ– ಸಾಹಿತ್ಯ ಕ್ಷೇತ್ರದಲ್ಲಿ ಹೆಚ್ಚು ಕೆಲಸ ಮಾಡುವ, ಕಲಿಯುವ ಆಸೆಯಿದೆ. ಪಿಎಚ್ಡಿ ಮಾಡಿ ಉಪನ್ಯಾಸಕಿಯಾಗುವೆ’ ಎಂದು ಅನಘಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ತಂದೆ–ತಾಯಿ ಇಬ್ಬರನ್ನೂ ಕಳೆದುಕೊಂಡು ವಿದ್ಯಾರ್ಥಿನಿಲಯಗಳಲ್ಲಿ ಓದಿದ ‘ತಬ್ಬಲಿ’ ಹುಡುಗಿ ವಿ.ತೇಜಸ್ವಿನಿ, ಎಂ.ಎ ಕನ್ನಡದಲ್ಲಿ 10 ಚಿನ್ನದ ಪದಕ ಹಾಗೂ 4 ನಗದು ಬಹುಮಾನ ಪಡೆದು ಸಾಧನೆ ಮಾಡಿದ್ದಾರೆ. </p><p>ಭಾನುವಾರ ನಡೆದ ಮೈಸೂರು ವಿಶ್ವವಿದ್ಯಾಲಯದ 104ನೇ ಘಟಿಕೋತ್ಸವದಲ್ಲಿ ಪದಕ ಪಡೆದ ಸಂಭ್ರಮವನ್ನು ದಾರಿ ತೋರಿದ ಶಿಕ್ಷಕರೊಂದಿಗೆ ಹಂಚಿಕೊಂಡರು.</p><p>ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಗ್ರಾಮದ ತೇಜಸ್ವಿನಿ, 4ನೇ ತರಗತಿ ಓದುವಾಗ ತಾಯಿ ನಾಗಮ್ಮ, ದ್ವಿತೀಯ ಪಿಯು ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾಗ ತಂದೆ ಎಚ್.ವೆಂಕಟೇಶ್ ಅವರನ್ನು ಕಳೆದುಕೊಂಡರು. ಉನ್ನತ ಶಿಕ್ಷಣ ಪಡೆಯುವ ಕನಸು ಕಮರಿದ್ದಾಗ ಅವರಿಗೆ ಶಿಕ್ಷಕರು–ಉಪನ್ಯಾಸಕರು ನೆರವಾದರು.</p><p>ಪ್ರಾಥಮಿಕ–ಪ್ರೌಢಶಲಾ ಶಿಕ್ಷಣವನ್ನು ತಲಕಾಡಿನ ಸರ್ಕಾರಿ ಶಾಲೆಗಳಲ್ಲಿ, ಪೂರೈಸಿದ ಅವರು, ಮಳವಳ್ಳಿ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಓದಿ, ಮೈಸೂರಿನ ಮಹಾರಾಣಿ ಕಲಾ ಕಾಲೇಜಿನಲ್ಲಿ ಬಿ.ಎ ಪದವಿಯನ್ನು 9 ಚಿನ್ನದ ಪದಕ ಹಾಗೂ 10 ನಗದು ಬಹುಮಾನದೊಂದಿಗೆ ಉತ್ತೀರ್ಣರಾಗಿದ್ದರು.</p><p>‘ಶಿಕ್ಷಕರು– ಸ್ನೇಹಿತರ ಪ್ರೋತ್ಸಾಹದಿಂದ ಸಾಧನೆ ಸಾಧ್ಯವಾಗಿದೆ. ವಿದ್ಯಾರ್ಥಿನಿಲಯಗಳಲ್ಲಿ ಅನ್ನವಿಕ್ಕಿದ, ದಾರಿ ತೋರಿದ ಎಲ್ಲರನ್ನು ನೆನೆಯುವೆ. ಪಿಎಚ್ಡಿ ಮಾಡಬೇಕು. ಉಪನ್ಯಾಸಕಿಯಾಗಿ ಕನ್ನಡ ಭಾಷೆ–ಸಾಹಿತ್ಯವನ್ನು ಮಕ್ಕಳಿಗೆ ಕಲಿಸಬೇಕೆಂಬುದೇ ನನ್ನಾಸೆ’ ಎಂದು ತೇಜಸ್ವಿನಿ ನುಡಿದರು. </p><p>ಅಂಧೆಯ ಸಾಧನೆ: ಹುಟ್ಟಿನಿಂದಲೇ ಅಂಧೆಯಾದ ಎಸ್.ಅನಘಾ, ಕನ್ನಡ ಎಂ.ಎ ಪದವಿಯಲ್ಲಿ ಚಿನ್ನ ಪದಕ ಪಡೆದಿದ್ದಾರೆ. ಕರ್ನಾಟಕ ಶಾಸ್ತ್ರೀಯ ಸಂಗೀತದ ಸೀನಿಯರ್ ಪರೀಕ್ಷೆಯನ್ನು ಪಾಸು ಮಾಡಿರುವ ಅವರು, ವಿದ್ವತ್ ಪರೀಕ್ಷೆ ತೆಗೆದುಕೊಂಡಿದ್ದಾರೆ. ಅನಿವಾಸಿ ಭಾರತೀಯರಿಗೆ ಆನ್ಲೈನ್ನಲ್ಲಿ ಸಂಗೀತ ಪಾಠ ಮಾಡುತ್ತಾ ಈ ಸಾಧನೆ ಮಾಡಿದ್ದಾರೆ.</p><p>ಪೋಷಕರಾದ ಪುಷ್ಪಲತಾ– ಕೆ.ಸತೀಶ್ ದಂಪತಿ ಮಗಳಿಗೆ ಆತ್ಮವಿಶ್ವಾಸ ತುಂಬಿದ್ದಾರೆ. ಕನ್ನಡ ಸಂಶೋಧನಾ ಕ್ಷೇತ್ರದಲ್ಲಿ ಕೆಲಸ ಮಾಡುವ ಆಸೆ ಅನಘಾ ಅವರದ್ದು. </p>. <p>‘ಕಣ್ಣುಗಳಿಲ್ಲದಿರುವುದು ಬದುಕಿನ ತೊಡಕಲ್ಲ. ಇತರ ಇಂದ್ರಿಯಗಳ ಸಾಮರ್ಥ್ಯ ಹೆಚ್ಚೇ ಇದೆ. ಸ್ವಾವಲಂಬಿಯಾಗಿ ಬದುಕಲು ಶಿಕ್ಷಣ ಪಡೆಯಬೇಕು. ಹೀಗಾಗಿಯೇ ಸಂಗೀತ– ಸಾಹಿತ್ಯ ಕ್ಷೇತ್ರದಲ್ಲಿ ಹೆಚ್ಚು ಕೆಲಸ ಮಾಡುವ, ಕಲಿಯುವ ಆಸೆಯಿದೆ. ಪಿಎಚ್ಡಿ ಮಾಡಿ ಉಪನ್ಯಾಸಕಿಯಾಗುವೆ’ ಎಂದು ಅನಘಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>