<p><strong>ಮೈಸೂರು:</strong> ಸಮಾಜವಾದಿ ಹೋರಾಟಗಾರ ಪ.ಮಲ್ಲೇಶ್ (89) ಅವರು ನಗರದಲ್ಲಿ ಗುರುವಾರ ನಿಧನರಾದರು.</p>.<p>ಮಧ್ಯಾಹ್ನದವರೆಗೂ ಚೈತನ್ಯದಿಂದಲೇ ಇದ್ದ ಅವರಿಗೆ ಏಕಾಏಕಿ ಸುಸ್ತು ಕಾಣಿಸಿಕೊಂಡಿತ್ತು. ಉಸಿರಾಟದ ಸಮಸ್ಯೆಯೂ ಉಂಟಾಗಿತ್ತು. ಕೂಡಲೇ ಅವರನ್ನು ಅಪೊಲೋ ಆಸ್ಪತ್ರೆಗೆ ಕರೆದೊಯ್ಯವ ವೇಳೆಗೆ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<p>ಅವರು ಮೂವರು ಪುತ್ರಿಯರು ಹಾಗೂ ಒಬ್ಬ ಪುತ್ರನನ್ನು ಅಗಲಿದ್ದಾರೆ. ಎರಡು ವರ್ಷದ ಹಿಂದೆ ಅವರ ಪತ್ನಿ ಸರ್ವಮಂಗಳ ಮೃತಪಟ್ಟಿದ್ದರು.</p>.<p>ಗಾಂಧಿ, ರಾಮಮನೋಹರ ಲೋಹಿಯಾ ಸಿದ್ಧಾಂತದ ಅಪ್ಪಟ ಸಮಾಜವಾದಿಯಾಗಿದ್ದ ಅವರು ಚಿತ್ರದುರ್ಗಕ್ಕೆ ಸೇರಿದ ಗುಡ್ಡದ ರಂಗಪ್ಪನಹಳ್ಳಿಯಲ್ಲಿ ಹುಟ್ಟಿ, ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿ.ಎ. (ಆನರ್ಸ್) ಅಧ್ಯಯನ ಮಾಡಿದ್ದರು.</p>.<p>ಮಾನಸ ಗಂಗೋತ್ರಿಯಲ್ಲಿ ಪ್ರಪಥಮ ತಂಡದಲ್ಲಿ ಕನ್ನಡ ಎಂ.ಎ. ವ್ಯಾಸಂಗ ಮಾಡಿದರು. ಅವರ ಗುರುಗಳಾದ ಪ್ರೊ. ಡಿ.ಎಲ್. ನರಸಿಂಹಚಾರ್, ಪ್ರೊ. ತೀ.ನಂ. ಶ್ರೀಕಂಠಯ್ಯನವರನ್ನು ನೆನೆಯುತ್ತಿದ್ದರು. </p>.<p>ವಿದ್ಯಾರ್ಥಿ ದೆಸೆಯಲ್ಲೆ ಬರೆಯುವ ಹವ್ಯಾಸ ಬೆಳೆಸಿಕೊಂಡ ಮಲ್ಲೇಶ್ ಸಮಾಜವಾದಿ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಹೋರಾಟದ ಹಾದಿಯನ್ನು ತುಳಿದರು.</p>.<p>ಎಪ್ಪತ್ತರ ದಶಕದಲ್ಲಿ ಕರ್ನಾಟಕದ ಪ್ರಗತಿಪರ ಸಂಘಟನೆಗಳಾದ ಬರಹಗಾರರ ಒಕ್ಕೂಟದ ಸಂಸ್ಥಾಪಕ ಕಾರ್ಯದರ್ಶಿ, ಕರ್ನಾಟಕ ವಿಚಾರವಾದಿ ಒಕ್ಕೂಟದ ಸ್ಥಾಪಕ ಅಧ್ಯಕ್ಷ, ಮೇಲುಕೋಟೆಯಲ್ಲಿರುವ ಜನಪದ ಸೇವಾ ಟ್ರಸ್ಟ್ಗೆ ಎರಡು ಬಾರಿ ಅಧ್ಯಕ್ಷ, ಒಮ್ಮೆ ಕಾರ್ಯದರ್ಶಿ ಯಾಗಿದ್ದರು.</p>.<p>ಜಯಪ್ರಕಾಶ್ ನಾರಾಯಣರ ಸಂಪೂರ್ಣ ಕ್ರಾಂತಿ ಆಂದೋಲನವನ್ನು ಕರ್ನಾಟಕದಲ್ಲಿ ಕೆಲವು ಸ್ನೇಹಿತರ ಜೊತೆ ಕಟ್ಟಿ ಸಂಘರ್ಷ ಸಮಿತಿಯ ಸಾರಥ್ಯ ವಹಿಸಿದ್ದರು. ಗೆಳೆಯ ಕೆ. ರಾಮದಾಸ್ ಜೊತೆಗೂಡಿ ಜಯಪ್ರಕಾಶ್ ನಾರಾಯಣರನ್ನು ಕರ್ನಾಟಕಕ್ಕೆ ಕರೆತಂದಿದ್ದರು.</p>.<p>ಕನ್ನಡನಾಡಿನ ನೆಲ, ಜಲ, ಭಾಷೆಯ ಬಗ್ಗೆ ತೀವ್ರ ಕಳಕಳಿ ಹೊಂದಿದ್ದ ಅವರು ಗೋಕಾಕ್ ಮತ್ತು ಕಾವೇರಿ ಚಳುವಳಿಗಳಲ್ಲಿ ಮುಂಚೂಣಿಯಲ್ಲಿದ್ದರು.</p>.<p>ಕೆಲ ವರ್ಷಗಳ ಹಿಂದೆ 'ದ್ವೇಷ ಬಿಟ್ಟು-ದೇಶ ಕಟ್ಟು' ರಾಜ್ಯಮಟ್ಟದ ಚಳುವಳಿಯನ್ನು ಒಂದು ತಿಂಗಳ ಕಾಲ ಸ್ನೇಹಿತರೊಂದಿಗೆ ಸೇರಿ ಕೋಮುವಾದದ ವಿರುದ್ಧ ಹೋರಾಡಿದ್ದರು. </p>.<p>ಮೈಸೂರು ಜಿಲ್ಲೆಯ ಚಾಮಲಾಪುರ ಉಷ್ಣಸ್ಥಾವರವನ್ನು ವಿರೋಧಿಸಿ ಹೋರಾಟ ಕಟ್ಟಿ ಅದಕ್ಕೆ ಶಾಶ್ವತ ತಡೆ ತರುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು.</p>.<p>ಸ್ನಾತಕೋತ್ತರ ಹಂತದವರೆಗೂ, ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲೂ ಕನ್ನಡವೇ ಶಿಕ್ಷಣ ಮಾಧ್ಯಮವಾಗಬೇಕು ಎಂಬುದು ಅವರ ಪ್ರತಿಪಾದನೆಯಾಗಿತ್ತು.</p>.<p>ಗೋಕಾಕ್ ಚಳುವಳಿಯಲ್ಲಿ ಹುಟ್ಟಿಕೊಂಡು ಇಂದಿಗೂ ಕ್ರಿಯಾಶೀಲವಾಗಿ ಹೋರಾಡುತ್ತಿರುವ ಮೈಸೂರಿನ 'ಕನ್ನಡ ಕ್ರಿಯಾ ಸಮಿತಿ'ಯ ಅಧ್ಯಕ್ಷರಾಗಿ, ಸಂಪೂರ್ಣ ಕನ್ನಡ ಮಾಧ್ಯಮದ ನೃಪತುಂಗ ಕನ್ನಡ ಶಾಲೆಯನ್ನು ಪ್ರಾರಂಭಿಸಿದ್ದರು.</p>.<p>1989ರ ಸಂಸತ್ ಚುನಾವಣೆಯಲ್ಲಿ ಜನತಾ ದಳದಿಂದ ಸ್ಪರ್ಧಿಸಿದ್ದ ಅವರು 1,31,905 ಮತಗಳೊಂದಿಗೆ 3ನೇ ಸ್ಥಾನ ಗಳಿಸಿದ್ದರು. ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಎದುರು ಸೋತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಸಮಾಜವಾದಿ ಹೋರಾಟಗಾರ ಪ.ಮಲ್ಲೇಶ್ (89) ಅವರು ನಗರದಲ್ಲಿ ಗುರುವಾರ ನಿಧನರಾದರು.</p>.<p>ಮಧ್ಯಾಹ್ನದವರೆಗೂ ಚೈತನ್ಯದಿಂದಲೇ ಇದ್ದ ಅವರಿಗೆ ಏಕಾಏಕಿ ಸುಸ್ತು ಕಾಣಿಸಿಕೊಂಡಿತ್ತು. ಉಸಿರಾಟದ ಸಮಸ್ಯೆಯೂ ಉಂಟಾಗಿತ್ತು. ಕೂಡಲೇ ಅವರನ್ನು ಅಪೊಲೋ ಆಸ್ಪತ್ರೆಗೆ ಕರೆದೊಯ್ಯವ ವೇಳೆಗೆ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<p>ಅವರು ಮೂವರು ಪುತ್ರಿಯರು ಹಾಗೂ ಒಬ್ಬ ಪುತ್ರನನ್ನು ಅಗಲಿದ್ದಾರೆ. ಎರಡು ವರ್ಷದ ಹಿಂದೆ ಅವರ ಪತ್ನಿ ಸರ್ವಮಂಗಳ ಮೃತಪಟ್ಟಿದ್ದರು.</p>.<p>ಗಾಂಧಿ, ರಾಮಮನೋಹರ ಲೋಹಿಯಾ ಸಿದ್ಧಾಂತದ ಅಪ್ಪಟ ಸಮಾಜವಾದಿಯಾಗಿದ್ದ ಅವರು ಚಿತ್ರದುರ್ಗಕ್ಕೆ ಸೇರಿದ ಗುಡ್ಡದ ರಂಗಪ್ಪನಹಳ್ಳಿಯಲ್ಲಿ ಹುಟ್ಟಿ, ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿ.ಎ. (ಆನರ್ಸ್) ಅಧ್ಯಯನ ಮಾಡಿದ್ದರು.</p>.<p>ಮಾನಸ ಗಂಗೋತ್ರಿಯಲ್ಲಿ ಪ್ರಪಥಮ ತಂಡದಲ್ಲಿ ಕನ್ನಡ ಎಂ.ಎ. ವ್ಯಾಸಂಗ ಮಾಡಿದರು. ಅವರ ಗುರುಗಳಾದ ಪ್ರೊ. ಡಿ.ಎಲ್. ನರಸಿಂಹಚಾರ್, ಪ್ರೊ. ತೀ.ನಂ. ಶ್ರೀಕಂಠಯ್ಯನವರನ್ನು ನೆನೆಯುತ್ತಿದ್ದರು. </p>.<p>ವಿದ್ಯಾರ್ಥಿ ದೆಸೆಯಲ್ಲೆ ಬರೆಯುವ ಹವ್ಯಾಸ ಬೆಳೆಸಿಕೊಂಡ ಮಲ್ಲೇಶ್ ಸಮಾಜವಾದಿ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಹೋರಾಟದ ಹಾದಿಯನ್ನು ತುಳಿದರು.</p>.<p>ಎಪ್ಪತ್ತರ ದಶಕದಲ್ಲಿ ಕರ್ನಾಟಕದ ಪ್ರಗತಿಪರ ಸಂಘಟನೆಗಳಾದ ಬರಹಗಾರರ ಒಕ್ಕೂಟದ ಸಂಸ್ಥಾಪಕ ಕಾರ್ಯದರ್ಶಿ, ಕರ್ನಾಟಕ ವಿಚಾರವಾದಿ ಒಕ್ಕೂಟದ ಸ್ಥಾಪಕ ಅಧ್ಯಕ್ಷ, ಮೇಲುಕೋಟೆಯಲ್ಲಿರುವ ಜನಪದ ಸೇವಾ ಟ್ರಸ್ಟ್ಗೆ ಎರಡು ಬಾರಿ ಅಧ್ಯಕ್ಷ, ಒಮ್ಮೆ ಕಾರ್ಯದರ್ಶಿ ಯಾಗಿದ್ದರು.</p>.<p>ಜಯಪ್ರಕಾಶ್ ನಾರಾಯಣರ ಸಂಪೂರ್ಣ ಕ್ರಾಂತಿ ಆಂದೋಲನವನ್ನು ಕರ್ನಾಟಕದಲ್ಲಿ ಕೆಲವು ಸ್ನೇಹಿತರ ಜೊತೆ ಕಟ್ಟಿ ಸಂಘರ್ಷ ಸಮಿತಿಯ ಸಾರಥ್ಯ ವಹಿಸಿದ್ದರು. ಗೆಳೆಯ ಕೆ. ರಾಮದಾಸ್ ಜೊತೆಗೂಡಿ ಜಯಪ್ರಕಾಶ್ ನಾರಾಯಣರನ್ನು ಕರ್ನಾಟಕಕ್ಕೆ ಕರೆತಂದಿದ್ದರು.</p>.<p>ಕನ್ನಡನಾಡಿನ ನೆಲ, ಜಲ, ಭಾಷೆಯ ಬಗ್ಗೆ ತೀವ್ರ ಕಳಕಳಿ ಹೊಂದಿದ್ದ ಅವರು ಗೋಕಾಕ್ ಮತ್ತು ಕಾವೇರಿ ಚಳುವಳಿಗಳಲ್ಲಿ ಮುಂಚೂಣಿಯಲ್ಲಿದ್ದರು.</p>.<p>ಕೆಲ ವರ್ಷಗಳ ಹಿಂದೆ 'ದ್ವೇಷ ಬಿಟ್ಟು-ದೇಶ ಕಟ್ಟು' ರಾಜ್ಯಮಟ್ಟದ ಚಳುವಳಿಯನ್ನು ಒಂದು ತಿಂಗಳ ಕಾಲ ಸ್ನೇಹಿತರೊಂದಿಗೆ ಸೇರಿ ಕೋಮುವಾದದ ವಿರುದ್ಧ ಹೋರಾಡಿದ್ದರು. </p>.<p>ಮೈಸೂರು ಜಿಲ್ಲೆಯ ಚಾಮಲಾಪುರ ಉಷ್ಣಸ್ಥಾವರವನ್ನು ವಿರೋಧಿಸಿ ಹೋರಾಟ ಕಟ್ಟಿ ಅದಕ್ಕೆ ಶಾಶ್ವತ ತಡೆ ತರುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು.</p>.<p>ಸ್ನಾತಕೋತ್ತರ ಹಂತದವರೆಗೂ, ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲೂ ಕನ್ನಡವೇ ಶಿಕ್ಷಣ ಮಾಧ್ಯಮವಾಗಬೇಕು ಎಂಬುದು ಅವರ ಪ್ರತಿಪಾದನೆಯಾಗಿತ್ತು.</p>.<p>ಗೋಕಾಕ್ ಚಳುವಳಿಯಲ್ಲಿ ಹುಟ್ಟಿಕೊಂಡು ಇಂದಿಗೂ ಕ್ರಿಯಾಶೀಲವಾಗಿ ಹೋರಾಡುತ್ತಿರುವ ಮೈಸೂರಿನ 'ಕನ್ನಡ ಕ್ರಿಯಾ ಸಮಿತಿ'ಯ ಅಧ್ಯಕ್ಷರಾಗಿ, ಸಂಪೂರ್ಣ ಕನ್ನಡ ಮಾಧ್ಯಮದ ನೃಪತುಂಗ ಕನ್ನಡ ಶಾಲೆಯನ್ನು ಪ್ರಾರಂಭಿಸಿದ್ದರು.</p>.<p>1989ರ ಸಂಸತ್ ಚುನಾವಣೆಯಲ್ಲಿ ಜನತಾ ದಳದಿಂದ ಸ್ಪರ್ಧಿಸಿದ್ದ ಅವರು 1,31,905 ಮತಗಳೊಂದಿಗೆ 3ನೇ ಸ್ಥಾನ ಗಳಿಸಿದ್ದರು. ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಎದುರು ಸೋತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>