<p><strong>ಮೈಸೂರು</strong>: ಸರ್ಕಾರ ಭತ್ತವನ್ನು ಖರೀದಿ ಕೇಂದ್ರ ಮೂಲಕ ಖರೀದಿಸದೇ ವಿಳಂಬ ಧೋರಣೆ ಅನುಸರಿಸುತ್ತಿದೆ. ಇದರಿಂದ ಉಂಟಾಗಿರುವ ನಷ್ಟವನ್ನು ಪ್ರತಿ ಕ್ವಿಂಟಾಲ್ಗೆ ₹ 400-500 ಪರಿಹಾರ ನೀಡಿ ಭರಿಸಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಮತ್ತು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಸೋಮವಾರ ಇಲ್ಲಿ ಪ್ರತಿಭಟನೆ ನಡೆಸಿದರು.</p>.<p>ಕಬ್ಬಿಗೆ ಪ್ರತಿ ಟನ್ನಿಗೆ ಕನಿಷ್ಠ ₹ 800 ನಿಗದಿ ಮಾಡಬೇಕು. ಶ್ರೀ ರಾಮ ಸಕ್ಕರೆ ಕಾರ್ಖಾನೆಯನ್ನು ಶೀಘ್ರದಲ್ಲಿ ಪುನರ್ ಆರಂಭಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p>ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ ರೈತರು, ಕೂಡಲೇ ಸಭೆ ಕರೆದು ರೈತರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಅಧಿಕಾರ ಆಸೆಗಾಗಿ ರಾಜ್ಯ ನಾಯಕರು ರೆಸಾರ್ಟ್ನಲ್ಲಿ ಮಜಾ ಮಾಡುತ್ತಿದ್ದಾರೆ. ಆದರೆ, ಇತ್ತ ರೈತರು ತಾವು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೇ ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯಲ್ಲಿ ಕೀಳನಪುರ ಶಿವಣ್ಣ, ಮಾದನಹಳ್ಳಿ ಗಿರೀಶ್, ಮಾರಳ್ಳಿ ಮಂಜು ಸೇರಿದಂತೆ ಹಲವರು ಇದ್ದರು.</p>.<p><strong>ಅಲೆಮಾರಿ ಜನಾಂಗದವರಿಗೆ ನಿವೇಶನ ನೀಡಲು ಒತ್ತಾಯ</strong></p>.<p>ಸರ್ಕಾರಿ ಗೋಮಾಳವನ್ನು ಭೂಗಳ್ಳರಿಂದ ರಕ್ಷಿಸಿ, ಅಲ್ಲಿ ಅಲೆಮಾರಿ ಜನಾಂಗದವರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಶ್ಯಾದನಹಳ್ಳಿ ಗ್ರಾಮಕ್ಕೆ ಸೇರಿದ ಸುಮಾರು 80ಕ್ಕೂ ಹೆಚ್ಚು ಎಕರೆ ವಿಸ್ತೀರ್ಣದ ಸರ್ಕಾರಿ ಗೋಮಾಳದಲ್ಲಿ ರೈತರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಲು ಅಧಿಕಾರಿಗಳು ಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.</p>.<p>ಇಲ್ಲಿ ಶಿಳ್ಳೆಕ್ಯಾತ, ದೊಂಬಿದಾಸ, ಕೊರಮ, ಚಿನ್ನದಾಸರ್, ಹಕ್ಕಿಪಿಕ್ಕಿ ಮೊದಲಾದ 480ಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಅವರು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಘಟಕದ ಸಂಚಾಲಕ ಚೋರನಹಳ್ಳಿ ಶಿವಣ್ಣ, ಮುಖಂಡರಾದ ಕುಮಾರ್ ಕಲ್ಲಹಳ್ಳಿ, ನಾಗರಾಜು, ಶಿವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಸರ್ಕಾರ ಭತ್ತವನ್ನು ಖರೀದಿ ಕೇಂದ್ರ ಮೂಲಕ ಖರೀದಿಸದೇ ವಿಳಂಬ ಧೋರಣೆ ಅನುಸರಿಸುತ್ತಿದೆ. ಇದರಿಂದ ಉಂಟಾಗಿರುವ ನಷ್ಟವನ್ನು ಪ್ರತಿ ಕ್ವಿಂಟಾಲ್ಗೆ ₹ 400-500 ಪರಿಹಾರ ನೀಡಿ ಭರಿಸಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಮತ್ತು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಸೋಮವಾರ ಇಲ್ಲಿ ಪ್ರತಿಭಟನೆ ನಡೆಸಿದರು.</p>.<p>ಕಬ್ಬಿಗೆ ಪ್ರತಿ ಟನ್ನಿಗೆ ಕನಿಷ್ಠ ₹ 800 ನಿಗದಿ ಮಾಡಬೇಕು. ಶ್ರೀ ರಾಮ ಸಕ್ಕರೆ ಕಾರ್ಖಾನೆಯನ್ನು ಶೀಘ್ರದಲ್ಲಿ ಪುನರ್ ಆರಂಭಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p>ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ ರೈತರು, ಕೂಡಲೇ ಸಭೆ ಕರೆದು ರೈತರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಅಧಿಕಾರ ಆಸೆಗಾಗಿ ರಾಜ್ಯ ನಾಯಕರು ರೆಸಾರ್ಟ್ನಲ್ಲಿ ಮಜಾ ಮಾಡುತ್ತಿದ್ದಾರೆ. ಆದರೆ, ಇತ್ತ ರೈತರು ತಾವು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೇ ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯಲ್ಲಿ ಕೀಳನಪುರ ಶಿವಣ್ಣ, ಮಾದನಹಳ್ಳಿ ಗಿರೀಶ್, ಮಾರಳ್ಳಿ ಮಂಜು ಸೇರಿದಂತೆ ಹಲವರು ಇದ್ದರು.</p>.<p><strong>ಅಲೆಮಾರಿ ಜನಾಂಗದವರಿಗೆ ನಿವೇಶನ ನೀಡಲು ಒತ್ತಾಯ</strong></p>.<p>ಸರ್ಕಾರಿ ಗೋಮಾಳವನ್ನು ಭೂಗಳ್ಳರಿಂದ ರಕ್ಷಿಸಿ, ಅಲ್ಲಿ ಅಲೆಮಾರಿ ಜನಾಂಗದವರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಶ್ಯಾದನಹಳ್ಳಿ ಗ್ರಾಮಕ್ಕೆ ಸೇರಿದ ಸುಮಾರು 80ಕ್ಕೂ ಹೆಚ್ಚು ಎಕರೆ ವಿಸ್ತೀರ್ಣದ ಸರ್ಕಾರಿ ಗೋಮಾಳದಲ್ಲಿ ರೈತರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಲು ಅಧಿಕಾರಿಗಳು ಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.</p>.<p>ಇಲ್ಲಿ ಶಿಳ್ಳೆಕ್ಯಾತ, ದೊಂಬಿದಾಸ, ಕೊರಮ, ಚಿನ್ನದಾಸರ್, ಹಕ್ಕಿಪಿಕ್ಕಿ ಮೊದಲಾದ 480ಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಅವರು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಘಟಕದ ಸಂಚಾಲಕ ಚೋರನಹಳ್ಳಿ ಶಿವಣ್ಣ, ಮುಖಂಡರಾದ ಕುಮಾರ್ ಕಲ್ಲಹಳ್ಳಿ, ನಾಗರಾಜು, ಶಿವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>