<p><strong>ಮೈಸೂರು</strong>: ‘ಮಕ್ಕಳ ಬೆಳವಣಿಗೆಗೆ ಪೋಷಕರ ಶ್ರಮ ಹೆಚ್ಚಿದ್ದು, ಅವರ ತ್ಯಾಗದ ಬಗ್ಗೆ ಅರಿತು ಮಕ್ಕಳು ಉತ್ತಮ ಬದುಕನ್ನು ರೂಪಿಸಿಕೊಳ್ಳಬೇಕು’ ಎಂದು ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ತಿಳಿಸಿದರು.</p>.<p>ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘದಿಂದ ಸೋಮವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.</p>.<p>‘ಮಕ್ಕಳಿಂದ ಯಾವುದೇ ನಿರೀಕ್ಷೆ ಮಾಡದೇ ಪೋಷಕರು ವಿದ್ಯಾಭ್ಯಾಸಕ್ಕೆ ಬೆಂಬಲವಾಗಿ ನಿಲ್ಲುತ್ತಾರೆ. ಶೈಕ್ಷಣಿಕ ಸಮಯದಲ್ಲಿ ತಪ್ಪು ದಾರಿ ಹಿಡಿಯದೆ, ಸಮಾಜ ಗುರುತಿಸುವ ವ್ಯಕ್ತಿತ್ವ ಬೆಳೆಸಿಕೊಂಡಾಗ ಅವರ ಶ್ರಮಕ್ಕೆ ಪ್ರತಿಫಲ ಸಿಕ್ಕಿದಂತಾಗುತ್ತದೆ’ ಎಂದು ಹೇಳಿದರು.</p>.<p>ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಪದವಿಯಲ್ಲಿ ಅತಿಹೆಚ್ಚು ಅಂಕ ಪಡೆದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<p>ಪಾಲಿಕೆ ವಲಯ ಅಧಿಕಾರಿ ದಾಸೇಗೌಡ, ಸೋಮಶೇಖರ್, ಸಂಘದ ಅಧ್ಯಕ್ಷ ಎಸ್.ಯಶೋಧರ, ಉಪಾಧ್ಯಕ್ಷೆ ಕೆ.ಸುಮಂಗಳಾ, ಖಜಾಂಚಿ ನಸುಲ್ಲಾ, ನಿರ್ದೇಶಕರಾದ ಬಿ.ಪ್ರಸಾದ್, ಎಸ್.ಮೈತ್ರಿ, ಎನ್.ಮಂಜುನಾಥ್, ಎಚ್.ಎಂ.ಶಿವಪ್ರಸಾದ್, ವಿ.ರಾಜೇಶ್ವರಿ ಬಾಯಿ, ಎಂ.ಬಸವಣ್ಣ, ಡಿ.ಸುರೇಂದ್ರಕುಮಾರ್, ಕೆ.ವಿಶ್ವನಾಥ್, ಬಿ.ರಾಜು, ಕಾರ್ಯದರ್ಶಿ ಎನ್.ಶಿವಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಮಕ್ಕಳ ಬೆಳವಣಿಗೆಗೆ ಪೋಷಕರ ಶ್ರಮ ಹೆಚ್ಚಿದ್ದು, ಅವರ ತ್ಯಾಗದ ಬಗ್ಗೆ ಅರಿತು ಮಕ್ಕಳು ಉತ್ತಮ ಬದುಕನ್ನು ರೂಪಿಸಿಕೊಳ್ಳಬೇಕು’ ಎಂದು ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ತಿಳಿಸಿದರು.</p>.<p>ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘದಿಂದ ಸೋಮವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.</p>.<p>‘ಮಕ್ಕಳಿಂದ ಯಾವುದೇ ನಿರೀಕ್ಷೆ ಮಾಡದೇ ಪೋಷಕರು ವಿದ್ಯಾಭ್ಯಾಸಕ್ಕೆ ಬೆಂಬಲವಾಗಿ ನಿಲ್ಲುತ್ತಾರೆ. ಶೈಕ್ಷಣಿಕ ಸಮಯದಲ್ಲಿ ತಪ್ಪು ದಾರಿ ಹಿಡಿಯದೆ, ಸಮಾಜ ಗುರುತಿಸುವ ವ್ಯಕ್ತಿತ್ವ ಬೆಳೆಸಿಕೊಂಡಾಗ ಅವರ ಶ್ರಮಕ್ಕೆ ಪ್ರತಿಫಲ ಸಿಕ್ಕಿದಂತಾಗುತ್ತದೆ’ ಎಂದು ಹೇಳಿದರು.</p>.<p>ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಪದವಿಯಲ್ಲಿ ಅತಿಹೆಚ್ಚು ಅಂಕ ಪಡೆದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<p>ಪಾಲಿಕೆ ವಲಯ ಅಧಿಕಾರಿ ದಾಸೇಗೌಡ, ಸೋಮಶೇಖರ್, ಸಂಘದ ಅಧ್ಯಕ್ಷ ಎಸ್.ಯಶೋಧರ, ಉಪಾಧ್ಯಕ್ಷೆ ಕೆ.ಸುಮಂಗಳಾ, ಖಜಾಂಚಿ ನಸುಲ್ಲಾ, ನಿರ್ದೇಶಕರಾದ ಬಿ.ಪ್ರಸಾದ್, ಎಸ್.ಮೈತ್ರಿ, ಎನ್.ಮಂಜುನಾಥ್, ಎಚ್.ಎಂ.ಶಿವಪ್ರಸಾದ್, ವಿ.ರಾಜೇಶ್ವರಿ ಬಾಯಿ, ಎಂ.ಬಸವಣ್ಣ, ಡಿ.ಸುರೇಂದ್ರಕುಮಾರ್, ಕೆ.ವಿಶ್ವನಾಥ್, ಬಿ.ರಾಜು, ಕಾರ್ಯದರ್ಶಿ ಎನ್.ಶಿವಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>