<p><strong>ಮೈಸೂರು:</strong> ಶ್ರೀ ಅನಿಕೇತನ ಟ್ರಸ್ಟ್ನ ಅಂಗಸಂಸ್ಥೆಯಾದ ಪರಿವರ್ತನಾ ಬಿಸಿನೆಸ್ ಸ್ಕೂಲ್ನಿಂದ ಶನಿವಾರ ವಿಜ್ಞಾನ ಭವನದಲ್ಲಿ ಆಯೋಜಿಸಿದ್ದ ಪದವಿ ಪ್ರದಾನ ಸಮಾರಂಭದಲ್ಲಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ 120 ಎಂಬಿಎ ಮತ್ತು 45 ಎಂಸಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.</p>.<p>ಬಳಿಕ ಮಾತನಾಡಿದ ಅವರು, ‘ಪಠ್ಯದ ಜೊತೆಗೆ ಪಠ್ಯೇತರವಾಗಿಯೂ ಗುರುತಿಸಿಕೊಂಡು ಜ್ಞಾನ ವಿಸ್ತರಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಪದವಿ ಪಡೆದರೆ ಉದ್ಯೋಗ ಎಂಬ ಮಾತು ಕಡಿಮೆಯಾಗಿದೆ. ಅದರೊಂದಿಗೆ ಕೌಶಲವೂ ಅಗತ್ಯ ಎಂಬ ಬೇಡಿಕೆ ಹೆಚ್ಚಾಗಿದೆ. ವಿದ್ಯಾರ್ಥಿಗಳು ಪ್ರಸ್ತುತ ಸಮಾಜದ ತುಡಿತವನ್ನು ಅರ್ಥೈಸಿಕೊಳ್ಳಬೇಕು’ ಎಂದರು.</p>.<p>‘ಕೇವಲ ಸಂಪಾದನೆಯೊಂದೇ ಜೀವನದ ದಾರಿಯಾಗಬಾರದು. ಸಮಾಜ ಸೇವೆಯ ಮೂಲಕ ಉತ್ತಮ ಜಗತ್ತನ್ನು ನಿರ್ಮಿಸಬಹುದು. ಯಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳು ಭಾವನೆಗಳಿಂದ ದೂರವಾಗುತ್ತಿದ್ದು, ಶಿಕ್ಷಣವು ಈ ವಿಚಾರಗಳನ್ನು ಸರಿಪಡಿಸುವ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಸಂಸ್ಥೆಯ ಎನ್.ಎಸ್. ರಾಮೇಗೌಡ, ಪುಟ್ಟೇಗೌಡ, ಬಿ. ವಿ. ಕುಮಾರ್, ಕೆ.ಬಿ. ಧನಂಜಯ, ಪಿ. ಮಂಜೂರಾಮ್, ಪ್ರೊ. ಎನ್. ರಾಮು, ಜಿ. ರಘುನಂದನ, ಎಂ.ಎಂ. ಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಶ್ರೀ ಅನಿಕೇತನ ಟ್ರಸ್ಟ್ನ ಅಂಗಸಂಸ್ಥೆಯಾದ ಪರಿವರ್ತನಾ ಬಿಸಿನೆಸ್ ಸ್ಕೂಲ್ನಿಂದ ಶನಿವಾರ ವಿಜ್ಞಾನ ಭವನದಲ್ಲಿ ಆಯೋಜಿಸಿದ್ದ ಪದವಿ ಪ್ರದಾನ ಸಮಾರಂಭದಲ್ಲಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ 120 ಎಂಬಿಎ ಮತ್ತು 45 ಎಂಸಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.</p>.<p>ಬಳಿಕ ಮಾತನಾಡಿದ ಅವರು, ‘ಪಠ್ಯದ ಜೊತೆಗೆ ಪಠ್ಯೇತರವಾಗಿಯೂ ಗುರುತಿಸಿಕೊಂಡು ಜ್ಞಾನ ವಿಸ್ತರಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಪದವಿ ಪಡೆದರೆ ಉದ್ಯೋಗ ಎಂಬ ಮಾತು ಕಡಿಮೆಯಾಗಿದೆ. ಅದರೊಂದಿಗೆ ಕೌಶಲವೂ ಅಗತ್ಯ ಎಂಬ ಬೇಡಿಕೆ ಹೆಚ್ಚಾಗಿದೆ. ವಿದ್ಯಾರ್ಥಿಗಳು ಪ್ರಸ್ತುತ ಸಮಾಜದ ತುಡಿತವನ್ನು ಅರ್ಥೈಸಿಕೊಳ್ಳಬೇಕು’ ಎಂದರು.</p>.<p>‘ಕೇವಲ ಸಂಪಾದನೆಯೊಂದೇ ಜೀವನದ ದಾರಿಯಾಗಬಾರದು. ಸಮಾಜ ಸೇವೆಯ ಮೂಲಕ ಉತ್ತಮ ಜಗತ್ತನ್ನು ನಿರ್ಮಿಸಬಹುದು. ಯಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳು ಭಾವನೆಗಳಿಂದ ದೂರವಾಗುತ್ತಿದ್ದು, ಶಿಕ್ಷಣವು ಈ ವಿಚಾರಗಳನ್ನು ಸರಿಪಡಿಸುವ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಸಂಸ್ಥೆಯ ಎನ್.ಎಸ್. ರಾಮೇಗೌಡ, ಪುಟ್ಟೇಗೌಡ, ಬಿ. ವಿ. ಕುಮಾರ್, ಕೆ.ಬಿ. ಧನಂಜಯ, ಪಿ. ಮಂಜೂರಾಮ್, ಪ್ರೊ. ಎನ್. ರಾಮು, ಜಿ. ರಘುನಂದನ, ಎಂ.ಎಂ. ಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>