‘ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಿ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿರುವುದು ಸರಿಯಲ್ಲ. ಇಲ್ಲಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರೇ ಅಂತಿಮ. ಅವರು ಮೈಸೂರು ಕಟ್ಟಿ– ಬೆಳೆಸಿ, ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅಬ್ಬಯ್ಯ ಅವರ ವೈಯಕ್ತಿಕ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ನ ಯಾವ ಶಾಸಕರೂ ಬೆಂಬಲ ಸೂಚಿಸಿಲ್ಲ. ಸರ್ಕಾರದ ಮುಂದೆ ಕೂಡ ಇಂತಹ ಪ್ರಸ್ತಾವ ಇಲ್ಲ’ ಎಂದು ಪ್ರತಿಕ್ರಿಯಿಸಿದರು.