<p><strong>ಮೈಸೂರು</strong>: ರಂಗಾಯಣ ಮತ್ತು ಡಾ.ಎಸ್.ಎಲ್.ಭೈರಪ್ಪ ಸಾಹಿತ್ಯ ಪ್ರತಿಷ್ಠಾನದ ವತಿಯಿಂದ, ಪರ್ವ ಕಾದಂಬರಿ ಹಾಗೂ ರಂಗಪ್ರಸ್ತುತಿ ಕುರಿತಾಗಿ ಇದೇ 21ರಂದು ಮೈಸೂರಿನಲ್ಲಿ, ‘ಪರ್ವ ವಿರಾಟ್ ದರ್ಶನ’ ವಿಚಾರ ಸಂಕಿರಣ ಆಯೋಜಿಸಲಾಗಿದೆ.</p>.<p>‘ಪರ್ವ’ ನಾಟಕ ಪ್ರದರ್ಶನಕ್ಕೆ ಪೂರ್ವಭಾವಿಯಾಗಿ ಭಾನುವಾರ ಬೆಳಿಗ್ಗೆ 10ಕ್ಕೆ ಕಲಾಮಂದಿರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಎಸ್.ಎಲ್. ಭೈರಪ್ಪ ಉದ್ಘಾಟಿಸುವರು. ಇದೇ ಸಂದರ್ಭದಲ್ಲಿ, ಮಾರ್ಚ್ 12, 13 ಮತ್ತು 14ರಂದು ಕಲಾಮಂದಿರದಲ್ಲಿ ಪ್ರದರ್ಶನಗೊಳ್ಳಲಿರುವ ನಾಟಕದ ಟಿಕೆಟ್ ಬಿಡುಗಡೆ ಮಾಡಲಿದ್ದಾರೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<p>ಪರ್ವ ಕಾದಂಬರಿಯ ರಷ್ಯನ್ ಮತ್ತು ಮ್ಯಾಂಡರಿನ್ ಭಾಷೆಯ ಆವೃತ್ತಿಯನ್ನು ಶತಾವಧಾನಿ ಆರ್. ಗಣೇಶ್ ಬಿಡುಗಡೆ ಮಾಡಲಿದ್ದು, ‘ಪರ್ವ ವಿರಾಟ್ ದರ್ಶನ’ ಕುರಿತು ಉಪನ್ಯಾಸ ನೀಡುವರು. ‘ಪರ್ವ ಚಿಗುರೊಡೆದ ಬಗೆ’ ಕುರಿತು ನಾಟಕ ನಿರ್ದೇಶಕ ಪ್ರಕಾಶ ಬೆಳವಾಡಿ ಮಾತನಾಡಲಿದ್ದಾರೆ.</p>.<p>ಮಧ್ಯಾಹ್ನ 2.30ಕ್ಕೆ ‘ಪರ್ವ– ನಾಲ್ಕು ದಶಕದ ನೆನಪು’ಗಳನ್ನು ಎಸ್.ಎಲ್.ಭೈರಪ್ಪ ಹಂಚಿಕೊಳ್ಳಲಿದ್ದಾರೆ. ಎಸ್.ಎಲ್.ಭೈರಪ್ಪ ಸಾಹಿತ್ಯ ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಜಿ.ಎಲ್.ಶೇಖರ್, ರಂಗಾಯಣ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ ಪಾಲ್ಗೊಳ್ಳುವರು. ವಿಚಾರ ಸಂಕಿರಣದಲ್ಲಿ ಭಾಗವಹಿಸಲು 600 ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ರಂಗಾಯಣ ಮತ್ತು ಡಾ.ಎಸ್.ಎಲ್.ಭೈರಪ್ಪ ಸಾಹಿತ್ಯ ಪ್ರತಿಷ್ಠಾನದ ವತಿಯಿಂದ, ಪರ್ವ ಕಾದಂಬರಿ ಹಾಗೂ ರಂಗಪ್ರಸ್ತುತಿ ಕುರಿತಾಗಿ ಇದೇ 21ರಂದು ಮೈಸೂರಿನಲ್ಲಿ, ‘ಪರ್ವ ವಿರಾಟ್ ದರ್ಶನ’ ವಿಚಾರ ಸಂಕಿರಣ ಆಯೋಜಿಸಲಾಗಿದೆ.</p>.<p>‘ಪರ್ವ’ ನಾಟಕ ಪ್ರದರ್ಶನಕ್ಕೆ ಪೂರ್ವಭಾವಿಯಾಗಿ ಭಾನುವಾರ ಬೆಳಿಗ್ಗೆ 10ಕ್ಕೆ ಕಲಾಮಂದಿರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಎಸ್.ಎಲ್. ಭೈರಪ್ಪ ಉದ್ಘಾಟಿಸುವರು. ಇದೇ ಸಂದರ್ಭದಲ್ಲಿ, ಮಾರ್ಚ್ 12, 13 ಮತ್ತು 14ರಂದು ಕಲಾಮಂದಿರದಲ್ಲಿ ಪ್ರದರ್ಶನಗೊಳ್ಳಲಿರುವ ನಾಟಕದ ಟಿಕೆಟ್ ಬಿಡುಗಡೆ ಮಾಡಲಿದ್ದಾರೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<p>ಪರ್ವ ಕಾದಂಬರಿಯ ರಷ್ಯನ್ ಮತ್ತು ಮ್ಯಾಂಡರಿನ್ ಭಾಷೆಯ ಆವೃತ್ತಿಯನ್ನು ಶತಾವಧಾನಿ ಆರ್. ಗಣೇಶ್ ಬಿಡುಗಡೆ ಮಾಡಲಿದ್ದು, ‘ಪರ್ವ ವಿರಾಟ್ ದರ್ಶನ’ ಕುರಿತು ಉಪನ್ಯಾಸ ನೀಡುವರು. ‘ಪರ್ವ ಚಿಗುರೊಡೆದ ಬಗೆ’ ಕುರಿತು ನಾಟಕ ನಿರ್ದೇಶಕ ಪ್ರಕಾಶ ಬೆಳವಾಡಿ ಮಾತನಾಡಲಿದ್ದಾರೆ.</p>.<p>ಮಧ್ಯಾಹ್ನ 2.30ಕ್ಕೆ ‘ಪರ್ವ– ನಾಲ್ಕು ದಶಕದ ನೆನಪು’ಗಳನ್ನು ಎಸ್.ಎಲ್.ಭೈರಪ್ಪ ಹಂಚಿಕೊಳ್ಳಲಿದ್ದಾರೆ. ಎಸ್.ಎಲ್.ಭೈರಪ್ಪ ಸಾಹಿತ್ಯ ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಜಿ.ಎಲ್.ಶೇಖರ್, ರಂಗಾಯಣ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ ಪಾಲ್ಗೊಳ್ಳುವರು. ವಿಚಾರ ಸಂಕಿರಣದಲ್ಲಿ ಭಾಗವಹಿಸಲು 600 ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>