<p><strong>ಮೈಸೂರು:</strong> ‘ಹೊರವಲಯದ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬಳಿ ನೂತನವಾಗಿ ಪಾದಚಾರಿ ಸೇತುವೆ ನಿರ್ಮಿಸಲಾಗುತ್ತಿದ್ದು, ಅತಿ ಶೀಘ್ರದಲ್ಲೇ ಇದು ಪೂರ್ಣಗೊಳ್ಳಲಿದೆ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.</p>.<p>ಕೆ.ಆರ್.ಮಿಲ್ ಬಳಿ ನಡೆಯುತ್ತಿರುವ ಪಾದಚಾರಿ ಸೇತುವೆ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ಇಲ್ಲಿನ ಜನರು ರಾಷ್ಟ್ರೀಯ ಹೆದ್ದಾರಿಯನ್ನು ದಾಟುವುದು ಕಷ್ಟವಾಗುತ್ತಿತ್ತು. ಈ ಬಗ್ಗೆ ಅವರು ಕುಂದುಕೊರತೆ ಹೇಳಿಕೊಂಡಾಗ ಕೂಡಲೇ ಇದನ್ನು ನಿರ್ಮಿಸುವ ಕುರಿತು ಕ್ರಮ ಕೈಗೊಳ್ಳಲಾಯಿತು. ಕಾಮಗಾರಿ ತ್ವರಿತವಾಗಿ ಸಾಗುತ್ತಿದ್ದು, ಬೇಗ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.</p>.<p>‘ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಎಲ್ಲ ಕೆಲಸಗಳನ್ನೂ ಮಾಡಲಾಗುವುದು. ಅಭಿವೃದ್ಧಿಯ ಜೊತೆಗೆ ಜನೋಪಯೋಗಿ ಕೆಲಸಗಳಿಗೂ ಆದ್ಯತೆ ನೀಡಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಹೊರವಲಯದ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬಳಿ ನೂತನವಾಗಿ ಪಾದಚಾರಿ ಸೇತುವೆ ನಿರ್ಮಿಸಲಾಗುತ್ತಿದ್ದು, ಅತಿ ಶೀಘ್ರದಲ್ಲೇ ಇದು ಪೂರ್ಣಗೊಳ್ಳಲಿದೆ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.</p>.<p>ಕೆ.ಆರ್.ಮಿಲ್ ಬಳಿ ನಡೆಯುತ್ತಿರುವ ಪಾದಚಾರಿ ಸೇತುವೆ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ಇಲ್ಲಿನ ಜನರು ರಾಷ್ಟ್ರೀಯ ಹೆದ್ದಾರಿಯನ್ನು ದಾಟುವುದು ಕಷ್ಟವಾಗುತ್ತಿತ್ತು. ಈ ಬಗ್ಗೆ ಅವರು ಕುಂದುಕೊರತೆ ಹೇಳಿಕೊಂಡಾಗ ಕೂಡಲೇ ಇದನ್ನು ನಿರ್ಮಿಸುವ ಕುರಿತು ಕ್ರಮ ಕೈಗೊಳ್ಳಲಾಯಿತು. ಕಾಮಗಾರಿ ತ್ವರಿತವಾಗಿ ಸಾಗುತ್ತಿದ್ದು, ಬೇಗ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.</p>.<p>‘ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಎಲ್ಲ ಕೆಲಸಗಳನ್ನೂ ಮಾಡಲಾಗುವುದು. ಅಭಿವೃದ್ಧಿಯ ಜೊತೆಗೆ ಜನೋಪಯೋಗಿ ಕೆಲಸಗಳಿಗೂ ಆದ್ಯತೆ ನೀಡಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>