<p><strong>ಪಿರಿಯಾಪಟ್ಟಣ</strong>: ತಾಲ್ಲೂಕಿನ ಚಿಟ್ಟೆನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಆಗಿದ್ದಾರೆ.</p>.<p>12 ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 10 ಮಂದಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಬೆಂಬಲಿತ ಒಬ್ಬರು ಮಾತ್ರ ಆಯ್ಕೆಯಾಗುವ ಮೂಲಕ ಹೀನಾಯವಾಗಿ ಸೋಲನುಭವಿಸಿದ್ದರೆ, ಸ್ವತಂತ್ರವಾಗಿ ಸ್ಪರ್ಧಿಸಿದ್ದ ಒಬ್ಬರು ಗೆಲುವು ಸಾಧಿಸಿದ್ದಾರೆ.</p>.<p><strong>ಜೆಡಿಎಸ್ ಬೆಂಬಲಿತ ನಿರ್ದೇಶಕರು</strong>: ಸಿ. ಎನ್. ರವಿ, ದಿನೇಶ್, ಆಶಾ, ಸ್ವಾಮಿಗೌಡ, ಜಯರಾಮ,ಎಚ್. ಕೆ. ತಮ್ಮೇಗೌಡ, ಜಿ.ಎಸ್. ನಾಗರಾಜ, ನಾಗು, ಎಚ್. ಟಿ.ಜಗದೀಶ್ ಆಯ್ಕೆಯಾಗಿದ್ದಾರೆ. ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಹಂಚಿ ಸಂಭ್ರಮಿಸಿದರು.</p>.<p>ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಬಿ. ಎಸ್. ರಾಮಚಂದ್ರ , ಪ್ರಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ್ ಗೆಲುವು ಸಾಧಿಸಿದ್ದಾರೆ.</p>.<p>ಚುನಾವಣಾಧಿಕಾರಿಯಾಗಿ ಜಿತೇಂದ್ರ ಕಾರ್ಯನಿರ್ವಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ</strong>: ತಾಲ್ಲೂಕಿನ ಚಿಟ್ಟೆನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಆಗಿದ್ದಾರೆ.</p>.<p>12 ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 10 ಮಂದಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಬೆಂಬಲಿತ ಒಬ್ಬರು ಮಾತ್ರ ಆಯ್ಕೆಯಾಗುವ ಮೂಲಕ ಹೀನಾಯವಾಗಿ ಸೋಲನುಭವಿಸಿದ್ದರೆ, ಸ್ವತಂತ್ರವಾಗಿ ಸ್ಪರ್ಧಿಸಿದ್ದ ಒಬ್ಬರು ಗೆಲುವು ಸಾಧಿಸಿದ್ದಾರೆ.</p>.<p><strong>ಜೆಡಿಎಸ್ ಬೆಂಬಲಿತ ನಿರ್ದೇಶಕರು</strong>: ಸಿ. ಎನ್. ರವಿ, ದಿನೇಶ್, ಆಶಾ, ಸ್ವಾಮಿಗೌಡ, ಜಯರಾಮ,ಎಚ್. ಕೆ. ತಮ್ಮೇಗೌಡ, ಜಿ.ಎಸ್. ನಾಗರಾಜ, ನಾಗು, ಎಚ್. ಟಿ.ಜಗದೀಶ್ ಆಯ್ಕೆಯಾಗಿದ್ದಾರೆ. ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಹಂಚಿ ಸಂಭ್ರಮಿಸಿದರು.</p>.<p>ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಬಿ. ಎಸ್. ರಾಮಚಂದ್ರ , ಪ್ರಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ್ ಗೆಲುವು ಸಾಧಿಸಿದ್ದಾರೆ.</p>.<p>ಚುನಾವಣಾಧಿಕಾರಿಯಾಗಿ ಜಿತೇಂದ್ರ ಕಾರ್ಯನಿರ್ವಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>