<p><strong>ಪಿರಿಯಾಪಟ್ಟಣ</strong>: ‘ಮಕ್ಕಳಲ್ಲಿರುವ ವಿಶೇಷ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರ ಸಹಕಾರಿಯಾಗಲಿದ್ದು ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಶಿಬಿರಗಳು ಗ್ರಾಮೀಣ ಪ್ರದೇಶಗಳಲ್ಲಿಯೂ ಆಯೋಜನೆಯಾಗುತ್ತಿರುವುದು ಉತ್ತಮ ಬೆಳವಣಿಗೆ’ ಎಂದು ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ತಿಳಿಸಿದರು.</p>.<p>ಪಟ್ಟಣದ ನಕ್ಷತ್ರ ಡ್ಯಾನ್ಸ್ ಸ್ಟುಡಿಯೊ ಡಿ.ದೇವರಾಜು ಅರಸು ಭವನದಲ್ಲಿ ಆಯೋಜಿಸಿದ್ದ 4ನೇ ವರ್ಷದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಆರ್.ನಿರೂಪ ಮಾತನಾಡಿ, ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರಿಂದ ಪ್ರತಿಭೆ ಪ್ರಕಟಿಸಿ, ಸಾಧನೆಯ ಗುರಿ ತಲುಪಲು ಸಹಕಾರಿಯಾಗಲಿದೆ ಎಂದರು.</p>.<p>ಮುಖ್ಯ ಶಿಕ್ಷಕ ಲಕ್ಕಣ್ಣ ಮಾತನಾಡಿ, ಮಕ್ಕಳು ಚಿಕ್ಕ ವಯಸ್ಸಿನಿಂದಲೇ ಉತ್ತಮ ಸಂಸ್ಕಾರ ಅಳವಡಿಸಿಕೊಂಡರೆ, ಅವರ ಬೌದ್ಧಿಕ ಶಕ್ತಿ ಪ್ರಗತಿಯಾಗಲಿದೆ. ಮೊಬೈಲ್ ಮತ್ತು ಟಿವಿಗಳನ್ನು ಉತ್ತಮ ಕಲಿಕೆಗಾಗಿ ಬಳಸಿದಾಗ ಜ್ಞಾನಾರ್ಜನೆ ಹೆಚ್ಚಿಸಿಕೊಳ್ಳಬಹುದು ಎಂದರು.</p>.<p> ಸ್ಟುಡಿಯೋ ಅಧ್ಯಕ್ಷೆ ಭವ್ಯ ಮಂಜುನಾಥ್ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಇಲ್ಲಿ ಬೇಸಿಗೆ ಶಿಬಿರ ಆಯೋಜಿಸಿ, ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.</p>.<p>ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು, ಸ್ವಾಗತ ಗೀತೆಗೆ ಚಿತ್ರಕಲಾ ಶಿಕ್ಷಕ ಪವನ್ ಲಕ್ಕಣ್ಣ ಬಿಡಿಸಿದ ಗಣೇಶನ ಚಿತ್ರ ಎಲ್ಲರ ಮೆಚ್ಚುಗೆ ಪಾತ್ರವಾಯಿತು. ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.</p>.<p>ಪುರಸಭಾ ಸದಸ್ಯ ರಾಜೇಶ್, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಮಂಜುನಾಥ್, ಮುಖಂಡರಾದ ಸಚಿನ್, ಮುಕುಂದ, ಕೃಷ್ಣಪ್ಪ, ಮಹೇಶ್, ನೃತ್ಯ ಸಂಯೋಜಕ ಪ್ರಸನ್ನ, ಸಂಸ್ಥೆಯ ಶ್ರೇಯ, ಚಂದನ, ಕಾರುಣ್ಯ, ಚೈತ್ರ, ವಾಸವಿ, ತುಳಸಿ, ಪ್ರಾರ್ಥನಾ ಹಾಗೂ ಪೋಷಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ</strong>: ‘ಮಕ್ಕಳಲ್ಲಿರುವ ವಿಶೇಷ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರ ಸಹಕಾರಿಯಾಗಲಿದ್ದು ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಶಿಬಿರಗಳು ಗ್ರಾಮೀಣ ಪ್ರದೇಶಗಳಲ್ಲಿಯೂ ಆಯೋಜನೆಯಾಗುತ್ತಿರುವುದು ಉತ್ತಮ ಬೆಳವಣಿಗೆ’ ಎಂದು ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ತಿಳಿಸಿದರು.</p>.<p>ಪಟ್ಟಣದ ನಕ್ಷತ್ರ ಡ್ಯಾನ್ಸ್ ಸ್ಟುಡಿಯೊ ಡಿ.ದೇವರಾಜು ಅರಸು ಭವನದಲ್ಲಿ ಆಯೋಜಿಸಿದ್ದ 4ನೇ ವರ್ಷದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಆರ್.ನಿರೂಪ ಮಾತನಾಡಿ, ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರಿಂದ ಪ್ರತಿಭೆ ಪ್ರಕಟಿಸಿ, ಸಾಧನೆಯ ಗುರಿ ತಲುಪಲು ಸಹಕಾರಿಯಾಗಲಿದೆ ಎಂದರು.</p>.<p>ಮುಖ್ಯ ಶಿಕ್ಷಕ ಲಕ್ಕಣ್ಣ ಮಾತನಾಡಿ, ಮಕ್ಕಳು ಚಿಕ್ಕ ವಯಸ್ಸಿನಿಂದಲೇ ಉತ್ತಮ ಸಂಸ್ಕಾರ ಅಳವಡಿಸಿಕೊಂಡರೆ, ಅವರ ಬೌದ್ಧಿಕ ಶಕ್ತಿ ಪ್ರಗತಿಯಾಗಲಿದೆ. ಮೊಬೈಲ್ ಮತ್ತು ಟಿವಿಗಳನ್ನು ಉತ್ತಮ ಕಲಿಕೆಗಾಗಿ ಬಳಸಿದಾಗ ಜ್ಞಾನಾರ್ಜನೆ ಹೆಚ್ಚಿಸಿಕೊಳ್ಳಬಹುದು ಎಂದರು.</p>.<p> ಸ್ಟುಡಿಯೋ ಅಧ್ಯಕ್ಷೆ ಭವ್ಯ ಮಂಜುನಾಥ್ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಇಲ್ಲಿ ಬೇಸಿಗೆ ಶಿಬಿರ ಆಯೋಜಿಸಿ, ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.</p>.<p>ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು, ಸ್ವಾಗತ ಗೀತೆಗೆ ಚಿತ್ರಕಲಾ ಶಿಕ್ಷಕ ಪವನ್ ಲಕ್ಕಣ್ಣ ಬಿಡಿಸಿದ ಗಣೇಶನ ಚಿತ್ರ ಎಲ್ಲರ ಮೆಚ್ಚುಗೆ ಪಾತ್ರವಾಯಿತು. ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.</p>.<p>ಪುರಸಭಾ ಸದಸ್ಯ ರಾಜೇಶ್, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಮಂಜುನಾಥ್, ಮುಖಂಡರಾದ ಸಚಿನ್, ಮುಕುಂದ, ಕೃಷ್ಣಪ್ಪ, ಮಹೇಶ್, ನೃತ್ಯ ಸಂಯೋಜಕ ಪ್ರಸನ್ನ, ಸಂಸ್ಥೆಯ ಶ್ರೇಯ, ಚಂದನ, ಕಾರುಣ್ಯ, ಚೈತ್ರ, ವಾಸವಿ, ತುಳಸಿ, ಪ್ರಾರ್ಥನಾ ಹಾಗೂ ಪೋಷಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>