<p><strong>ಪಿರಿಯಾಪಟ್ಟಣ:</strong> ’ನಮ್ಮ ದೇಶ ಧರ್ಮ ಸಹಿಷ್ಣತೆ, ಸಹಬಾಳ್ವೆ, ನಿಸ್ವಾರ್ಥ ಸೇವೆಗೆ ಹೆಸರುವಾಸಿಯಾಗಿದೆ’ ಎಂದು ಶ್ರೀರಂಗಪಟ್ಟಣ ಬೇಬಿ ಮಠದ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದಲ್ಲಿ ಈಚೆಗೆ ಹಿಂದೂ ಸಮಾಜೋತ್ಸವ ಸಮಿತಿಯಿಂದ ಏರ್ಪಡಿಸಿದ್ದ ಹಿಂದೂ ಸಮಾಜೋತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಮುಸ್ಲಿಮರಿಗೆ ಮತ್ತು ಕ್ರೈಸ್ತರಿಗೆ ನೋವಾದರೆ ದುಃಖ ಪಡಲು ಬೇಕಾದಷ್ಟು ದೇಶಗಳಿವೆ, ಆದರೆ ಹಿಂದೂಗಳಿಗೆ ಇರುವುದೊಂದೆ ಭಾರತ ಎನ್ನುವುದನ್ನು ಸಮಸ್ತ ಹಿಂದೂಗಳು ಮನಗಾಣಬೇಕು’ ಎಂದರು.</p>.<p>‘ವಿಜ್ಞಾನದ ಸವಾಲಿಗೂ ನಿಲುಕದ ದೇಶದಲ್ಲಿ ಸನಾತನ ಧರ್ಮ ಪರಿಪಾಲನೆಯಿಂದ ನಮ್ಮ ಸಂಸ್ಕೃತಿ ಉಳಿಯಲಿದೆ ಎಂಬುದನ್ನು ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ. ಇಲ್ಲದಿದ್ದಲ್ಲಿ ಮಕ್ಕಳು ಸಂಸ್ಕಾರ ಹೀನರಾಗಿ ಅಧರ್ಮದ ಕೆಲಸ ಮಾಡುವ ಸಾಧ್ಯತೆ ಇದೆ’ ಎಂದು ಎಚ್ಚರಿಸಿದರು.</p>.<p>‘ಸಂಸ್ಕಾರವಿಲ್ಲದ ಶಿಕ್ಷಣದಿಂದ ಯಾವುದೇ ಪ್ರಯೋಜನವಿಲ್ಲ. ಕಾನ್ವೆಂಟ್ ಸಂಸ್ಕೃತಿ ಬೆಳೆಸುವ ಬದಲಿಗೆ ಗುರು ಹಿರಿಯರಿಗೆ ಗೌರವಿಸುವ, ತಂದೆ ತಾಯಿಯನ್ನು ಪೂಜಿಸುವ ಸಂಸ್ಕೃತಿ ಬೆಳೆಸುವ ಅಗತ್ಯವಿದೆ’ ಎಂದು ತಿಳಿಸಿದರು.</p>.<p>ಆರ್ಎಸ್ಎಸ್ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕ ಗುರುಪ್ರಸಾದ್, ಪಂಚ ಪರಿವರ್ತನೆಯಿಂದ ಮಾತ್ರ ದೇಶದ ಅಭಿವೃದ್ಧಿ ಹಾಗೂ ಹಿಂದೂ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.</p>.<p>ಪ್ರತಿಯೊಬ್ಬರು ಜಾತಿ ಭೇದ ಎಲ್ಲವನ್ನು ಮರೆತು ಸಾಮರಸ್ಯದಿಂದ ಇರಬೇಕು. ವಿಶ್ವ ಗುರುವಾಗಿ ಮುನ್ನುಗ್ಗುತ್ತಿರುವ ದೇಶಕ್ಕೆ ನಮ್ಮದೇ ಕೊಡುಗೆಯನ್ನು ಭಾರತೀಯರು ನೀಡಬೇಕು ಎಂದರು.</p>.<p>ಸಮಾರಂಭಕ್ಕೂ ಮೊದಲು ಪಟ್ಟಣದ ಕನ್ನಂಬಾಡಿಯಮ್ಮ ದೇವಾಲಯದಿಂದ ಭಾರತ ಮಾತೆಯ ಭಾವಚಿತ್ರದೊಂದಿಗೆ ಹನುಮನ ವಿಗ್ರಹದ ಭವ್ಯ ಮೆರವಣಿಗೆ ನಡೆಸಲಾಯಿತು.</p>.<p>ಮೆರವಣಿಗೆಯಲ್ಲಿ ಚಂಡಮದ್ದಳೆ, ನಗಾರಿ, ಡೊಳ್ಳು ಕುಣಿತ, ನಂದಿದ್ವಜ ಕುಣಿತ, ಪುಟ್ಟ ಮಕ್ಕಳಿಂದ ಕೃಷ್ಣ ರಾಧೆ ಗೋಪಿಕೆಯರ ವೇಷ ಭೂಷಣ, ಕಳಸ ಹೊತ್ತ ಮಹಿಳೆಯರು ಮೆರವಣಿಗೆಯಲ್ಲಿ ಸಾಗಿದರು.</p>.<p>ಆದಿಚುಂಚನಗಿರಿ ಮೈಸೂರು ಶಾಖೆ ಮಠದ ಸೋಮೇಶ್ವರನಾಥ ಸ್ವಾಮೀಜಿ, ರಾವಂದೂರು ಮುರಘಾ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಮಾಜಿ ಶಾಸಕ ಕೆ.ಮಹದೇವ್, ಮಂಜಳಾರಾಜ್, ಹಿಂದೂ ಸಮಾಜ ಸಮಿತಿಯ ಸಂಚಾಲಕ ಮಂಜು ಕೋಗಿಲವಾಡಿ, ಅಧ್ಯಕ್ಷ ಎಂ.ಸಿ.ಹರೀಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ:</strong> ’ನಮ್ಮ ದೇಶ ಧರ್ಮ ಸಹಿಷ್ಣತೆ, ಸಹಬಾಳ್ವೆ, ನಿಸ್ವಾರ್ಥ ಸೇವೆಗೆ ಹೆಸರುವಾಸಿಯಾಗಿದೆ’ ಎಂದು ಶ್ರೀರಂಗಪಟ್ಟಣ ಬೇಬಿ ಮಠದ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದಲ್ಲಿ ಈಚೆಗೆ ಹಿಂದೂ ಸಮಾಜೋತ್ಸವ ಸಮಿತಿಯಿಂದ ಏರ್ಪಡಿಸಿದ್ದ ಹಿಂದೂ ಸಮಾಜೋತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಮುಸ್ಲಿಮರಿಗೆ ಮತ್ತು ಕ್ರೈಸ್ತರಿಗೆ ನೋವಾದರೆ ದುಃಖ ಪಡಲು ಬೇಕಾದಷ್ಟು ದೇಶಗಳಿವೆ, ಆದರೆ ಹಿಂದೂಗಳಿಗೆ ಇರುವುದೊಂದೆ ಭಾರತ ಎನ್ನುವುದನ್ನು ಸಮಸ್ತ ಹಿಂದೂಗಳು ಮನಗಾಣಬೇಕು’ ಎಂದರು.</p>.<p>‘ವಿಜ್ಞಾನದ ಸವಾಲಿಗೂ ನಿಲುಕದ ದೇಶದಲ್ಲಿ ಸನಾತನ ಧರ್ಮ ಪರಿಪಾಲನೆಯಿಂದ ನಮ್ಮ ಸಂಸ್ಕೃತಿ ಉಳಿಯಲಿದೆ ಎಂಬುದನ್ನು ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ. ಇಲ್ಲದಿದ್ದಲ್ಲಿ ಮಕ್ಕಳು ಸಂಸ್ಕಾರ ಹೀನರಾಗಿ ಅಧರ್ಮದ ಕೆಲಸ ಮಾಡುವ ಸಾಧ್ಯತೆ ಇದೆ’ ಎಂದು ಎಚ್ಚರಿಸಿದರು.</p>.<p>‘ಸಂಸ್ಕಾರವಿಲ್ಲದ ಶಿಕ್ಷಣದಿಂದ ಯಾವುದೇ ಪ್ರಯೋಜನವಿಲ್ಲ. ಕಾನ್ವೆಂಟ್ ಸಂಸ್ಕೃತಿ ಬೆಳೆಸುವ ಬದಲಿಗೆ ಗುರು ಹಿರಿಯರಿಗೆ ಗೌರವಿಸುವ, ತಂದೆ ತಾಯಿಯನ್ನು ಪೂಜಿಸುವ ಸಂಸ್ಕೃತಿ ಬೆಳೆಸುವ ಅಗತ್ಯವಿದೆ’ ಎಂದು ತಿಳಿಸಿದರು.</p>.<p>ಆರ್ಎಸ್ಎಸ್ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕ ಗುರುಪ್ರಸಾದ್, ಪಂಚ ಪರಿವರ್ತನೆಯಿಂದ ಮಾತ್ರ ದೇಶದ ಅಭಿವೃದ್ಧಿ ಹಾಗೂ ಹಿಂದೂ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.</p>.<p>ಪ್ರತಿಯೊಬ್ಬರು ಜಾತಿ ಭೇದ ಎಲ್ಲವನ್ನು ಮರೆತು ಸಾಮರಸ್ಯದಿಂದ ಇರಬೇಕು. ವಿಶ್ವ ಗುರುವಾಗಿ ಮುನ್ನುಗ್ಗುತ್ತಿರುವ ದೇಶಕ್ಕೆ ನಮ್ಮದೇ ಕೊಡುಗೆಯನ್ನು ಭಾರತೀಯರು ನೀಡಬೇಕು ಎಂದರು.</p>.<p>ಸಮಾರಂಭಕ್ಕೂ ಮೊದಲು ಪಟ್ಟಣದ ಕನ್ನಂಬಾಡಿಯಮ್ಮ ದೇವಾಲಯದಿಂದ ಭಾರತ ಮಾತೆಯ ಭಾವಚಿತ್ರದೊಂದಿಗೆ ಹನುಮನ ವಿಗ್ರಹದ ಭವ್ಯ ಮೆರವಣಿಗೆ ನಡೆಸಲಾಯಿತು.</p>.<p>ಮೆರವಣಿಗೆಯಲ್ಲಿ ಚಂಡಮದ್ದಳೆ, ನಗಾರಿ, ಡೊಳ್ಳು ಕುಣಿತ, ನಂದಿದ್ವಜ ಕುಣಿತ, ಪುಟ್ಟ ಮಕ್ಕಳಿಂದ ಕೃಷ್ಣ ರಾಧೆ ಗೋಪಿಕೆಯರ ವೇಷ ಭೂಷಣ, ಕಳಸ ಹೊತ್ತ ಮಹಿಳೆಯರು ಮೆರವಣಿಗೆಯಲ್ಲಿ ಸಾಗಿದರು.</p>.<p>ಆದಿಚುಂಚನಗಿರಿ ಮೈಸೂರು ಶಾಖೆ ಮಠದ ಸೋಮೇಶ್ವರನಾಥ ಸ್ವಾಮೀಜಿ, ರಾವಂದೂರು ಮುರಘಾ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಮಾಜಿ ಶಾಸಕ ಕೆ.ಮಹದೇವ್, ಮಂಜಳಾರಾಜ್, ಹಿಂದೂ ಸಮಾಜ ಸಮಿತಿಯ ಸಂಚಾಲಕ ಮಂಜು ಕೋಗಿಲವಾಡಿ, ಅಧ್ಯಕ್ಷ ಎಂ.ಸಿ.ಹರೀಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>