<p>ಪಿರಿಯಾಪಟ್ಟಣ: ತಾಲ್ಲೂಕಿನ ದೊರೆಕೆರೆ ಗ್ರಾಮದ ಮನೆಯ ಒಪ್ಪಾರಿನಲ್ಲಿ ಕಟ್ಟಿ ಹಾಕಿದ್ದ ಉಳುಮೆ ಮಾಡುವ ಒಂದು ಜೊತೆ ಎತ್ತುಗಳನ್ನು ಗುರುವಾರ ರಾತ್ರಿ ಕಳವು ಮಾಡಲಾಗಿದೆ.</p>.<p>ತಾಲ್ಲೂಕಿನ ದೊರೆಕೆರೆ ಗ್ರಾಮದ ರಾಮೇಗೌಡ ಎತ್ತುಗಳನ್ನು ಕಳೆದುಕೊಂಡಿರುವ ರೈತ. ಗುರುವಾರ ಬೆಳಿಗ್ಗೆ ಎಂದಿನಂತೆ ತಮ್ಮ ಜಮೀನಿನಲ್ಲಿ ಉಳುಮೆ ಮಾಡಿ ಸಂಜೆ ಮನೆ ಮುಂದೆ ಒಪ್ಪಾರಿನಲ್ಲಿ ಎರಡು ಎತ್ತುಗಳಿಗೆ ಹುಲ್ಲು ಹಾಕಿ ಕಟ್ಟಲಾಗಿತ್ತು. ತಡ ರಾತ್ರಿ 1 ಗಂಟೆ ಸಮಯದಲ್ಲಿ ನೋಡಿದಾಗ ಎತ್ತುಗಳು ಇರಲಿಲ್ಲ.</p>.<p>ಸುಮಾರು ₹ 1.5 ಲಕ್ಷ ಮೌಲ್ಯದ ಎತ್ತುಗಳಾಗಿದ್ದು, ಹುಡುಕಿಕೊಡುವಂತೆ ರಾಮೇಗೌಡ ಅವರು ಪಿರಿಯಾಪಟ್ಟಣ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪಟ್ಟಣದ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-38-1551216935</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಿರಿಯಾಪಟ್ಟಣ: ತಾಲ್ಲೂಕಿನ ದೊರೆಕೆರೆ ಗ್ರಾಮದ ಮನೆಯ ಒಪ್ಪಾರಿನಲ್ಲಿ ಕಟ್ಟಿ ಹಾಕಿದ್ದ ಉಳುಮೆ ಮಾಡುವ ಒಂದು ಜೊತೆ ಎತ್ತುಗಳನ್ನು ಗುರುವಾರ ರಾತ್ರಿ ಕಳವು ಮಾಡಲಾಗಿದೆ.</p>.<p>ತಾಲ್ಲೂಕಿನ ದೊರೆಕೆರೆ ಗ್ರಾಮದ ರಾಮೇಗೌಡ ಎತ್ತುಗಳನ್ನು ಕಳೆದುಕೊಂಡಿರುವ ರೈತ. ಗುರುವಾರ ಬೆಳಿಗ್ಗೆ ಎಂದಿನಂತೆ ತಮ್ಮ ಜಮೀನಿನಲ್ಲಿ ಉಳುಮೆ ಮಾಡಿ ಸಂಜೆ ಮನೆ ಮುಂದೆ ಒಪ್ಪಾರಿನಲ್ಲಿ ಎರಡು ಎತ್ತುಗಳಿಗೆ ಹುಲ್ಲು ಹಾಕಿ ಕಟ್ಟಲಾಗಿತ್ತು. ತಡ ರಾತ್ರಿ 1 ಗಂಟೆ ಸಮಯದಲ್ಲಿ ನೋಡಿದಾಗ ಎತ್ತುಗಳು ಇರಲಿಲ್ಲ.</p>.<p>ಸುಮಾರು ₹ 1.5 ಲಕ್ಷ ಮೌಲ್ಯದ ಎತ್ತುಗಳಾಗಿದ್ದು, ಹುಡುಕಿಕೊಡುವಂತೆ ರಾಮೇಗೌಡ ಅವರು ಪಿರಿಯಾಪಟ್ಟಣ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪಟ್ಟಣದ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-38-1551216935</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>